ಚಾಮರಾಜನಗರ

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ ಏನು ಕ್ರಮ ಕೈಗೊಂಡಿದೆ ಎಂದು ಶಾಸಕ ಎಂಆರ್ ಮಂಜುನಾಥ್ ವಿಧಾನಸಭೆ ಅಧಿವೇಶನದಲ್ಲಿ ಪ್ರಶ್ನಿಸಿದರು.

ಈ ವೇಳೆ ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್ ಮಾತನಾಡಿ ಕಳೆದ 4 ವರ್ಷಗಳಿಂದ ಸಣ್ಣ ನೀರಾವರಿ ಇಲಾಖೆ ವತಿಯಿಂದ 9 ಕೋಟಿ ಅನುದಾನ ನೀಡಲಾಗಿದ್ದು, ನೀರಾವರಿ ಸಮಸ್ಯೆಗೆ ನಮ್ಮ ಸರ್ಕಾರ ಸೂಕ್ತ ಕ್ರಮ ವಹಿಸಿದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳಿದ್ದರೆ ಅದನ್ನು ಪರಿಹಾರ ಮಾಡಲು ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಮುಂದುವರೆದು ಶಾಸಕ ಎಂಆರ್‌ ಮಂಜುನಾಥ್ ಮಾತನಾಡಿ ಹನೂರು ತಾಲೂಕು ಭೌಗೋಳಿಕವಾಗಿ ವಿಸ್ತೀರ್ಣ ಹೊಂದಿದೆ. ಹನೂರು ತಾಲೂಕಿನ 25 ಗ್ರಾಮ ಪಂಚಾಯಿತಿಗಳ ಪೈಕಿ 10 ಗ್ರಾಮ ಪಂಚಾಯಿತಿಗಳು ಅರಣ್ಯದ ಮಧ್ಯಭಾಗದಲ್ಲಿ ಇರುವುದರಿಂದ ಅರಣ್ಯ ಇಲಾಖೆಯವರು ಕಾಮಗಾರಿ ಮಾಡಲು ಅನುಮತಿ ನೀಡದೆ ಇರುವುದರಿಂದ ಕಾಮಗಾರಿ ವಿಳಂಬವಾಗಿದೆ. ಕೇಂದ್ರ ಸರ್ಕಾರದ ಜಲ ಜೀವನ್ ಮಿಷನ್ ಯೋಜನೆ ಪೂರ್ಣಗೊಂಡಿಲ್ಲ ಮುಂದಿನ ತಿಂಗಳು ಕೇಂದ್ರ ಸರ್ಕಾರದಿಂದ ಕಾಮಗಾರಿ ನಡೆಸಲು ಒಪ್ಪಿಗೆ ಸಿಗಲಿದೆ ಎಂಬ ಭರವಸೆ ಇದೆ. ಕಳೆದ ಮೂರು ವರ್ಷಗಳಿಂದ ನಿರಂತರವಾಗಿ ಈ ಯೋಜನೆ ಪೂರ್ಣಗೊಳಿಸಲು ಇನ್ನಿಲ್ಲದ ಕಸರತ್ತು ನಡೆಸಲಾಗುತ್ತಿದೆ ಆದರೂ ಪೂರ್ಣಗೊಂಡಿಲ್ಲ ಈ ಬಗ್ಗೆ ಗ್ರಾಮೀಣ ಅಭಿವೃದ್ಧಿ ಸಚಿವರ ಗಮನಕ್ಕೂ ತರಲಾಗಿದೆ ಎಂದು ಸ್ಪಷ್ಟಪಡಿಸಿದರು.

ರಾಮಪುರ ಹೋಬಳಿ ವ್ಯಾಪ್ತಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ಸಮರ್ಪಕ ಮಳೆಯಾಗದೆ ಅಂತರ್ಜಲ ಮಟ್ಟ ಕುಸಿದಿದೆ ಪ್ರತಿ ವರ್ಷವೂ ಕೊಳವೆ ಬಾವಿಗಳನ್ನು ಕೊರೆಸಲಾಗುತ್ತಿದೆ ಆದರೆ ನೀರು ಬರುತ್ತಿಲ್ಲ ನೀರು ಬರುವವರೆಗೂ ಕೊಳವೆಬಾವಿಯನ್ನು ಕೊರೆಸುವಂಥಾಗಿದೆ ಎಂದರು.

ರಾಮಪುರ ಹೋಬಳಿ ವ್ಯಾಪ್ತಿಯ ರೈತರು ಹಾಗೂ ಸಾರ್ವಜನಿಕರಿಗೆ ನೀರಾವರಿ ಯೋಜನೆ ಕಲ್ಪಿಸಲು ಬಜೆಟ್ ನಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು 490 ಕೋಟಿ ವೆಚ್ಚದ ಯೋಜನೆಗೆ ಅನುಮೋದನೆ ನೀಡಿದ್ದಾರೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್, ಸಮಾಜ ಕಲ್ಯಾಣ ಇಲಾಖೆ ಸಚಿವ ಎಸ್ ಸಿ ಮಹದೇವಪ್ಪ ಸಂಸದ ಸುನಿಲ್ ಬೋಸ್ ರವರು ಹಾಗೂ ಅಧಿಕಾರಿಗಳಿಗೆ ಕ್ಷೇತ್ರದ ರೈತರ ಪರವಾಗಿ ಅಭಿನಂದನೆ ಸಲ್ಲಿಸಿದರು.

ಇನ್ನು ಮಳೆಗಾಲದ ಸಂದರ್ಭದಲ್ಲಿ ಮಳೆಯ ನೀರನ್ನು ಸಂಗ್ರಹಿಸಲು ಚೆಕ್ ಡ್ಯಾಮ್ ನಿರ್ಮಾಣ ಮಾಡಲು ಸಣ್ಣ ನೀರಾವರಿ ಇಲಾಖೆ ವತಿಯಿಂದ ಹೆಚ್ಚಿನ ಅನುದಾನ ನೀಡಬೇಕು ಎಂದು ಮನವಿ ಮಾಡಿದರು.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

16 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

16 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

16 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

16 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

16 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

19 hours ago