Vehicles face difficulties on the route to Male Mahadeshwara Hill
ಹನೂರು: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗುವ ಮಾರ್ಗದಲ್ಲಿ ವಾಹನ ಸವಾರರು ಕಿರಿಕಿರಿ ಅನುಭವಿಸುವ ಸ್ಥಿತಿ ನಿರ್ಮಾಣವಾಗಿದೆ.
ಬೆಟ್ಟಕ್ಕೆ ತೆರಳುವ ಕೌದಳ್ಳಿ, ಮಧುವನಹಳ್ಳಿ ಮಾರ್ಗದ ಬಳಿ ರಸ್ತೆ ಕಿರಿದಾಗಿದ್ದು, ವಾಹನಗಳು ಮುಂದೆ ಸಾಗಲು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಿರಿದಾದ ರಸ್ತೆಯಿಂದ ಟ್ರಾಫಿಕ್ ಸಮಸ್ಯೆ ಉಂಟಾಗಲಿದ್ದು, ವಾಹನಗಳ ಮುಖಾಮುಖಿ ಸಂಚಾರಕ್ಕೆ ಭಾರೀ ಅಡ್ಡಿ ಉಂಟು ಮಾಡುತ್ತಿದೆ. ಪರಿಣಾಮ ಬೆಟ್ಟಕ್ಕೆ ತೆರಳುವ ಮಾರ್ಗದಲ್ಲಿ ವಾಹನ ಸವಾರರು ಹರ ಸಾಹಸ ಪಡುತ್ತಿದ್ದು, ಕಿರಿದಾದ ರಸ್ತೆಯಲ್ಲಿ ವಾಹನ ಚಲಾಯಿಸುವುದೇ ಸವಾಲಾಗಿದೆ.
ಈ ಹಿನ್ನೆಲೆಯಲ್ಲಿ ರಸ್ತೆ ಅಗಲೀಕರಣಕ್ಕಾಗಿ ಸ್ಥಳೀಯರು ಆಗ್ರಹಿಸಿದ್ದು, ಪ್ರತಿನಿತ್ಯ ಸಾವಿರಾರು ಮಂದಿ ಪ್ರಯಾಣಿಸುವ ಮಾರ್ಗದಲ್ಲಿ ಈ ಅವ್ಯವಸ್ಥೆ ತಲೆದೋರಿದೆ. ಪರಿಣಾಮ ಪ್ರಸಿದ್ಧ ಧಾರ್ಮಿಕ ಕ್ಷೇತ್ರಕ್ಕೆ ತೆರಳಲು ಸವಾರರು ಪರದಾಟ ನಡೆಸುವ ಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಆದಷ್ಟು ಬೇಗ ರಸ್ತೆಯನ್ನು ಸರಿಪಡಿಸಿ ಎಂದು ಸ್ಥಳೀಯರು ಹಾಗೂ ವಾಹನ ಸವಾರರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ನವೀನ್ ಡಿಸೋಜ ಕೊಡಗಿನ ಹೋಂಸ್ಟೇವೊಂದರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮ; ಜಂಟಿ ಸರ್ವೇ ಆರಂಭ ಮಡಿಕೇರಿ: ಹೋಂಸ್ಟೇಗಳಿಗೆ…
ಭೇರ್ಯ ಮಹೇಶ್ ಬರಪೀಡಿತ ತಾಲ್ಲೂಕುಗಳು ಎಂದು ಘೋಷಿಸಲು ರೈತ ಮುಖಂಡರ ಆಗ್ರಹ ಕೆ.ಆರ್.ನಗರ: ಜಿಲ್ಲೆಯಲ್ಲಿ ಭತ್ತದ ಕಣಜ ಎಂದೇ ಪ್ರಸಿದ್ಧಿಯಾಗಿರುವ…
ಕೆ.ಬಿ.ರಮೇಶನಾಯಕ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿಗೆ ಸಹಕಾರಿ; ಸ್ಥಳೀಯ ಉತ್ಪನ್ನಗಳ ಮಾರಾಟ, ಆದಾಯ, ಆರೋಗ್ಯ ವೃದ್ಧಿ ಮೈಸೂರು: ಜಗತ್ತಿಗೆ ಯೋಗವನ್ನು ಪರಿಚಯಿಸಿಕೊಡುವ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಎರಡು ದಿನಗಳ ಹಿಂದೆ ಸುರಿದ ಮಳೆಗೆ ಮೈಸೂರು ನಗರದ ಹಲವೆಡೆ ಮರಉರುಳಿರುವುದೂ ಸೇರಿದಂತೆ ಅನೇಕ ಅನಾಹುತಗಳು ನಡೆದಿದೆ.…
ಮೈಸೂರು : ಕೆಎಸ್ಆರ್ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…