ಚಾಮರಾಜನಗರ

ದೊಮ್ಮನಗದ್ದೆ ಗ್ರಾ.ಪಂ ಮುಂದೆ ಪ್ರತಿಭಟನೆಗಿಳಿದ ಗ್ರಾಮಸ್ಥರು: ಕಾರಣ ಇಷ್ಟೇ

ಹನೂರು: ನರೇಗಾ ಯೋಜನೆಯಡಿಯಲ್ಲಿ ಕೂಲಿ ಕೆಲಸ ನೀಡುತ್ತಿಲ್ಲ ಎಂದು ಆರೋಪಿಸಿ ದೊಮ್ಮನಗದ್ದೆ ಗ್ರಾಮಸ್ಥರು ಗ್ರಾಮ ಪಂಚಾಯತಿ ಮುಂದೆ ಪ್ರತಿಭಟನೆ ನಡೆಸಿದರು.

ಹನೂರು ತಾಲ್ಲೂಕಿನ ಅಜ್ಜೀಪುರ ಗ್ರಾಮ ಪಂಚಾಯಿತಿ ಮುಂಭಾಗ ಜಮಾಯಿಸಿದ ದೊಮ್ಮನಗದ್ದೆ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ನಂತರ ದೊಮ್ಮನಗದ್ದೆ ಗ್ರಾಮಸ್ಥೆ ಕೃಷ್ಣವೇಣಿ ಮಾತನಾಡಿ, ನರೇಗಾ ಯೋಜನೆಯಡಿಯಲ್ಲಿ ನೂರು ದಿನಗಳ ಕೆಲಸ ಕೊಡಬೇಕೆಂದು ನಿಯಮ ಇದೆ. ಆದರೆ ನಮಗೆ ನೂರು ದಿನಗಳ ಕಾಲ ಕೆಲಸ ಕೊಟ್ಟಿದ್ದಾರೆಯೇ? ಕೇವಲ ಐದು ದಿನ ಕೆಲಸ ಕೊಟ್ಟು ಕೆಲಸ ನಿಲ್ಲಿಸಿ ಎಂದು ಹೇಳುತ್ತಾರೆ. ಜೊತೆಗೆ ಐದು ದಿನಗಳ ಕಾಲ ನಡೆದಿರುವ ಕಾಮಗಾರಿಯ ಹಣ ಸಹ ಬಂದಿಲ್ಲ. ಇದರಿಂದ ಜೀವನ ನಿರ್ವಹಣೆಯೇ ತೊಂದರೆಯಾಗಿದೆ. ಐದು ದಿನ ಕೆಲಸ ನೀಡಿ ಮತ್ತೆ ಕೆಲಸ ನಿಲ್ಲಿಸಿ ಎಂಬುದು ಯಾವ ರೀತಿಯ ನ್ಯಾಯ ಎಂದು ಪ್ರಶ್ನೆ ಮಾಡಿದ್ದಾರೆ. ಹಾಗಾಗಿ ಕೂಲಿಯನ್ನು ನಂಬಿ ಬದುಕುತ್ತಿರುವ ನಮಗೆ ನರೇಗಾ ಯೋಜನೆಯಡಿ ಕೂಲಿ ಕೆಲಸ ನೀಡಬೇಕೆಂದು ಆಗ್ರಹಿಸಿದರು.

ಇದನ್ನು ಓದಿ : ನವೆಂಬರ್.‌20ರಂದು ಮೈಸೂರಿನಲ್ಲಿ ಕೌದಿ ನಾಟಕ ಪ್ರದರ್ಶನ

ನೂರು ದಿನಗಳ ಕಾಲ ಕೆಲಸ ನೀಡದೇ ಇರುವುದರಿಂದ ಗ್ರಾಮಸ್ಥರು ಗ್ರಾಮವನ್ನೇ ತೊರೆಯಬೇಕಾದ ಅನಿವಾರ್ಯತೆ ಎದುರಾಗಿದೆ. ಈಗಾಗಲೇ ಅನೇಕರು ಗ್ರಾಮ ತೊರೆದು ಬೇರೆ ಕೆಲಸಕ್ಕೆ ತೆರಳಿದ್ದಾರೆ. ಹೀಗಿರುವಾಗ ಇರುವವರಿಗಾದರೂ ಕೂಡ ಕೆಲಸ ಕೊಡಲು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಆಡಳಿತ ಗಮನಹರಿಸಬೇಕು. ಆ ಮೂಲಕ ಗುಳೆ ಹೋಗುತ್ತಿರುವ ಜನರನ್ನು ತಡೆಯಬೇಕು ಎಂದು ಮನವಿ ಸಹ ಮಾಡಿದರು.

ಇದೇ ಸಂದರ್ಭದಲ್ಲಿ ದೊಮ್ಮನಗದ್ದೆ ಗ್ರಾಮಸ್ಥರಾದ ಮಾದಪ್ಪ, ಮಾದ, ಚಂದ್ರಮ್ಮ ಮಾದೇವಿ, ಮುತ್ತ, ಕೃಷ್ಣವೇಣಿ, ಪಳನಿ ಸ್ವಾಮಿ, ಪಳನಿಯಮ್ಮ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನರೇಗಾ ಯೋಜನೆಯಡಿ ಜಾಬ್ ಕಾರ್ಡ್ ಹೊಂದಿರುವವರಿಗೆ ನೂರು ದಿನ ಕಡ್ಡಾಯವಾಗಿ ಕೆಲಸ ನೀಡಲಾಗುತ್ತಿದೆ ಆದರೆ ಕೆಲವರು ಈ ಕೆವೈಸಿ ಮಾಡದೇ ಇರುವುದರಿಂದ ಹಣ ಅವರ ಖಾತೆಗೆ ಜಮೆಯಾಗಿಲ್ಲ. ಕಳೆದ ಒಂದು ವಾರದಿಂದ ಈಕೆ ವೈಸಿ ಮಾಡಿಸಿಕೊಳ್ಳುವಂತೆ ಅರಿವು ಮೂಡಿಸಲಾಗುತ್ತಿದೆ. ಮಂಗಳವಾರವು ದೊಮ್ಮನಗದ್ದೆ ಗ್ರಾಮದ 25 ಜನರಿಗೆ ಈಕೆ ವೈಸಿ ಮಾಡಲಾಗಿದ್ದು, ಬುಧವಾರದಿಂದಲೇ ನರೇಗಾ ಯೋಜನೆಯಡಿ ಕೂಲಿ ಕೆಲಸ ನೀಡಲಾಗುವುದು ಎಂದು ಅಜ್ಜೀಪುರ ಗ್ರಾಮ ಪಂಚಾಯಿತಿ ಪಿಡಿಓ ಸುರೇಶ್‌ ಭರವಸೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

6 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

6 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

17 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

17 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

17 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

17 hours ago