ಚಾಮರಾಜನಗರ

ಹನೂರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ

ಹನೂರು: ಜೀವನದಲ್ಲಿ ಪರಿವರ್ತನೆಗೊಂಡ ಮನುಷ್ಯ ಯಾವ ರೀತಿ ವ್ಯಕ್ತಿಯಾಗಿ ರೂಪಾಂತರಗೊಳ್ಳುತ್ತಾರೆ ಎಂಬುದಕ್ಕೆ ಬೇಡನಾಗಿ, ರತ್ನಾಕರ ವಾಲ್ಮೀಕಿಯಾಗಿ ಬದಲಾಗಿ ರಾಮಾಯಣ ರಚಿಸಿರುವುದೇ ಸಾಕ್ಷಿ ಎಂದು ಮಾಜಿ ಶಾಸಕ ಆರ್ ನರೇಂದ್ರ ಬಣ್ಣಿಸಿದ್ದಾರೆ.

ಹನೂರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಗದ ಆದಿಕವಿ ವಾಲ್ಮೀಕಿ ಪ್ರಸ್ತುತ ಯುವ ಜಗತ್ತಿನ ಪರಿವರ್ತನೆಗೆ ದಾರಿದೀಪ, ವಾಲ್ಮೀಕಿ ಮಹರ್ಷಿಗಳ ಇತಿಹಾಸವನ್ನು ತಿಳಿದುಕೊಂಡು ಅವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಹಿಂದೂ ಸಂಸ್ಕೃತಿಯ ಮಹಾನ್ ಗ್ರಂಥ ರಾಮಾಯಣವಾಗಿದ್ದು ಇದರ ಸಾರ ತಿಳಿದುಕೊಂಡರೆ ಬದುಕು ಪಾವನವಾಗಲಿದೆ. ಹಿಂದುಳಿದ ಸಮುದಾಯದಲ್ಲಿ ಬಹುತೇಕರು ಹುಟ್ಟಿ ನಾಡಿಗೆ ಅಮೂಲ್ಯ ಕಾಣಿಕೆ ನೀಡಿದ್ದಾರೆ ಎನ್ನುವುದಕ್ಕೆ ಅದಿಕವಿ ವಾಲ್ಮೀಕಿಗಳ ಜೀವನ ಚರಿತ್ರೆ ಸಾಕ್ಷಿಯಾಗಿದೆ, ಬೇಡನಾದ ರತ್ನಾಕರ ನಾರದ ಮುನಿಗಳ ಆಶೀರ್ವಚನದಂತೆ ರಾಮನಾಮ ಪಠಿಸಿ ಮಹಾನ್ ದಾರ್ಶನಿಕರಾಗಿ ವಾಲ್ಮೀಕಿಯಾಗಿದ್ದಾರೆ. ಇವರ ರಾಮಾಯಣ ಗ್ರಂಥ ಹಿಂದೂ ಧರ್ಮದಲ್ಲಿನ ಪವಿತ್ರ ಗ್ರಂಥವಾಗಿದೆ ಎಂದರು.

ಯಾವುದೇ ಒಂದು ಸಾಹಿತ್ಯ ರಚನೆಯಾದರೆ, ಆ ಸಾಹಿತ್ಯವು ಕೇವಲ ಆ ಕಾಲಘಟ್ಟಕ್ಕೆ ಮಾತ್ರ ಸೀಮಿತವಾಗುತ್ತದೆ. ಆದರೆ ಸಾವಿರಾರು ವರ್ಷಗಳ ಹಿಂದೆ ಬರೆದಂತಹ ರಾಮಾಯಣ ಮಹಾಕಾವ್ಯಯು ಇಂದಿಗೂ ಕೂಡ ಪ್ರಸ್ತುತವಾಗಿದ್ದು, ಮುಂದೆ ಸೂರ್ಯ ಚಂದ್ರ ಇರುವವರೆಗೂ ಪ್ರಸ್ತುತವಾಗಿರುತ್ತದೆ. ರಾಮಾಯಣ ಮಹಾಕಾವ್ಯದಲ್ಲಿ ಅಷ್ಟೊಂದು ನೈತಿಕ ಮೌಲ್ಯಗಳು ಅಡಗಿದೆ ಎಂದರು.

ಪ್ರಪಂಚದ ಮೊದಲ ಮಹಾಕಾವ್ಯವು ಸುಮಾರು 24 ಸಾವಿರ ಶ್ಲೋಕಗಳನ್ನು ಒಳಗೊಂಡಿದ್ದು, ಈ ಮಹಾಕಾವ್ಯದ ನೆಲೆಗಟ್ಟಿನಲ್ಲಿ ದೇಶದ ಎಲ್ಲಾ ಭಾಷೆಗಳಲ್ಲಿಯೂ ರಾಮಾಯಣ ಕಾವ್ಯವು ರಚಿತವಾಗಲು ಮಹರ್ಷಿ ವಾಲ್ಮೀಕಿ ಅವರು ಕಾರಣರಾಗಿದ್ದಾರೆ. ಕುವೆಂಪು, ಪಂಪ ಕವಿಗಳು ಸೇರಿದಂತೆ ಇನ್ನಿತರ ಕವಿಗಳು ರಾಮಾಯಣವನ್ನು ಬರೆಯಲು ವಾಲ್ಮೀಕಿಯ ಸಂಸ್ಕೃತ ಭಾಷೆಯ ರಾಮಾಯಣ ಮೂಲದಾರವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯ ಗಿರೀಶ್, ಚಾಮುಲ್ ನಿರ್ದೇಶಕ ಶಾಹುಲ್ ಅಹಮದ್, ನಾಯಕ ಸಮಾಜದ ತಾಲೂಕು ಅಧ್ಯಕ್ಷ ಪುಟ್ಟ ವೀರನಾಯಕ, ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ಸಿದ್ದರಾಜು, ಯಡಕುರಿಯ ಮಹಾದೇವ, ನಾಗೇಂದ್ರ ಮೂರ್ತಿ, ನಟರಾಜ ಗೌಡ, ಕೌದಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಾಗರಾಜು ಯುವ ಮುಖಂಡರಾದ ಅರುಣ್, ವೆಂಕಟಾಚಲ ಸೇರಿದಂತೆ ಇನ್ನಿತರರು ಹಾಜರಿದ್ದರು.

 

 

ಆಂದೋಲನ ಡೆಸ್ಕ್

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

10 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

10 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

10 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

10 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

11 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

11 hours ago