ಚಾಮರಾಜನಗರ

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ.

ಗ್ರಾಮದ ಯಾವ ದಿಕ್ಕಿನಲ್ಲಿ ನೋಡಿದರೂ ಕಸದ ರಾಶಿಗಳೇ ಕಣ್ಣಿಗೆ ಬೀಳುತ್ತಿದ್ದು, ಪಂಚಾಯಿತಿ ಆಡಳಿತವು ಕಸ ವಿಲೇವಾರಿ ಮಾಡುವಲ್ಲಿ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ ಎಂದು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದುರ್ನಾತ ಬೀರುತ್ತಿರುವ ಮುಖ್ಯ ರಸ್ತೆಗಳು: ಮಾರ್ಟಳ್ಳಿ ಗ್ರಾಮದ ಮುಖ್ಯ ರಸ್ತೆಯ ಅಕ್ಕಪಕ್ಕದಲ್ಲಿ ಕಸದ ರಾಶಿಗಳು ಬಿದ್ದಿದ್ದು, ಸುತ್ತಮುತ್ತಲ ಪ್ರದೇಶವೆಲ್ಲಾ ಗಬ್ಬು ನಾರುತ್ತಿದೆ. ಮಾರ್ಟಳ್ಳಿಯಿಂದ ನಾಲ್ ರೋಡ್ ಮಾರ್ಗದ ರಸ್ತೆಯಲ್ಲಂತೂ ಪರಿಸ್ಥಿತಿ ಮಿತಿಮೀರಿದ್ದು, ಈ ಭಾಗದಲ್ಲಿ ಬ್ಯಾಂಕ್, ಬೇಕರಿ ಮತ್ತು ಇತರ ವ್ಯಾಪಾರ ಮಳಿಗೆಗಳಿರುವುದರಿಂದ ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ.

ಎಲ್ಲೆಂದರಲ್ಲಿ ಕಾಣಿಸಿರುವ ​ಚಿಕನ್ ತ್ಯಾಜ್ಯ: ಕೇವಲ ಪ್ಲಾಸ್ಟಿಕ್ ಮತ್ತು ಮನೆಯ ತ್ಯಾಜ್ಯವಲ್ಲದೆ, ಮಾಂಸದ ಅಂಗಡಿಗಳಿಂದ ಹೊರಬರುವ ಚಿಕನ್ ತ್ಯಾಜ್ಯವನ್ನು ಸಹ ಇಲ್ಲಿಯೇ ಎಲ್ಲೆಂದರಲ್ಲಿ ಎಸೆಯಲಾಗುತ್ತಿದೆ. ಇದರಿಂದಾಗಿ ಬೀದಿ ನಾಯಿಗಳು ಮತ್ತು ಹಸುಗಳು ಈ ತ್ಯಾಜ್ಯವನ್ನು ರಸ್ತೆಯಾದ್ಯಂತ ಚೆಲ್ಲಾಪಿಲ್ಲಿ ಮಾಡುತ್ತಿದ್ದು, ರೋಗರುಜಿನಗಳ ಭೀತಿ ಎದುರಾಗಿದೆ.

​ಬಳಕೆಯಾಗದ ಸ್ವಚ್ಛತಾ ವಾಹನ: ಮಾರ್ಟಳ್ಳಿ ಪಂಚಾಯಿತಿಗೆ ಕಸ ವಿಲೇವಾರಿಗಾಗಿ ವಾಹನ ಬಂದು 5 ವರ್ಷ ಕಳೆದಿದ್ದರೂ, ಇದುವರೆಗೂ ಅದು ಬಳಕೆಗೆ ಬಾರದೆ ಧೂಳು ಹಿಡಿಯುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಪ್ರಮುಖ ಕಾರಣವಾಗಿದೆ. “ಕೇಂದ್ರ ಸ್ಥಾನವಾದ ಮಾರ್ಟಳ್ಳಿಯಲ್ಲೇ ಈ ಪರಿಸ್ಥಿತಿ ಇದ್ದರೆ, ಇನ್ನುಳಿದ ಗ್ರಾಮಗಳ ಗತಿ ಏನು? ಎಂದು ಗ್ರಾಮಸ್ಥರು ಪ್ರಶ್ನಿಸುತ್ತಿದ್ದಾರೆ.

ಸಂಬಂಧಪಟ್ಟ ಅಧಿಕಾರಿಗಳು ಈ ಕೂಡಲೇ ಎಚ್ಚೆತ್ತುಕೊಂಡು, ಚಿಕನ್ ತ್ಯಾಜ್ಯ ಸೇರಿದಂತೆ ಎಲ್ಲ ಕಸವನ್ನು ವಿಲೇವಾರಿ ಮಾಡಿ ಗ್ರಾಮದಲ್ಲಿ ನೈರ್ಮಲ್ಯ ಕಾಪಾಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

23 mins ago

ಸರಗೂರು | ಮತ್ತೆ ಹುಲಿ ದಾಳಿ ; ಬೋನು ಅಳವಡಿಸಲು ತೆರಳಿದ್ದ ಅರಣ್ಯ ಗಾರ್ಡ್‌ ಮೇಲೆ ಎರಗಿದ ಹುಲಿ

ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್‌ಟಿಎಫ್ ಸಿಬ್ಬಂದಿಯ ಮೇಲೆಯೇ…

48 mins ago

ಎಸ್‌ಐಆರ್‌ | ರಾಜ್ಯಾದ್ಯಂತ ಏಕಕಾಲಕ್ಕೆ ಆರಂಭ ; ನಾಳೆಯಿಂದ ಮನೆ ಮನೆಗೆ ಭೇಟಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…

59 mins ago

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

2 hours ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

5 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

6 hours ago