ಚಾಮರಾಜನಗರ: ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರ ಬಿಟ್ಟಿರುವುದರಿಂದ ಹುಲ್ಲಹಳ್ಳಿ ಕಬಿನಿ ನದಿ ದಡದಲ್ಲಿರುವ ಜಾಕ್ವೆಲ್ ಮತ್ತು ನೀರು ಶುದ್ಧೀಕರಣ ಘಟಕ ಭಾಗಶಃ ಮುಳುಗಡೆಯಾಗಿದೆ.
ಪರಿಣಾಮ ಗುಂಡ್ಲುಪೇಟೆ ತಾಲ್ಲೂಕಿನ 145 ಗ್ರಾಮಗಳಿಗೆ ಕುಡಿಯುವ ನೀರಿನ ಆತಂಕ ಮನೆಮಾಡಿದ್ದು, ಗ್ರಾಮಸ್ಥರು ಬೋರ್ವೆಲ್ ನೀರಿನ ಮೊರೆ ಹೋಗಿದ್ದಾರೆ.
ಬಹುಗ್ರಾಮದ ಕುಡಿಯುವ ನೀರಿನ ಯೋಜನೆಯಿಂದ ಗುಂಡ್ಲುಪೇಟೆ ತಾಲ್ಲೂಕಿನ 145 ಗ್ರಾಮಗಳಿಗೆ ಹುಲ್ಲಹಳ್ಳಿ ಶುದ್ದೀಕರಣ ಘಟಕದಿಂದ ಕುಡಿಯುವ ನೀರಿನ್ನು ಸರಬರಾಜು ಮಾಡಲಾಗುತ್ತಿತ್ತು. ಆದರೆ ಎಚ್.ಡಿ.ಕೋಟೆಯ ಕಬಿನಿ ಜಲಾಶಯ ಭರ್ತಿಯಾಗಿ ಅಪಾರ ಪ್ರಮಾಣದ ನೀರನ್ನು ನದಿಗೆ ಬಿಟ್ಟಿರುವುದರಿಂದ ಜಾಕ್ವೆಲ್ ಸಂಪೂರ್ಣ ಮುಳುಗಡೆಯಾಗಿದೆ.
ಆದ್ದರಿಂದ ಎಲ್ಲರೂ ಪರ್ಯಾಯವಾಗಿ ಬೋರ್ವೆಲ್ಗಳನ್ನು ಉಪಯೋಗಿಸಿಕೊಂಡು ಕುಡಿಯುವ ನೀರನ್ನು ಕಾಯಿಸಿ ಆರಿಸಿ ಕುಡಿಯಬೇಕು ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…
ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…
ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…
ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…