Death of 5 Tigers; Forest Department Needs to Wake Up
ಚಾಮರಾಜನಗರ: ಮಲೆ ಮಹದೇಶ್ವರ ವನ್ಯಧಾಮದಲ್ಲಿ ನಡೆದ 5 ಹುಲಿಗಳ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಲಿಗಳ ಸಾವಿಗೆ ಕಾರ್ಬೋಫುರಾನ್ ಕೀಟನಾಶಕ ಬಳಕೆಯಾಗಿರುವುದು ದೃಢಪಟ್ಟಿದೆ.
ಈ ಬಗ್ಗೆ ಮಾತನಾಡಿರುವ ಸಿಸಿಎಫ್ ಹೀರಾಲಾಲ್ ಅವರು, ಹುಲಿ ಸಾಯಿಸಲು ಯಾವ ಕೀಟನಾಶಕ ಬಳಸಲಾಗಿದೆ ಎಂದು ತಿಳಿಯಲು ಪ್ರಯೋಗಾಲಯಕ್ಕೆ ಹುಲಿಯ ಅಂಗಾಂಗಗಳನ್ನು ರವಾನೆ ಮಾಡಲಾಗಿತ್ತು. ಇದೀಗ ಲ್ಯಾಬ್ ವರದಿ ಕೂಡ ಸಿಕ್ಕಿದ್ದು, ಕಾರ್ಬೋಫುರಾನ್ ಎಂಬ ಕೀಟನಾಶಕವನ್ನು ಹಸುವಿಗೆ ಸಿಂಪಡಿಸಿದ್ದಾರೆಂದು ಗೊತ್ತಾಗಿದೆ ಎಂದರು.
ಈ ಕೀಟನಾಶಕವು ವನ್ಯಪ್ರಾಣಿಗಳು, ಪಕ್ಷಿಗಳ ನರಮಂಡಲದ ಮೇಲೆ ತುಂಬಾನೇ ದುಷ್ಪರಿಣಾಮ ಬೀರುತ್ತವೆ ಎಂದು ತಿಳಿದುಬಂದಿದೆ ಎಂದು ಮಾಹಿತಿ ನೀಡಿದರು.
ಐದು ಹುಲಿಗಳು ಕೂಡ ವಿಷ ಪ್ರಾಶನದಿಂದಲೇ ಸಾವನ್ನಪ್ಪಿವೆ ಎಂಬುದು ಲ್ಯಾಬ್ ವರದಿಯಿಂದ ಗೊತ್ತಾಗಿದೆ. ಇನ್ನೆರಡು ದಿನಗಳಲ್ಲಿ ಉನ್ನತ ಮಟ್ಟದ ತನಿಖಾ ತಂಡ ಅರಣ್ಯ ಸಚಿವರಿಗೆ ವರದಿ ಸಲ್ಲಿಸಲಿದ್ದು, ಮತ್ತಷ್ಟು ಸ್ಫೋಟಕ ವಿಚಾರ ಬಹಿರಂಗವಾಗುವ ಸಾಧ್ಯತೆಯಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…