ಚಾಮರಾಜನಗರ : ರಾಮಮಂದಿರ ಕಟ್ಟುವುದಕ್ಕಿಂತ ರಾಮರಾಜ್ಯ ನಿರ್ಮಾಣ ಆಗಬೇಕು ಎಂದು ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಶನಿವಾರ ಹೇಳಿಕೆ ನೀಡಿದ್ದಾರೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿಂದು ನಡೆದ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಯಾವ ಭರವಸೆ ಈಡೇರಿಸಿಲ್ಲ. ಆದರೂ ಮೋದಿ ಗ್ಯಾರಂಟಿ ಎಂದು ಹೇಳುತ್ತಿದ್ದಾರೆ, ರಾಮಮಂದಿರ ಮಾಡುವುದು ಗ್ಯಾರಂಟೀನಾ? ಎಂದು ಪ್ರಶ್ನಿಸಿರುವ ಅವರು, ರಾಮಮಂದಿರ ನಿರ್ಮಾಣ ಮಾಡುವುದಕ್ಕಿಂತ ರಾಮರಾಜ್ಯವನ್ನು ನಿರ್ಮಾಣ ಮಾಡಬೇಕು ಎಂದು ಹೇಳಿದ್ದಾರೆ.
ಸಮಾಜದಲ್ಲಿ ಸಮಾನತೆ ಆದಾಗ, ಹಸಿವು ಮುಕ್ತ ಹಾಗೂ ಯುವಕರಿಗೆ ಸರಿಯಾದ ಶಿಕ್ಷಣ, ಉದ್ಯೋಗ ಜೊತೆಗೆ ಮಹಿಳೆಯರಿಗೆ ರಕ್ಷಣೆ ಸಿಕ್ಕಾಗ ಮಾತ್ರ ರಾಮರಾಜ್ಯ ಆಗುತ್ತದೆ. ದೇವರು ಸಾಕ್ಷಾತ್ಕಾರ ಆಗಬೇಕಾದರೆ ದೊಡ್ಡ ದೊಡ್ಡ ಭವ್ಯವಾದ ದೇವಸ್ಥಾನ ಕಟ್ಟಬೇಕಿಲ್ಲ. ಸಾವಿರಾರು ವರ್ಷಗಳಿಂದ ಹಿಂದೂ ಧರ್ಮ ಇದೆ, ನೂರಾರು ದೇವಸ್ಥಾನಗಳಿವೆ. ಆದ್ರೆ, ಹಿಂದೂ ಧರ್ಮದಲ್ಲಿನ ಜಾತಿ ವ್ಯವಸ್ಥೆ ಮಾತ್ರ ತೊಲಗಿಲ್ಲ ಎಂದು ಕಿಡಿಕಾರಿದ್ದಾರೆ.
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…
ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…
ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…
ನವದೆಹಲಿ: ಮುರುಘಾ ಮಠದ ಆಸ್ತಿಯನ್ನು ಸರ್ಕಾರದ ವಶಕ್ಕೆ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ…
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಗೆ ನಾಳೆ ಮತದಾನ ನಡೆಯಲಿದ್ದು, ರಾಜ್ಯದ ಒಟ್ಟು 234 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.…