ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ.
ಗ್ರಾಮದ ಯಾವ ದಿಕ್ಕಿನಲ್ಲಿ ನೋಡಿದರೂ ಕಸದ ರಾಶಿಗಳೇ ಕಣ್ಣಿಗೆ ಬೀಳುತ್ತಿದ್ದು, ಪಂಚಾಯಿತಿ ಆಡಳಿತವು ಕಸ ವಿಲೇವಾರಿ ಮಾಡುವಲ್ಲಿ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ ಎಂದು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದುರ್ನಾತ ಬೀರುತ್ತಿರುವ ಮುಖ್ಯ ರಸ್ತೆಗಳು: ಮಾರ್ಟಳ್ಳಿ ಗ್ರಾಮದ ಮುಖ್ಯ ರಸ್ತೆಯ ಅಕ್ಕಪಕ್ಕದಲ್ಲಿ ಕಸದ ರಾಶಿಗಳು ಬಿದ್ದಿದ್ದು, ಸುತ್ತಮುತ್ತಲ ಪ್ರದೇಶವೆಲ್ಲಾ ಗಬ್ಬು ನಾರುತ್ತಿದೆ. ಮಾರ್ಟಳ್ಳಿಯಿಂದ ನಾಲ್ ರೋಡ್ ಮಾರ್ಗದ ರಸ್ತೆಯಲ್ಲಂತೂ ಪರಿಸ್ಥಿತಿ ಮಿತಿಮೀರಿದ್ದು, ಈ ಭಾಗದಲ್ಲಿ ಬ್ಯಾಂಕ್, ಬೇಕರಿ ಮತ್ತು ಇತರ ವ್ಯಾಪಾರ ಮಳಿಗೆಗಳಿರುವುದರಿಂದ ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ.
ಎಲ್ಲೆಂದರಲ್ಲಿ ಕಾಣಿಸಿರುವ ಚಿಕನ್ ತ್ಯಾಜ್ಯ: ಕೇವಲ ಪ್ಲಾಸ್ಟಿಕ್ ಮತ್ತು ಮನೆಯ ತ್ಯಾಜ್ಯವಲ್ಲದೆ, ಮಾಂಸದ ಅಂಗಡಿಗಳಿಂದ ಹೊರಬರುವ ಚಿಕನ್ ತ್ಯಾಜ್ಯವನ್ನು ಸಹ ಇಲ್ಲಿಯೇ ಎಲ್ಲೆಂದರಲ್ಲಿ ಎಸೆಯಲಾಗುತ್ತಿದೆ. ಇದರಿಂದಾಗಿ ಬೀದಿ ನಾಯಿಗಳು ಮತ್ತು ಹಸುಗಳು ಈ ತ್ಯಾಜ್ಯವನ್ನು ರಸ್ತೆಯಾದ್ಯಂತ ಚೆಲ್ಲಾಪಿಲ್ಲಿ ಮಾಡುತ್ತಿದ್ದು, ರೋಗರುಜಿನಗಳ ಭೀತಿ ಎದುರಾಗಿದೆ.
ಬಳಕೆಯಾಗದ ಸ್ವಚ್ಛತಾ ವಾಹನ: ಮಾರ್ಟಳ್ಳಿ ಪಂಚಾಯಿತಿಗೆ ಕಸ ವಿಲೇವಾರಿಗಾಗಿ ವಾಹನ ಬಂದು 5 ವರ್ಷ ಕಳೆದಿದ್ದರೂ, ಇದುವರೆಗೂ ಅದು ಬಳಕೆಗೆ ಬಾರದೆ ಧೂಳು ಹಿಡಿಯುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಪ್ರಮುಖ ಕಾರಣವಾಗಿದೆ. “ಕೇಂದ್ರ ಸ್ಥಾನವಾದ ಮಾರ್ಟಳ್ಳಿಯಲ್ಲೇ ಈ ಪರಿಸ್ಥಿತಿ ಇದ್ದರೆ, ಇನ್ನುಳಿದ ಗ್ರಾಮಗಳ ಗತಿ ಏನು? ಎಂದು ಗ್ರಾಮಸ್ಥರು ಪ್ರಶ್ನಿಸುತ್ತಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳು ಈ ಕೂಡಲೇ ಎಚ್ಚೆತ್ತುಕೊಂಡು, ಚಿಕನ್ ತ್ಯಾಜ್ಯ ಸೇರಿದಂತೆ ಎಲ್ಲ ಕಸವನ್ನು ವಿಲೇವಾರಿ ಮಾಡಿ ಗ್ರಾಮದಲ್ಲಿ ನೈರ್ಮಲ್ಯ ಕಾಪಾಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…