ಚಾಮರಾಜನಗರ

ಚಾಮರಾಜನಗರದಲ್ಲಿ ಪಶ್ಚಿಮ ಬಂಗಾಳ ಮೂಲದ ಬಸ್ ಪಲ್ಟಿ: 25 ಮಂದಿಗೆ ಗಾಯ

ಚಾಮರಾಜನಗರ : ತಮಿಳುನಾಡಿನಿಂದ ಕರ್ನಾಟಕದತ್ತ ಬರುತ್ತಿದ್ದ ಪಶ್ಚಿಮ ಬಂಗಾಳದ ಪ್ರವಾಸಿಗರಿದ್ದ ಬಸ್ ಪಲ್ಟಿಯಾಗಿ 25 ಮಂದಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಸಮೀಪದ ಮೇಲುಕಾಮನಹಳ್ಳಿ ಇಳಿಜಾರಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಪಶ್ಚಿಮ ಬಂಗಾಳದ ಬಸ್ ವೊಂದು ತಮಿಳುನಾಡಿನ ತೀರ್ಥಕ್ಷೇತ್ರಗಳನ್ನು ನೋಡಿಕೊಂಡು ಚಾಮರಾಜನಗರ ಜಿಲ್ಲೆಯ ಬಂಡೀಪುರ ಮಾರ್ಗವಾಗಿ ಕರ್ನಾಟಕಕ್ಕೆ ಬರುತ್ತಿದ್ದಾಗ ಇಳಿಜಾರಿನ ರಸ್ತೆಯಲ್ಲಿ ಬ್ರೇಕ್ ಫೇಲ್ ಆಗಿ ಅವಘಡ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅಡುಗೆ ಸಿಬ್ಬಂದಿ ಸೇರಿದಂತೆ 65 ಮಂದಿ ಈ ಬಸ್ ನಲ್ಲಿ ಪ್ರಯಾಣ ಮಾಡುತ್ತಿದ್ದರು. 25 ಮಂದಿ ಗಾಯಗೊಂಡಿದ್ದು ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ನಲ್ಲಿದ್ದ ಬಹುಪಾಲು ಮಂದಿ ಹಾಗೂ ಗಾಯಗೊಂಡ ಅನೇಕರು ಹಿರಿಯ ನಾಗರಿಕರಾಗಿದ್ದಾರೆ. ಗಾಯಾಳುಗಳನ್ನು ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.

andolanait

Recent Posts

ರಾಜ್ಯಕ್ಕೆ ಇನ್ನೊಂದು ಹೈ ಸ್ಪೀಡ್ ರೈಲ್ವೆ ಕಾರಿಡಾರ್ : ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಜತೆ ಎಚ್‌ಡಿಕೆ ಚರ್ಚೆ

ಹೊಸದಿಲ್ಲಿ : ಬಜೆಟ್ ನಂತರ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ರೈಲ್ವೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ,…

6 mins ago

ಮ.ಬೆಟ್ಟದಲ್ಲಿ ಸ್ವಚ್ಛತಾ ನಡಿಗೆ : ಕಸ ಸಂಗ್ರಹಿಸಿದ ಕಾಲೇಜು ವಿದ್ಯಾರ್ಥಿಗಳು

ಹನೂರು : ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ಕೊಳ್ಳೇಗಾಲ ವಾಸವಿ ಪ್ರಥಮ ದರ್ಜೆ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳು…

31 mins ago

ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್?

ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್ ನೀಡುವ ಸಾಧ್ಯತೆ ಇದೆ. ಪ್ರತಿ ವರ್ಷದಂತೆ ಈ ವರ್ಷವೂ ಮೆಟ್ರೊ…

2 hours ago

ಕಾಂಗ್ರೆಸ್‌ ಹೈಕಮಾಂಡ್‌ಗೆ ಕರ್ನಾಟಕ ರಾಜ್ಯವೇ ಎಟಿಎಂ: ವಿಜಯೇಂದ್ರ ಆಕ್ರೋಶ

ಬೆಂಗಳೂರು: ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿರುವ ಕಾಂಗ್ರೆಸ್‌ ಸರ್ಕಾರದ ಮುಖ್ಯಮಂತ್ರಿಗಳು ಅಬಕಾರಿ ವಿಚಾರದಲ್ಲಿ ಗಟ್ಟಿ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂಬುದು ಬಿಜೆಪಿ ಹಾಗೂ ಜೆಡಿಎಸ್‌…

2 hours ago

ಫೆ.14ರಿಂದ 18ರವರೆಗೆ ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆ: ಸಿದ್ಧತೆ ಪರಿಶೀಲಿಸಿದ ಎಈ ರಘು

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ.14 ರಿಂದ 18ರವರೆಗೆ…

2 hours ago

ಅಂತರರಾಷ್ಟ್ರೀಯ ವಾಣಿಜ್ಯ ಮೇಳ 2026: ಉತ್ಪಾದನೋತ್ತರ ಕೃಷಿ ಕಾರ್ಯಕ್ರಮವನ್ನು ಯಶ್ವಸಿಗೊಳಿಸಿ: ಎನ್.ಚಲುವರಾಯಸ್ವಾಮಿ

ಬೆಂಗಳೂರು: ನಮ್ಮ ಸರ್ಕಾರವು 2017ರಲ್ಲಿ ಪ್ರಾರಂಭಿಸಿದ ಸಾವಯವ ಮತ್ತು ಸಿರಿಧಾನ್ಯ ಮೇಳವು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆದಿರುವುದು ನಮ್ಮೆಲ್ಲರ ಹೆಮ್ಮೆ…

3 hours ago