Unnatural Tiger Death Case: Forest Department Detains 6 Individuals
ಚಾಮರಾಜನಗರ : ಜಿಲ್ಲೆಯ ಮಲೆ ಮಹದೇಶ್ವರ ವನ್ಯಧಾಮದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳು ಅನುಮಾನಾಸ್ಪದವಾಗಿ ಮೃತಪಟ್ಟ ಘಟನಾ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಶುಕ್ರವಾರ ತಮಿಳುನಾಡು ಮೂಲದ ಓರ್ವ ಸೇರಿದಂತೆ ಆರು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಹುಲಿ ಬೇಟೆಯಾಡಿದ್ದ ಹಸುವಿಗೆ ಕ್ರಿಮಿನಾಶಕ ಹಾಕಿರುವ ಶಂಕೆಯ ಮೇರೆಗೆ ಆರು ಮಂದಿಯನ್ನು ಅರಣ್ಯ ಇಲಾಖೆಯ ವಶಕ್ಕೆ ಪಡೆದಿದೆ. ಇನ್ನೂ ಗ್ರಾಮಸ್ಥರನ್ನು ಸಹ ವಿಚಾರಣೆಗೆ ಒಳಪಡಿಸಲಾಗುತ್ತಿದ್ದು, ಘಟನಾ ಸ್ಥಳಕ್ಕೆ ಕರೆದುಕೊಂಡು ಹೋಗಿ ಮಾಹಿತಿ ಕಲೆಹಾಕುತ್ತಿದ್ದಾರೆ.
ಹುಲಿಗಳ ಮೃತದೇಹಗಳು ದೊರೆತ ಸ್ಥಳದಲ್ಲಿಯೇ ಹಸುವಿನ ಶವ ಕೂಡ ಸಿಕ್ಕಿದ್ದು, ಮೃತಪಟ್ಟಿರುವ ಹಸುವಿನ ಮಾಲೀಕ ಯಾರೆಂಬುದು ಇನ್ನೂ ಪತ್ತೆಯಾಗಿಲ್ಲ, ಪೊಲೀಸರು ಹಸು ಮಾಲೀಕನ ಪತ್ತೆ ಹಚ್ಚುವ ಕಾರ್ಯ ಚುರುಕುಗೊಳಿಸಿದ್ದು, ಸಿಡಿಯರ್ ಮತ್ತು ಟವರ್ ಲೊಕೇಶನ್ ಆಧಾರದಲ್ಲಿ ವಿಷ ಹಾಕಿದವರ ಮತ್ತು ಮಾಲೀಕನ ಪತ್ತೆಗೆ ಬಲೆ ಬೀಸಿದ್ದಾರೆ.
ಹುಲಿ ಸಾವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಈಗಾಗಲೇ ಆಶ್ವಾಸನೆ ನೀಡಿದೆ. ಮರಣೋತ್ತರ ಪರೀಕ್ಷೆ ನಡೆದಿದ್ದು, ವರದಿ ಕೈಸೇರಿದ ಬಳಿಕ ಸಾವಿಗೆ ನಿಖರ ಕಾರಣ ಏನೆಂಬುದು ತಿಳಿಯಲಿದೆ.
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪಿ.ಎಚ್.ಡಿ ಪ್ರವೇಶಾತಿ ಪಡೆದ ಸಂಶೋಧಕರುಗಳಿಗೆ ಶಿಷ್ಯ ವೇತನ ನೀಡುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ…
ಚಾಮರಾಜನಗರ: ತಾಲ್ಲೂಕಿನ ಬಾಗಳಿ ಗ್ರಾಮದ ಜಮೀನೊಂದರಲ್ಲಿ ಹುಲಿ ಪ್ರತ್ಯಕ್ಷಗೊಂಡಿದ್ದು ರೈತರಲ್ಲಿ ಆತಂಕ ಮೂಡಿಸಿದೆ. ಗ್ರಾಮದ ಪುಟ್ಟಯ್ಯ ಎಂಬವರು ಸೋಮವಾರ ಬೆಳಿಗ್ಗೆ…
ವಾಷಿಂಗ್ಟನ್ : ಅಮೆರಿಕ-ಇರಾನ್ ಸಂಸಂಘರ್ಷವನ್ನು ಕೊನೆಗೊಳಿಸಲು ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಸಾಗಣೆಯನ್ನು ಪುನಃಸ್ಥಾಪಿಸಲು ಪ್ರಾಥಮಿಕ ಒಪ್ಪಂದಕ್ಕೆ ಬಂದಿರುವುದಾಗಿ ಡೊನಾಲ್ಡ್…
ಬೆಂಗಳೂರು : ಆರ್ಎಸ್ಎಸ್ನ ಸಾಂಸ್ಥಿಕ ಮತ್ತು ಕಾನೂನುಬದ್ಧ ಸ್ಥಿತಿಗತಿ ಕುರಿತು ಸ್ಪಷ್ಟನೆ ನೀಡುವಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು…
ಮೈಸೂರು : ಪಬ್ನಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಜೀವ ದಹನವಾಗಿರುವ ಘಟನೆ ನಗರದ ದಟ್ಟಗಳ್ಳಿಯಲ್ಲಿ ನಡೆದಿದೆ. ನಗರದ ರಿಂಗ್…
ಬೆಂಗಳೂರು: ಕರ್ನಾಟಕದವರಿಗೆ, ವೋಟ್ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…