ಹನೂರು : ಜಾನುವಾರುಗಳು ಕುಡಿಯುವ ಕೆರೆಯ ನೀರಿಗೆ ಯೂರಿಯಾ ಬೆರಕೆ ಮಾಡಿದ್ದ ವಿಷಪೂರಿತ ನೀರು ಕುಡಿದು ಏಳು ಕುರಿಗಳು ಮೃತಪಟ್ಟಿರುವ ಘಟನೆ ಅರಬಗೆರೆ ಗ್ರಾಮದಲ್ಲಿ ಜರುಗಿದೆ.
ತಾಲೂಕಿನ ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡಿ.ವಿಲೇಜ್ ಗ್ರಾಮದ ಮುತ್ತುರಾಜು ಎಂಬುವರಿಗೆ ಸೇರಿದ 50 ಕುರಿಗಳನ್ನು ಅರಬಗೆರೆ ಗ್ರಾಮದಲ್ಲಿ ಗುತ್ತಿಗೆಗೆ ಮೇಯಿಸಲು ಬಿಟ್ಟಿದ್ದರು. ಸೋಮವಾರ ಮಧ್ಯಾಹ್ನ ಅರಬಗೆರೆ ಗ್ರಾಮದ ಬೂದಿಕೆರೆಯಲ್ಲಿ ನೀರಿಗೆ ಕಿಡಿಗೇಡಿಗಳು ಯೂರಿಯ ಬೆರೆಕೆ ಮಾಡಿದ್ದಾರೆ. ಮೇವು ಮೇಯ್ದು ದಾಹ ಇಂಗಿಸಿಕೊಳ್ಳಲು ಕೆರೆಗೆ ಹೋಗಿದ್ದ ಕುರಿಗಳು ವಿಷಪೂರಿತ ನೀರು ಕುಡಿದು ಏಳು ಕುರಿಗಳು ಸ್ಥಳದಲ್ಲಿಯೇ ಮೃತಪಟ್ಟಿವೆ.
ಉಳಿದಂತೆ ಎರಡು ಕುರಿಗಳು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿವೆ.
ವಿಚಾರ ತಿಳಿಯುತ್ತಿದ್ದಂತೆ ಪಶುವೈದ್ಯಾಧಿಕಾರಿ ಡಾ. ಸಿದ್ದರಾಜು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪರಿಹಾರಕ್ಕೆ ಆಗ್ರಹ
ಕಳೆದ ಹಲವಾರು ವರ್ಷಗಳಿಂದ ಕೌದಳ್ಳಿ ಜಿಲ್ಲಾ ಪಂಚಾಯಿತಿ ಹೋಬಳಿ ವ್ಯಾಪ್ತಿಯಲ್ಲಿ ಸಮರ್ಪಕ ಮಳೆಯಾಗದೆ ಅಂತರ್ಜಲ ಮಟ್ಟ ಕುಸಿದು ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಇದರಿಂದ ವ್ಯವಸಾಯ ಮಾಡಲು ಸಾಧ್ಯವಾಗದೆ ರೈತರು ಹೈನುಗಾರಿಕೆಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಇದೀಗ ಕಿಡಿಗೇಡಿಗಳ ಕೃತ್ಯಕ್ಕೆ ರೈತ ಮುತ್ತುರಾಜ್ ಅವರಿಗೆ ಸೇರಿದ ಏಳು ಕುರಿಗಳು ಮೃತಪಟ್ಟಿದೆ. ರೈತನಿಗೆ ಸುಮಾರು ಒಂದು ಲಕ್ಷದ ನಲವತ್ತು ಸಾವಿರ ನಷ್ಟ ಉಂಟಾಗಿದ್ದು ಸರ್ಕಾರದ ವತಿಯಿಂದ ಸೂಕ್ತ ಪರಿಹಾರ ಕೊಡಿಸುವಂತೆ ಮನವಿ ಮಾಡಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…