ಚಾಮರಾಜನಗರ

ಹುಲಿ ಅಸಹಜ ಸಾವು ಪ್ರಕರಣ : 6 ಮಂದಿ ವಶಕ್ಕೆ ಪಡೆದ ಅರಣ್ಯ ಇಲಾಖೆ

ಚಾಮರಾಜನಗರ : ಜಿಲ್ಲೆಯ ಮಲೆ ಮಹದೇಶ್ವರ ವನ್ಯಧಾಮದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳು ಅನುಮಾನಾಸ್ಪದವಾಗಿ ಮೃತಪಟ್ಟ ಘಟನಾ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಶುಕ್ರವಾರ ತಮಿಳುನಾಡು ಮೂಲದ ಓರ್ವ ಸೇರಿದಂತೆ ಆರು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಹುಲಿ ಬೇಟೆಯಾಡಿದ್ದ ಹಸುವಿಗೆ ಕ್ರಿಮಿನಾಶಕ ಹಾಕಿರುವ ಶಂಕೆಯ ಮೇರೆಗೆ ಆರು ಮಂದಿಯನ್ನು ಅರಣ್ಯ ಇಲಾಖೆಯ ವಶಕ್ಕೆ ಪಡೆದಿದೆ. ಇನ್ನೂ ಗ್ರಾಮಸ್ಥರನ್ನು ಸಹ ವಿಚಾರಣೆಗೆ ಒಳಪಡಿಸಲಾಗುತ್ತಿದ್ದು, ಘಟನಾ ಸ್ಥಳಕ್ಕೆ ಕರೆದುಕೊಂಡು ಹೋಗಿ ಮಾಹಿತಿ ಕಲೆಹಾಕುತ್ತಿದ್ದಾರೆ.

ಹುಲಿಗಳ ಮೃತದೇಹಗಳು ದೊರೆತ ಸ್ಥಳದಲ್ಲಿಯೇ ಹಸುವಿನ ಶವ ಕೂಡ ಸಿಕ್ಕಿದ್ದು, ಮೃತಪಟ್ಟಿರುವ ಹಸುವಿನ ಮಾಲೀಕ ಯಾರೆಂಬುದು ಇನ್ನೂ ಪತ್ತೆಯಾಗಿಲ್ಲ, ಪೊಲೀಸರು ಹಸು ಮಾಲೀಕನ ಪತ್ತೆ ಹಚ್ಚುವ ಕಾರ್ಯ ಚುರುಕುಗೊಳಿಸಿದ್ದು, ಸಿಡಿಯರ್ ಮತ್ತು ಟವರ್ ಲೊಕೇಶನ್ ಆಧಾರದಲ್ಲಿ ವಿಷ ಹಾಕಿದವರ ಮತ್ತು ಮಾಲೀಕನ ಪತ್ತೆಗೆ ಬಲೆ ಬೀಸಿದ್ದಾರೆ.

ಹುಲಿ ಸಾವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಈಗಾಗಲೇ ಆಶ್ವಾಸನೆ ನೀಡಿದೆ. ಮರಣೋತ್ತರ ಪರೀಕ್ಷೆ ನಡೆದಿದ್ದು, ವರದಿ ಕೈಸೇರಿದ ಬಳಿಕ ಸಾವಿಗೆ ನಿಖರ ಕಾರಣ ಏನೆಂಬುದು ತಿಳಿಯಲಿದೆ.

ಆಂದೋಲನ ಡೆಸ್ಕ್

Recent Posts

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

5 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

6 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

6 hours ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

6 hours ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

7 hours ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

16 hours ago