Vehicles face difficulties on the route to Male Mahadeshwara Hill
ಹನೂರು: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗುವ ಮಾರ್ಗದಲ್ಲಿ ವಾಹನ ಸವಾರರು ಕಿರಿಕಿರಿ ಅನುಭವಿಸುವ ಸ್ಥಿತಿ ನಿರ್ಮಾಣವಾಗಿದೆ.
ಬೆಟ್ಟಕ್ಕೆ ತೆರಳುವ ಕೌದಳ್ಳಿ, ಮಧುವನಹಳ್ಳಿ ಮಾರ್ಗದ ಬಳಿ ರಸ್ತೆ ಕಿರಿದಾಗಿದ್ದು, ವಾಹನಗಳು ಮುಂದೆ ಸಾಗಲು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಿರಿದಾದ ರಸ್ತೆಯಿಂದ ಟ್ರಾಫಿಕ್ ಸಮಸ್ಯೆ ಉಂಟಾಗಲಿದ್ದು, ವಾಹನಗಳ ಮುಖಾಮುಖಿ ಸಂಚಾರಕ್ಕೆ ಭಾರೀ ಅಡ್ಡಿ ಉಂಟು ಮಾಡುತ್ತಿದೆ. ಪರಿಣಾಮ ಬೆಟ್ಟಕ್ಕೆ ತೆರಳುವ ಮಾರ್ಗದಲ್ಲಿ ವಾಹನ ಸವಾರರು ಹರ ಸಾಹಸ ಪಡುತ್ತಿದ್ದು, ಕಿರಿದಾದ ರಸ್ತೆಯಲ್ಲಿ ವಾಹನ ಚಲಾಯಿಸುವುದೇ ಸವಾಲಾಗಿದೆ.
ಈ ಹಿನ್ನೆಲೆಯಲ್ಲಿ ರಸ್ತೆ ಅಗಲೀಕರಣಕ್ಕಾಗಿ ಸ್ಥಳೀಯರು ಆಗ್ರಹಿಸಿದ್ದು, ಪ್ರತಿನಿತ್ಯ ಸಾವಿರಾರು ಮಂದಿ ಪ್ರಯಾಣಿಸುವ ಮಾರ್ಗದಲ್ಲಿ ಈ ಅವ್ಯವಸ್ಥೆ ತಲೆದೋರಿದೆ. ಪರಿಣಾಮ ಪ್ರಸಿದ್ಧ ಧಾರ್ಮಿಕ ಕ್ಷೇತ್ರಕ್ಕೆ ತೆರಳಲು ಸವಾರರು ಪರದಾಟ ನಡೆಸುವ ಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಆದಷ್ಟು ಬೇಗ ರಸ್ತೆಯನ್ನು ಸರಿಪಡಿಸಿ ಎಂದು ಸ್ಥಳೀಯರು ಹಾಗೂ ವಾಹನ ಸವಾರರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…