ಚಾಮರಾಜನಗರ ; ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುತ್ತಿದ್ದು ಜಲಾಶಯಗಳು, ಕೆರೆ ಕಟ್ಟೆಗಳಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.
ಚಾಮರಾಜನಗರ, ಗುಂಡ್ಲುಪೇಟೆ, ಹನೂರಿನ ಹತ್ತಾರು ಕೆರೆಗಳು ಕೋಡಿ ಬಿದ್ದಿವೆ, ಹಳ್ಳಗಳು ಉಕ್ಕಿ ಹರಿಯುತ್ತಿದ್ದು ಬೆಳೆಗಳು ಜಲಾವೃತವಾಗಿ ರೈತರು ನಷ್ಟದ ಭೀತಿಯನ್ನು ಎದುರಿಸುತ್ತಿದ್ದಾರೆ.
ಚಾಮರಾಜನಗರ ತಾಲ್ಲೂಕಿನ ಸುವರ್ಣಾವತಿ ಹಾಗೂ ಚಿಕ್ಕಹೊಳೆ ಜಲಾಶಯಗಳಿಂದ 1,400 ಕ್ಯೂಸೆಕ್ಗಳಷ್ಟು ನೀರನ್ನು ನದಿಗೆ ಹರಿಸಲಾಗುತ್ತಿದೆ. ಮರಗದಕೆರೆ, ಕೋಡಿಮೋಳೆ ಕೆರೆ ಸೇರಿದಂತೆ ವಿವಿಧ ಕೆರೆಗಳ ಹೆಚ್ಚುವರಿ ನೀರುಕೂಡ ಸುವರ್ಣಾವತಿ ನದಿ ಸೇರುತ್ತಿದ್ದು,ಅದರ ನೀರಿನ ಮಟ್ಟ ಹೆಚ್ಚಾಗಿದ್ದು, ನದಿ ಪಾತ್ರದ ಜಮೀನುಗಳಿಗೆ ನೀರು ನುಗ್ಗಿದೆ. ಯಳಂದೂರಿನಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ. ಚಿಕ್ಕಮೋಳೆ, ದೊಡ್ಡಮೋಳೆ, ಬ್ಯಾಡಮೂಡ್ಲು ಗ್ರಾಮಗಳಲ್ಲಿ ಕೆರೆಗಳು ಉಕ್ಕಿ ಹರಿದಿರುವುದರಿಂದ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…