ತಿ.ನರಸೀಪುರ: ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ತಿ.ನರಸೀಪುರ ಕ್ಷೇತ್ರದಲ್ಲಿ ಶೇ. ಮತದಾನವಾಗಿದೆ.
ಕ್ಷೇತ್ರದ ೨೨೮ ಮತಗಟ್ಟೆ ಕೇಂದ್ರಗಳಲ್ಲಿ ಬೆಳಿಗ್ಗೆ ೭ ರಿಂದ ಆರಂಭಗೊಂಡ ಮತದಾನ ಪ್ರಕ್ರಿಯಲ್ಲಿ ಪ್ರಾರಂಭದಲ್ಲಿ ಹಲವು ಮತಗಟ್ಟೆಗಳಲ್ಲಿ ಚುರುಕಿನಿಂದ ನಡೆಯಿತು. ಮಧ್ಯಾಹ್ನದ ವೇಳೆಗೆ ಬಿಸಿಲಿನ ತಾಪದ ಹಿನ್ನೆಲೆಯಲ್ಲಿ ಮಂದಗತಿಯಲ್ಲಿ ಸಾಗಿತು. ಮಧ್ಯಾಹ್ನದ ನಂತರ ಬಹುತೇಕ ಮತಗಟ್ಟೆಗಳಲ್ಲಿ ಬಿರುಸಿನ ಮತದಾನ ನಡೆಯಿತು.
ಕ್ಷೇತ್ರದ ಒಂದೆರೆಡು ಕಡೆ ತಾಂತ್ರಿಕ ದೋಷ ಕಂಡು ಬಂದಿಂತಾದರೂ ತಕ್ಷಣವೇ ಸರಿಪಡಿಸಿ ಮತದಾನಕ್ಕೆ ಅವಕಾಶ ಕಲ್ಪಿಸಲಾಯಿತು. ಮತಗಟ್ಟೆ ಬಳಿ ರಾಜಕೀಯ ಪಕ್ಷಗಳ ಮುಖಂಡರು ಮತದಾರರನ್ನು ತಮ್ಮ ಅಭ್ಯರ್ಥಿ ಪರ ಮತ ಚಲಾಯಿಸುವಂತೆ ಕೋರುತ್ತಿದ್ದರು.
ತಿ.ನರಸೀಪುರ ಕ್ಷೇತ್ರದ ಮಾಜಿ ಶಾಸಕ ಎಂ. ಅಶ್ವಿನ್ ಕುವಾರ್ ವರುಣ ವಿಧಾನಸಭಾ ಕ್ಷೇತ್ರದ ತುಂಬಲ ಗ್ರಾಮದ ಮತಗಟ್ಟೆಯಲ್ಲಿ, ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ರಮೇಶ್ ಅವರು ಪಟ್ಟಣದ ಪಿಆರ್ಎಂ ಕಾಲೇಜಿನಲ್ಲಿ ಮತದಾನ ಮಾಡಿದರು.
ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಕುರುಬೂರಿನಲ್ಲಿ, ವಾಟಾಳು ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಅವರು ವಾಟಾಳು ಗ್ರಾಮದಲ್ಲಿ, ಪುರಸಭಾ ಮಾಜಿ ಅಧ್ಯಕ್ಷ ಹೆಳವರಹುಂಡಿ ಎನ್.ಸೋಮು ಹೆಳವರಹುಂಡಿ ಗ್ರಾಮದಲ್ಲಿ ಮತ ಚಲಾಯಿಸಿದರು.
ಸಮಾಜ ಕಲ್ಯಾಣ ಸಚಿವ ಡಾ.ಎಚ್. ಸಿ ಮಹದೇವಪ್ಪ ಅವರು ಬನ್ನೂರು – ಕೇತುಪುರ, ಸಿದ್ದನಹಂಡಿ ಗ್ರಾಮಗಳಿಗೆ ಭೇಟಿ ನೀಡಿ ಮತದಾನ ಪ್ರಕ್ರಿಯೆ ಪರಿಶೀಲಿಸಿದರು.
ತಾಲ್ಲೂಕಿನ ಕಗ್ಗಲೀಪುರ, ಕೇತುಪುರ ನಿಲುಸೋಗೆ, ಮೂಗೂರು, ಆಲಗೂಡು, ಮಾದಾಪುರ, ಹೆಮ್ಮಿಗೆ ಮೊದಲಾದ ಗ್ರಾಮಗಳಲ್ಲಿ ಮತದಾನ ಮಾಡಲು ಜನರು ಉದ್ದನೆಯ ಸಾಲಿನಲ್ಲಿ ನಿಂತಿದ್ದು ಕಂಡುಬಂದಿತು.
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…
ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…
ಮಂಡ್ಯ : ಆಧುನಿಕ ಜಗತ್ತಿನಲ್ಲಿ ಪುರುಷರ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಗೆ ಹತ್ತಿಕ್ಕಲು ರಾಜ್ಯ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ…
ಬೆಂಗಳೂರು : ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಶಕ್ತಿಯಿಂದಲೇ ನಾನಿಂದು ಮುಖ್ಯಮಂತ್ರಿಯಾಗಿ ಜನಸೇವೆ ಸಲ್ಲಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ…