Death of 5 Tigers; Forest Department Needs to Wake Up
ಚಾಮರಾಜನಗರ: ಮಲೆ ಮಹದೇಶ್ವರ ವನ್ಯಧಾಮದಲ್ಲಿ ನಡೆದ 5 ಹುಲಿಗಳ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಲಿಗಳ ಸಾವಿಗೆ ಕಾರ್ಬೋಫುರಾನ್ ಕೀಟನಾಶಕ ಬಳಕೆಯಾಗಿರುವುದು ದೃಢಪಟ್ಟಿದೆ.
ಈ ಬಗ್ಗೆ ಮಾತನಾಡಿರುವ ಸಿಸಿಎಫ್ ಹೀರಾಲಾಲ್ ಅವರು, ಹುಲಿ ಸಾಯಿಸಲು ಯಾವ ಕೀಟನಾಶಕ ಬಳಸಲಾಗಿದೆ ಎಂದು ತಿಳಿಯಲು ಪ್ರಯೋಗಾಲಯಕ್ಕೆ ಹುಲಿಯ ಅಂಗಾಂಗಗಳನ್ನು ರವಾನೆ ಮಾಡಲಾಗಿತ್ತು. ಇದೀಗ ಲ್ಯಾಬ್ ವರದಿ ಕೂಡ ಸಿಕ್ಕಿದ್ದು, ಕಾರ್ಬೋಫುರಾನ್ ಎಂಬ ಕೀಟನಾಶಕವನ್ನು ಹಸುವಿಗೆ ಸಿಂಪಡಿಸಿದ್ದಾರೆಂದು ಗೊತ್ತಾಗಿದೆ ಎಂದರು.
ಈ ಕೀಟನಾಶಕವು ವನ್ಯಪ್ರಾಣಿಗಳು, ಪಕ್ಷಿಗಳ ನರಮಂಡಲದ ಮೇಲೆ ತುಂಬಾನೇ ದುಷ್ಪರಿಣಾಮ ಬೀರುತ್ತವೆ ಎಂದು ತಿಳಿದುಬಂದಿದೆ ಎಂದು ಮಾಹಿತಿ ನೀಡಿದರು.
ಐದು ಹುಲಿಗಳು ಕೂಡ ವಿಷ ಪ್ರಾಶನದಿಂದಲೇ ಸಾವನ್ನಪ್ಪಿವೆ ಎಂಬುದು ಲ್ಯಾಬ್ ವರದಿಯಿಂದ ಗೊತ್ತಾಗಿದೆ. ಇನ್ನೆರಡು ದಿನಗಳಲ್ಲಿ ಉನ್ನತ ಮಟ್ಟದ ತನಿಖಾ ತಂಡ ಅರಣ್ಯ ಸಚಿವರಿಗೆ ವರದಿ ಸಲ್ಲಿಸಲಿದ್ದು, ಮತ್ತಷ್ಟು ಸ್ಫೋಟಕ ವಿಚಾರ ಬಹಿರಂಗವಾಗುವ ಸಾಧ್ಯತೆಯಿದೆ.
ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…
ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…
ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…