ಚಾಮರಾಜನಗರ

ತಿ.ನರಸೀಪುರದಲ್ಲಿ ಶೇವಾರು ಮತದಾನ ಎಷ್ಟು !

ತಿ.ನರಸೀಪುರ: ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ತಿ.ನರಸೀಪುರ ಕ್ಷೇತ್ರದಲ್ಲಿ ಶೇ. ಮತದಾನವಾಗಿದೆ.

ಕ್ಷೇತ್ರದ ೨೨೮ ಮತಗಟ್ಟೆ ಕೇಂದ್ರಗಳಲ್ಲಿ ಬೆಳಿಗ್ಗೆ ೭ ರಿಂದ ಆರಂಭಗೊಂಡ ಮತದಾನ ಪ್ರಕ್ರಿಯಲ್ಲಿ ಪ್ರಾರಂಭದಲ್ಲಿ ಹಲವು ಮತಗಟ್ಟೆಗಳಲ್ಲಿ ಚುರುಕಿನಿಂದ ನಡೆಯಿತು. ಮಧ್ಯಾಹ್ನದ ವೇಳೆಗೆ ಬಿಸಿಲಿನ ತಾಪದ ಹಿನ್ನೆಲೆಯಲ್ಲಿ ಮಂದಗತಿಯಲ್ಲಿ ಸಾಗಿತು. ಮಧ್ಯಾಹ್ನದ ನಂತರ ಬಹುತೇಕ ಮತಗಟ್ಟೆಗಳಲ್ಲಿ ಬಿರುಸಿನ ಮತದಾನ ನಡೆಯಿತು.

ಕ್ಷೇತ್ರದ ಒಂದೆರೆಡು ಕಡೆ ತಾಂತ್ರಿಕ ದೋಷ ಕಂಡು ಬಂದಿಂತಾದರೂ ತಕ್ಷಣವೇ ಸರಿಪಡಿಸಿ ಮತದಾನಕ್ಕೆ ಅವಕಾಶ ಕಲ್ಪಿಸಲಾಯಿತು. ಮತಗಟ್ಟೆ ಬಳಿ ರಾಜಕೀಯ ಪಕ್ಷಗಳ ಮುಖಂಡರು ಮತದಾರರನ್ನು ತಮ್ಮ ಅಭ್ಯರ್ಥಿ ಪರ ಮತ ಚಲಾಯಿಸುವಂತೆ ಕೋರುತ್ತಿದ್ದರು.

ತಿ.ನರಸೀಪುರ ಕ್ಷೇತ್ರದ ಮಾಜಿ ಶಾಸಕ ಎಂ. ಅಶ್ವಿನ್ ಕುವಾರ್ ವರುಣ ವಿಧಾನಸಭಾ ಕ್ಷೇತ್ರದ ತುಂಬಲ ಗ್ರಾಮದ ಮತಗಟ್ಟೆಯಲ್ಲಿ, ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ರಮೇಶ್ ಅವರು ಪಟ್ಟಣದ ಪಿಆರ್‌ಎಂ ಕಾಲೇಜಿನಲ್ಲಿ ಮತದಾನ ಮಾಡಿದರು.

ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಕುರುಬೂರಿನಲ್ಲಿ, ವಾಟಾಳು ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಅವರು ವಾಟಾಳು ಗ್ರಾಮದಲ್ಲಿ, ಪುರಸಭಾ ಮಾಜಿ ಅಧ್ಯಕ್ಷ ಹೆಳವರಹುಂಡಿ ಎನ್.ಸೋಮು ಹೆಳವರಹುಂಡಿ ಗ್ರಾಮದಲ್ಲಿ ಮತ ಚಲಾಯಿಸಿದರು.

ಸಮಾಜ ಕಲ್ಯಾಣ ಸಚಿವ ಡಾ.ಎಚ್. ಸಿ ಮಹದೇವಪ್ಪ ಅವರು ಬನ್ನೂರು – ಕೇತುಪುರ, ಸಿದ್ದನಹಂಡಿ ಗ್ರಾಮಗಳಿಗೆ ಭೇಟಿ ನೀಡಿ ಮತದಾನ ಪ್ರಕ್ರಿಯೆ ಪರಿಶೀಲಿಸಿದರು.

ತಾಲ್ಲೂಕಿನ ಕಗ್ಗಲೀಪುರ, ಕೇತುಪುರ ನಿಲುಸೋಗೆ, ಮೂಗೂರು, ಆಲಗೂಡು, ಮಾದಾಪುರ, ಹೆಮ್ಮಿಗೆ ಮೊದಲಾದ ಗ್ರಾಮಗಳಲ್ಲಿ ಮತದಾನ ಮಾಡಲು ಜನರು ಉದ್ದನೆಯ ಸಾಲಿನಲ್ಲಿ ನಿಂತಿದ್ದು ಕಂಡುಬಂದಿತು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಜ್ಯೋತಿಷಿ ಮಾತು ಕೇಳಿ ಹೆತ್ತ ತಾಯಿಯನ್ನೇ ಕೊಂದ ಮಗಳು !

ತುಮಕೂರು : ಜ್ಯೋತಿಷಿಯ ಮಾತು ನಂಬಿ ಮಗಳು ತಾಯಿಯನ್ನೇ ಕೊಲೆ‌ ಮಾಡಿರುವ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ. ಪುಷ್ಪಲತಾ…

53 mins ago

ಆರೋಗ್ಯ ಇಲಾಖೆಯ ಅಧಿಕಾರಿ ಅಬಕಾರಿ ಡಿಸಿಯಾಗಿ ನಿಯೋಜನೆ : ನಿಯಮ ಉಲ್ಲಂಘನೆ ಆರೋಪ

ಮಂಡ್ಯ : ಇತ್ತೀಚೆಗೆ ಹಲವು ಇಲಾಖಾ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದ ಸರ್ಕಾರ ಆದೇಶ ಹೊರಡಿಸಿದ್ದು, ಅದರಲ್ಲಿ ಮಂಡ್ಯ ಜಿಲ್ಲಾ ಆರೋಗ್ಯ…

2 hours ago

ಸಿದ್ದರಾಮಯ್ಯ ಅವರೇ ಐದು ವರ್ಷ ಮುಂದುವರಿಯುವ ಆಸೆ ಇದೆ : ಶಾಸಕ ಕೆ.ಹರೀಶ್‌ ಗೌಡ

ಮೈಸೂರು : ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವ ಆಸೆ ಇದೆ. ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ…

2 hours ago

ಭೀಕರ ಸರಣಿ ಅಪಘಾತ : ಬೆಂಗಳೂರಿನ 6 ವಿದ್ಯಾರ್ಥಿಗಳು ಸೇರಿ 7 ಮಂದಿ ಸಾವು

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ.ಸತ್ಯವರ ಗ್ರಾಮದ ಸಮೀಪದ ಹೊಸಕೋಟೆ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿ (NH-648) ಮತ್ತು…

3 hours ago

ಓದುಗರ ಪತ್ರ | ಬಸ್ ತಂಗುದಾಣ ನಿರ್ಮಿಸಿ

ಮೈಸೂರಿನ ರಾಮಕೃಷ್ಣ ನಗರದಲ್ಲಿರುವ, ರಾಮಕೃಷ್ಣ ವೃತ್ತದಿಂದ (ಆಂದೋಲನ ಸರ್ಕಲ್), ಕುವೆಂಪು ನಗರದ ಕಾಂಪ್ಲೆಕ್ ತನಕದ ಸುಮಾರು ಒಂದು ಕಿ.ಮೀ. ದೂರದ…

3 hours ago

ಶಿವರಾತ್ರಿ ಜಾತ್ರೆ | ಮ.ಬೆಟ್ಟದಲ್ಲಿ ಸಕಲ ಸಿದ್ಧತೆ ; ನಾಳೆಯಿಂದ ಐದು ದಿನ ಸಂಭ್ರಮ

ಹನೂರು : ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆ.14 ರಿಂದ 18 ರವರೆಗೆ ಐದು ದಿನಗಳ…

3 hours ago