ಚಾಮರಾಜನಗರ

ಗುಂಡ್ಲುಪೇಟೆ| ಹೊನ್ನೇರು ಕಟ್ಟಿ ಯುಗಾದಿ ಹಬ್ಬ ಮಾಡಿದ ಗ್ರಾಮಸ್ಥರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು

ಗುಂಡ್ಲುಪೇಟೆ: ಯುಗಾದಿ ಎಂದರೆ ಭಾರತೀಯರಿಗೆ ಹಿಂದೂ ಸಂಪ್ರದಾಯದಂತೆ ಹೊಸವರ್ಷ ಎಂಬುದು ಪ್ರತೀತಿ ಯುಗಾದಿಯ ದಿನ ಎಣ್ಣೆ ಸ್ನಾನ ಮಾಡಿ ಹೊಸ ಬಟ್ಟೆ ಧರಿಸಿ, ದೆವಸ್ಥಾನದಲ್ಲಿ ಪೂಜೆ ಸಲ್ಲಿಸುವುದು ವಾಡಿಕೆ. ಅದೇ ರೀತಿ ತಾಲ್ಲೂಕಿನಾದ್ಯಂತ ಎಲ್ಲಾ ಗ್ರಾಮದಲ್ಲಿಯೂ ಸಂಭ್ರಮದಿಂದ ಯುಗಾದಿ ಆಚರಣೆ ಮಾಡಿದರೆ ಹಂಗಳ ಮತ್ತು ದೇವರಹಳ್ಳಿ ಗ್ರಾಮದಲ್ಲಿ ವಿಜೃಂಭಣೆಯಿಂದ ಯುಗಾದಿ ಹಬ್ಬವನ್ನು ಆಚರಿಸಿದ್ದಾರೆ.

ಹಂಗಳ ಗ್ರಾಮದಲ್ಲಿ ಬೆಳಿಗ್ಗೆ ಎಂಟು ಗಂಟೆಗೆ ಗ್ರಾಮದ ಹನ್ನೆರಡು ಮನೆತನವು ಸಂಪ್ರದಾಯದಂತೆ ಹೊನ್ನೇರು ಕಟ್ಟಿ ಸಂಭ್ರಮಿಸಿತು. ನಂತರ ಬಸವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ತಾಲ್ಲೂಕಿನ ದೇವರಹಳ್ಳಿ ಗ್ರಾಮದಲ್ಲಿ ನೂರಾರು ವರ್ಷದಿಂದ ಎತ್ತಿನ ಹಬ್ಬ ಮಾಡುತ್ತಿದ್ದು, ಇದನ್ನು ನೋಡಲು ವಿವಿಧ ಗ್ರಾಮಗಳಿಂದ ನೂರಾರು ಜನರು ಅಗಮಿಸಿ ಎತ್ತಿನಹಬ್ಬ ಕಣ್ತುಂಬಿಕೊಂಡರು.

ಎತ್ತುಗಳಿಗೆ ಅರೋಗ್ಯ ಸಮಸ್ಯೆ ಇದ್ದರೆ ಗುಣವಾಗಲಿ ಎಂದು ಹರಕೆ ಹೊತ್ತು ಎತ್ತಿಗೆ ಹಗ್ಗ ಕಟ್ಟಿ ಓಡಲು ಬಿಡುತ್ತಾರೆ. ಯುವಕರು ಎತ್ತನ್ನು ಹಿಡಿದು ಕಟ್ಟಿಹಾಕಲು ಯತ್ನಿಸುವ ಹಬ್ಬವೇ ಎತ್ತಿನ ಹಬ್ಬ. ಇದನ್ನು ನೋಡಲುಗ್ರಾಮದ ದೇವಸ್ಥಾನ, ಜಗಲಿಕಟ್ಟೆ, ರಸ್ತೆಯಲ್ಲಿ ನೂರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು.

ತಾಲ್ಲೂಕಿನ ಮಾಡ್ರಹಳ್ಳಿ, ನೇನೆಕಟ್ಟೆ, ಮಳವಳ್ಳಿ, ವೀರನಪುರ, ಬನ್ನಿತಾಳಪುರ, ಇಂಗಲವಾಡಿ ಗ್ರಾಮದಲ್ಲಿ ಬುಧವಾರ ಹಬ್ಬ ಬಿದ್ದಾಗ ಮಾತ್ರ ಆಚರಣೆ ಮಾಡುತ್ತಾರೆ. ಬೇರೆ ದಿನ ಹಬ್ಬ ಬಿದ್ದರೆ ಅಚರಣೆ ಮಾಡುವುದಿಲ್ಲ, ಮುಂದಿನ ಬುಧವಾರವೇ ಯುಗಾದಿ ಅಚರಿಸಲಾಗುವುದು. ಕಳೆದ ವರ್ಷ ಬುಧವಾರವೇ ಹಬ್ಬ ಬಿದ್ದ ಕಾರಣ ಅಚರಣೆ ಮಾಡಿದ್ದರು. ಅದರೆ ಈ ವರ್ಷ ಗುರುವಾರ ಬಿದ್ದ ಕಾರಣ ಮುಂದಿನ ಬುಧವಾರಕ್ಕೆ ಹಬ್ಬ ಆಚರಣೆ ಮಾಡಲಾಗುತ್ತದೆ.

 

 

 

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

16 hours ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

16 hours ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

16 hours ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

16 hours ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

16 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

16 hours ago