ಚಾಮರಾಜನಗರ ; ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುತ್ತಿದ್ದು ಜಲಾಶಯಗಳು, ಕೆರೆ ಕಟ್ಟೆಗಳಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.
ಚಾಮರಾಜನಗರ, ಗುಂಡ್ಲುಪೇಟೆ, ಹನೂರಿನ ಹತ್ತಾರು ಕೆರೆಗಳು ಕೋಡಿ ಬಿದ್ದಿವೆ, ಹಳ್ಳಗಳು ಉಕ್ಕಿ ಹರಿಯುತ್ತಿದ್ದು ಬೆಳೆಗಳು ಜಲಾವೃತವಾಗಿ ರೈತರು ನಷ್ಟದ ಭೀತಿಯನ್ನು ಎದುರಿಸುತ್ತಿದ್ದಾರೆ.
ಚಾಮರಾಜನಗರ ತಾಲ್ಲೂಕಿನ ಸುವರ್ಣಾವತಿ ಹಾಗೂ ಚಿಕ್ಕಹೊಳೆ ಜಲಾಶಯಗಳಿಂದ 1,400 ಕ್ಯೂಸೆಕ್ಗಳಷ್ಟು ನೀರನ್ನು ನದಿಗೆ ಹರಿಸಲಾಗುತ್ತಿದೆ. ಮರಗದಕೆರೆ, ಕೋಡಿಮೋಳೆ ಕೆರೆ ಸೇರಿದಂತೆ ವಿವಿಧ ಕೆರೆಗಳ ಹೆಚ್ಚುವರಿ ನೀರುಕೂಡ ಸುವರ್ಣಾವತಿ ನದಿ ಸೇರುತ್ತಿದ್ದು,ಅದರ ನೀರಿನ ಮಟ್ಟ ಹೆಚ್ಚಾಗಿದ್ದು, ನದಿ ಪಾತ್ರದ ಜಮೀನುಗಳಿಗೆ ನೀರು ನುಗ್ಗಿದೆ. ಯಳಂದೂರಿನಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ. ಚಿಕ್ಕಮೋಳೆ, ದೊಡ್ಡಮೋಳೆ, ಬ್ಯಾಡಮೂಡ್ಲು ಗ್ರಾಮಗಳಲ್ಲಿ ಕೆರೆಗಳು ಉಕ್ಕಿ ಹರಿದಿರುವುದರಿಂದ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ.
ಪಿ.ಜೆ.ರಾಘವೇಂದ್ರ, ನ್ಯಾಯವಾದಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಬಗ್ಗೆ ಅಪಪ್ರಚಾರ ಮಾಡಿದ್ದಾರೆ ಎಂದು ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಮುಡಾ ಮಾಜಿ…
ದೇಶ-ವಿದೇಶಗಳ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ಅರಮನೆ ನಗರಿ ಮೈಸೂರಿನ ಸೌಂದರ್ಯವನ್ನು ಹದಗೆಡಿಸುವಂತಹ ಜಾಹೀರಾತು ಫಲಕಗಳು, ಫ್ಲೆಕ್ಸ್ಗಳ ಹಾವಳಿ ತಡೆಗಟ್ಟಲು ರೂಪಿಸಿರುವ…
ಸಿದ್ದರಾಮಯ್ಯರನ್ನು ಸಿಎಂ ಪಟ್ಟದಿಂದ ಕೆಳಗಿಳಿಸಿದರೆ ಪಕ್ಷಕ್ಕೆ ಆಪತ್ತು ಎಂಬ ಆತಂಕ ಇಂತಹದೊಂದು ಪ್ರಶ್ನೆ ಈಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪಾಳೆಯಗಳಲ್ಲಿ…
ಅವಳಿ ತಾಲ್ಲೂಕುಗಳ ಹಲವೆಡೆ ಅವಾಂತರ; ಕಾವಲು ಹೊಸೂರು ಗ್ರಾಮದಲ್ಲಿ ರಾಗಿ ಬೆಳೆದಿದ್ದ ರೈತರು ಕಂಗಾಲು ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…
ಎಸ್.ಎಸ್.ಭಟ್ ನಂಜನಗೂಡು: ಮೈಸೂರು ವಿಶ್ವವಿದ್ಯಾನಿಲಯಕ್ಕೆ ಪೂರಕವಾಗಿ ೧೯೨೪ರಲ್ಲೇ ಆರಂಭವಾದ ಈ ಪ್ರೌಢಶಾಲೆ ಪ್ರಸ್ತುತ ಉದುರಿಬೀಳುವ ಹಂತದ ಗೋಡೆ ಹಾಗೂ ಮಳೆ…