ಚಾಮರಾಜನಗರ: ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರ ಬಿಟ್ಟಿರುವುದರಿಂದ ಹುಲ್ಲಹಳ್ಳಿ ಕಬಿನಿ ನದಿ ದಡದಲ್ಲಿರುವ ಜಾಕ್ವೆಲ್ ಮತ್ತು ನೀರು ಶುದ್ಧೀಕರಣ ಘಟಕ ಭಾಗಶಃ ಮುಳುಗಡೆಯಾಗಿದೆ.
ಪರಿಣಾಮ ಗುಂಡ್ಲುಪೇಟೆ ತಾಲ್ಲೂಕಿನ 145 ಗ್ರಾಮಗಳಿಗೆ ಕುಡಿಯುವ ನೀರಿನ ಆತಂಕ ಮನೆಮಾಡಿದ್ದು, ಗ್ರಾಮಸ್ಥರು ಬೋರ್ವೆಲ್ ನೀರಿನ ಮೊರೆ ಹೋಗಿದ್ದಾರೆ.
ಬಹುಗ್ರಾಮದ ಕುಡಿಯುವ ನೀರಿನ ಯೋಜನೆಯಿಂದ ಗುಂಡ್ಲುಪೇಟೆ ತಾಲ್ಲೂಕಿನ 145 ಗ್ರಾಮಗಳಿಗೆ ಹುಲ್ಲಹಳ್ಳಿ ಶುದ್ದೀಕರಣ ಘಟಕದಿಂದ ಕುಡಿಯುವ ನೀರಿನ್ನು ಸರಬರಾಜು ಮಾಡಲಾಗುತ್ತಿತ್ತು. ಆದರೆ ಎಚ್.ಡಿ.ಕೋಟೆಯ ಕಬಿನಿ ಜಲಾಶಯ ಭರ್ತಿಯಾಗಿ ಅಪಾರ ಪ್ರಮಾಣದ ನೀರನ್ನು ನದಿಗೆ ಬಿಟ್ಟಿರುವುದರಿಂದ ಜಾಕ್ವೆಲ್ ಸಂಪೂರ್ಣ ಮುಳುಗಡೆಯಾಗಿದೆ.
ಆದ್ದರಿಂದ ಎಲ್ಲರೂ ಪರ್ಯಾಯವಾಗಿ ಬೋರ್ವೆಲ್ಗಳನ್ನು ಉಪಯೋಗಿಸಿಕೊಂಡು ಕುಡಿಯುವ ನೀರನ್ನು ಕಾಯಿಸಿ ಆರಿಸಿ ಕುಡಿಯಬೇಕು ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…