ಚಾಮರಾಜನಗರ

ದೊಮ್ಮನಗದ್ದೆ ಗ್ರಾ.ಪಂ ಮುಂದೆ ಪ್ರತಿಭಟನೆಗಿಳಿದ ಗ್ರಾಮಸ್ಥರು: ಕಾರಣ ಇಷ್ಟೇ

ಹನೂರು: ನರೇಗಾ ಯೋಜನೆಯಡಿಯಲ್ಲಿ ಕೂಲಿ ಕೆಲಸ ನೀಡುತ್ತಿಲ್ಲ ಎಂದು ಆರೋಪಿಸಿ ದೊಮ್ಮನಗದ್ದೆ ಗ್ರಾಮಸ್ಥರು ಗ್ರಾಮ ಪಂಚಾಯತಿ ಮುಂದೆ ಪ್ರತಿಭಟನೆ ನಡೆಸಿದರು.

ಹನೂರು ತಾಲ್ಲೂಕಿನ ಅಜ್ಜೀಪುರ ಗ್ರಾಮ ಪಂಚಾಯಿತಿ ಮುಂಭಾಗ ಜಮಾಯಿಸಿದ ದೊಮ್ಮನಗದ್ದೆ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ನಂತರ ದೊಮ್ಮನಗದ್ದೆ ಗ್ರಾಮಸ್ಥೆ ಕೃಷ್ಣವೇಣಿ ಮಾತನಾಡಿ, ನರೇಗಾ ಯೋಜನೆಯಡಿಯಲ್ಲಿ ನೂರು ದಿನಗಳ ಕೆಲಸ ಕೊಡಬೇಕೆಂದು ನಿಯಮ ಇದೆ. ಆದರೆ ನಮಗೆ ನೂರು ದಿನಗಳ ಕಾಲ ಕೆಲಸ ಕೊಟ್ಟಿದ್ದಾರೆಯೇ? ಕೇವಲ ಐದು ದಿನ ಕೆಲಸ ಕೊಟ್ಟು ಕೆಲಸ ನಿಲ್ಲಿಸಿ ಎಂದು ಹೇಳುತ್ತಾರೆ. ಜೊತೆಗೆ ಐದು ದಿನಗಳ ಕಾಲ ನಡೆದಿರುವ ಕಾಮಗಾರಿಯ ಹಣ ಸಹ ಬಂದಿಲ್ಲ. ಇದರಿಂದ ಜೀವನ ನಿರ್ವಹಣೆಯೇ ತೊಂದರೆಯಾಗಿದೆ. ಐದು ದಿನ ಕೆಲಸ ನೀಡಿ ಮತ್ತೆ ಕೆಲಸ ನಿಲ್ಲಿಸಿ ಎಂಬುದು ಯಾವ ರೀತಿಯ ನ್ಯಾಯ ಎಂದು ಪ್ರಶ್ನೆ ಮಾಡಿದ್ದಾರೆ. ಹಾಗಾಗಿ ಕೂಲಿಯನ್ನು ನಂಬಿ ಬದುಕುತ್ತಿರುವ ನಮಗೆ ನರೇಗಾ ಯೋಜನೆಯಡಿ ಕೂಲಿ ಕೆಲಸ ನೀಡಬೇಕೆಂದು ಆಗ್ರಹಿಸಿದರು.

ಇದನ್ನು ಓದಿ : ನವೆಂಬರ್.‌20ರಂದು ಮೈಸೂರಿನಲ್ಲಿ ಕೌದಿ ನಾಟಕ ಪ್ರದರ್ಶನ

ನೂರು ದಿನಗಳ ಕಾಲ ಕೆಲಸ ನೀಡದೇ ಇರುವುದರಿಂದ ಗ್ರಾಮಸ್ಥರು ಗ್ರಾಮವನ್ನೇ ತೊರೆಯಬೇಕಾದ ಅನಿವಾರ್ಯತೆ ಎದುರಾಗಿದೆ. ಈಗಾಗಲೇ ಅನೇಕರು ಗ್ರಾಮ ತೊರೆದು ಬೇರೆ ಕೆಲಸಕ್ಕೆ ತೆರಳಿದ್ದಾರೆ. ಹೀಗಿರುವಾಗ ಇರುವವರಿಗಾದರೂ ಕೂಡ ಕೆಲಸ ಕೊಡಲು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಆಡಳಿತ ಗಮನಹರಿಸಬೇಕು. ಆ ಮೂಲಕ ಗುಳೆ ಹೋಗುತ್ತಿರುವ ಜನರನ್ನು ತಡೆಯಬೇಕು ಎಂದು ಮನವಿ ಸಹ ಮಾಡಿದರು.

ಇದೇ ಸಂದರ್ಭದಲ್ಲಿ ದೊಮ್ಮನಗದ್ದೆ ಗ್ರಾಮಸ್ಥರಾದ ಮಾದಪ್ಪ, ಮಾದ, ಚಂದ್ರಮ್ಮ ಮಾದೇವಿ, ಮುತ್ತ, ಕೃಷ್ಣವೇಣಿ, ಪಳನಿ ಸ್ವಾಮಿ, ಪಳನಿಯಮ್ಮ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನರೇಗಾ ಯೋಜನೆಯಡಿ ಜಾಬ್ ಕಾರ್ಡ್ ಹೊಂದಿರುವವರಿಗೆ ನೂರು ದಿನ ಕಡ್ಡಾಯವಾಗಿ ಕೆಲಸ ನೀಡಲಾಗುತ್ತಿದೆ ಆದರೆ ಕೆಲವರು ಈ ಕೆವೈಸಿ ಮಾಡದೇ ಇರುವುದರಿಂದ ಹಣ ಅವರ ಖಾತೆಗೆ ಜಮೆಯಾಗಿಲ್ಲ. ಕಳೆದ ಒಂದು ವಾರದಿಂದ ಈಕೆ ವೈಸಿ ಮಾಡಿಸಿಕೊಳ್ಳುವಂತೆ ಅರಿವು ಮೂಡಿಸಲಾಗುತ್ತಿದೆ. ಮಂಗಳವಾರವು ದೊಮ್ಮನಗದ್ದೆ ಗ್ರಾಮದ 25 ಜನರಿಗೆ ಈಕೆ ವೈಸಿ ಮಾಡಲಾಗಿದ್ದು, ಬುಧವಾರದಿಂದಲೇ ನರೇಗಾ ಯೋಜನೆಯಡಿ ಕೂಲಿ ಕೆಲಸ ನೀಡಲಾಗುವುದು ಎಂದು ಅಜ್ಜೀಪುರ ಗ್ರಾಮ ಪಂಚಾಯಿತಿ ಪಿಡಿಓ ಸುರೇಶ್‌ ಭರವಸೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

21 mins ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

1 hour ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

1 hour ago

ಬೆಟ್ಟಳ್ಳಿ ಮಾರಮ್ಮನ ಜಾತ್ರೆ ; ಹನೂರಲ್ಲಿ 2 ದಿನ ಮದ್ಯ ಮಾರಾಟ ನಿಷೇಧ

ಹನೂರು : ಪಟ್ಟಣದಲ್ಲಿ ನಡೆಯಲಿರುವ ಶ್ರೀ ಬೆಟ್ಟಳ್ಳಿ ಮಾರಮ್ಮನ ಜಾತ್ರೆಯ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಎರಡು ದಿನಗಳ ಕಾಲ ಹನೂರು…

2 hours ago

ಕೆ.ಆರ್.ಆಸ್ಪತ್ರೆಯಲ್ಲಿ 100 ಹಾಸಿಗೆಯುಳ್ಳ ICU ಘಟಕ ಸ್ಥಾಪಿಸಿ : ಎಂಎಲ್‌ಸಿ ಕೆ.ಶಿವಕುಮಾರ್ ಮನವಿ

ಬೆಂಗಳೂರು : ಮಂಡ್ಯ, ಚಾಮರಾಜನಗರ, ಹೊಳೆನರಸೀಪುರದಿಂದ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಬರುವ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ತುರ್ತು ಸೇವೆಗಳ ಅನುಕೂಲಕ್ಕಾಗಿ ಆಸ್ಪತ್ರೆಯಲ್ಲಿ…

3 hours ago

ಈವರೆಗೂ ಇರಾನ್‌ನಿಂದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ: ಸಚಿವ ಜೈಶಂಕರ್‌

ನವದೆಹಲಿ: ಇರಾನ್-‌ಇಸ್ರೇಲ್‌ ಸಂಘರ್ಷದ ಹಿನ್ನೆಲೆಯಲ್ಲಿ ಇರಾನ್‌ನಲ್ಲಿ ಸಿಲುಕಿದ್ದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ ಎಂದು ವಿದೇಶಾಂಗ ಸಚಿವ ಜೈಶಂಕರ್‌…

4 hours ago