ಚಾಮರಾಜನಗರ

ಕೆರೆಯ ನೀರಿಗೆ ಯೂರಿಯಾ ಬೆರಕೆ ; ನೀರು ಕುಡಿದು 7 ಕುರಿಗಳು ಸಾವು

ಹನೂರು : ಜಾನುವಾರುಗಳು ಕುಡಿಯುವ ಕೆರೆಯ ನೀರಿಗೆ ಯೂರಿಯಾ ಬೆರಕೆ ಮಾಡಿದ್ದ ವಿಷಪೂರಿತ ನೀರು ಕುಡಿದು ಏಳು ಕುರಿಗಳು ಮೃತಪಟ್ಟಿರುವ ಘಟನೆ ಅರಬಗೆರೆ ಗ್ರಾಮದಲ್ಲಿ ಜರುಗಿದೆ.

ತಾಲೂಕಿನ ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡಿ.ವಿಲೇಜ್ ಗ್ರಾಮದ ಮುತ್ತುರಾಜು ಎಂಬುವರಿಗೆ ಸೇರಿದ 50 ಕುರಿಗಳನ್ನು ಅರಬಗೆರೆ ಗ್ರಾಮದಲ್ಲಿ ಗುತ್ತಿಗೆಗೆ ಮೇಯಿಸಲು ಬಿಟ್ಟಿದ್ದರು. ಸೋಮವಾರ ಮಧ್ಯಾಹ್ನ ಅರಬಗೆರೆ ಗ್ರಾಮದ ಬೂದಿಕೆರೆಯಲ್ಲಿ ನೀರಿಗೆ ಕಿಡಿಗೇಡಿಗಳು ಯೂರಿಯ ಬೆರೆಕೆ ಮಾಡಿದ್ದಾರೆ. ಮೇವು ಮೇಯ್ದು ದಾಹ ಇಂಗಿಸಿಕೊಳ್ಳಲು ಕೆರೆಗೆ ಹೋಗಿದ್ದ ಕುರಿಗಳು ವಿಷಪೂರಿತ ನೀರು ಕುಡಿದು ಏಳು ಕುರಿಗಳು ಸ್ಥಳದಲ್ಲಿಯೇ ಮೃತಪಟ್ಟಿವೆ.
ಉಳಿದಂತೆ ಎರಡು ಕುರಿಗಳು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿವೆ.

ವಿಚಾರ ತಿಳಿಯುತ್ತಿದ್ದಂತೆ ಪಶುವೈದ್ಯಾಧಿಕಾರಿ ಡಾ. ಸಿದ್ದರಾಜು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪರಿಹಾರಕ್ಕೆ ಆಗ್ರಹ
ಕಳೆದ ಹಲವಾರು ವರ್ಷಗಳಿಂದ ಕೌದಳ್ಳಿ ಜಿಲ್ಲಾ ಪಂಚಾಯಿತಿ ಹೋಬಳಿ ವ್ಯಾಪ್ತಿಯಲ್ಲಿ ಸಮರ್ಪಕ ಮಳೆಯಾಗದೆ ಅಂತರ್ಜಲ ಮಟ್ಟ ಕುಸಿದು ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಇದರಿಂದ ವ್ಯವಸಾಯ ಮಾಡಲು ಸಾಧ್ಯವಾಗದೆ ರೈತರು ಹೈನುಗಾರಿಕೆಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಇದೀಗ ಕಿಡಿಗೇಡಿಗಳ ಕೃತ್ಯಕ್ಕೆ ರೈತ ಮುತ್ತುರಾಜ್ ಅವರಿಗೆ ಸೇರಿದ ಏಳು ಕುರಿಗಳು ಮೃತಪಟ್ಟಿದೆ. ರೈತನಿಗೆ ಸುಮಾರು ಒಂದು ಲಕ್ಷದ ನಲವತ್ತು ಸಾವಿರ ನಷ್ಟ ಉಂಟಾಗಿದ್ದು ಸರ್ಕಾರದ ವತಿಯಿಂದ ಸೂಕ್ತ ಪರಿಹಾರ ಕೊಡಿಸುವಂತೆ ಮನವಿ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತಾ ಲೋಪ ಪ್ರಕರಣ | ಸಿಬ್ಬಂದಿಗಳಿಂದಲೇ ಕೃತ್ಯ ; ಇಬ್ಬರ ಬಂಧನ

ಬೆಂಗಳೂರು : ಐಪಿಎಲ್ ಪಂದ್ಯಗಳ ವೇಳೆ ಭದ್ರತೆ ನಿರ್ವಹಣೆಗಾಗಿ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳ ಸಂಪರ್ಕ ಕಡಿತಗೊಳಿಸುವ ಮೂಲಕ…

17 mins ago

ಮೂರು ದಿನಗಳೊಳಗೆ ಒಪ್ಪಂದಕ್ಕೆ ಬನ್ನಿ : ಇರಾನ್‌ಗೆ ಟ್ರಂಪ್‌ ವಾರ್ನಿಂಗ್‌

ವಾಷಿಂಗ್ಟನ್‌ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ಹೊಸ ಎಚ್ಚರಿಕೆ ನೀಡಿದ್ದು, ಕದನ ವಿರಾಮವನ್ನು ಒಪ್ಪಿಕೊಳ್ಳಲು ಮೂರು…

39 mins ago

KCET 2026 | ಸಿಇಟಿ ಪರೀಕ್ಷೆಯೆ ವಿಷಯವಾರು ಕೀ ಉತ್ತರ ಪ್ರಕಟಿಸಿದ ಕೆಇಎ

ಬೆಂಗಳೂರು : ಪ್ರಸಕ್ತ-2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯ ಎಲ್ಲ ವಿಷಯಗಳ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ…

2 hours ago

ಹೊರ್ಮುಜ್‌ ಬಿಕ್ಕಟ್ಟು : ಸಂಘರ್ಷ ಶಮನಕ್ಕೆ ಇರಾನ್‌ ಹೊಸ ದಾಳ

ಟೆಹ್ರಾನ್‌ : ಅಮೆರಿಕವು ಶಾಂತಿ ಮಾತುಕತೆಯನ್ನು ರದ್ದುಗೊಳಿಸಿದ ಬೆನ್ನಲ್ಲೇ ಇರಾನ್ ಸಂಘರ್ಷ ಶಮನಕ್ಕೆ ಹೊಸ ದಾಳ ಉರುಳಿಸಿದೆ. ಪಾಕಿಸ್ತಾನದ ಸಂಧಾನಕಾರರ…

2 hours ago

ಹನೂರು| ಮಹಿಳಾ ಮೀಸಲಾತಿ ಮಸೂದೆ ವಿರೋಧಿಸಿದ ಕಾಂಗ್ರೆಸ್‌ ಮತ್ತು ಮಿತ್ರಪಕ್ಷಗಳ ವಿರುದ್ಧ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೇಂದ್ರ ಸರ್ಕಾರ ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಜಾರಿಗೆ ತರಲು ಮುಂದಾದ…

3 hours ago

ರಾಜ್ಯದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಶೀಘ್ರವೇ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ರಾಜ್ಯದಲ್ಲಿ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಶೀಘ್ರವೇ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ…

3 hours ago