ಚಾಮರಾಜನಗರ

ತಿ.ನರಸೀಪುರದಲ್ಲಿ ಶೇವಾರು ಮತದಾನ ಎಷ್ಟು !

ತಿ.ನರಸೀಪುರ: ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ತಿ.ನರಸೀಪುರ ಕ್ಷೇತ್ರದಲ್ಲಿ ಶೇ. ಮತದಾನವಾಗಿದೆ.

ಕ್ಷೇತ್ರದ ೨೨೮ ಮತಗಟ್ಟೆ ಕೇಂದ್ರಗಳಲ್ಲಿ ಬೆಳಿಗ್ಗೆ ೭ ರಿಂದ ಆರಂಭಗೊಂಡ ಮತದಾನ ಪ್ರಕ್ರಿಯಲ್ಲಿ ಪ್ರಾರಂಭದಲ್ಲಿ ಹಲವು ಮತಗಟ್ಟೆಗಳಲ್ಲಿ ಚುರುಕಿನಿಂದ ನಡೆಯಿತು. ಮಧ್ಯಾಹ್ನದ ವೇಳೆಗೆ ಬಿಸಿಲಿನ ತಾಪದ ಹಿನ್ನೆಲೆಯಲ್ಲಿ ಮಂದಗತಿಯಲ್ಲಿ ಸಾಗಿತು. ಮಧ್ಯಾಹ್ನದ ನಂತರ ಬಹುತೇಕ ಮತಗಟ್ಟೆಗಳಲ್ಲಿ ಬಿರುಸಿನ ಮತದಾನ ನಡೆಯಿತು.

ಕ್ಷೇತ್ರದ ಒಂದೆರೆಡು ಕಡೆ ತಾಂತ್ರಿಕ ದೋಷ ಕಂಡು ಬಂದಿಂತಾದರೂ ತಕ್ಷಣವೇ ಸರಿಪಡಿಸಿ ಮತದಾನಕ್ಕೆ ಅವಕಾಶ ಕಲ್ಪಿಸಲಾಯಿತು. ಮತಗಟ್ಟೆ ಬಳಿ ರಾಜಕೀಯ ಪಕ್ಷಗಳ ಮುಖಂಡರು ಮತದಾರರನ್ನು ತಮ್ಮ ಅಭ್ಯರ್ಥಿ ಪರ ಮತ ಚಲಾಯಿಸುವಂತೆ ಕೋರುತ್ತಿದ್ದರು.

ತಿ.ನರಸೀಪುರ ಕ್ಷೇತ್ರದ ಮಾಜಿ ಶಾಸಕ ಎಂ. ಅಶ್ವಿನ್ ಕುವಾರ್ ವರುಣ ವಿಧಾನಸಭಾ ಕ್ಷೇತ್ರದ ತುಂಬಲ ಗ್ರಾಮದ ಮತಗಟ್ಟೆಯಲ್ಲಿ, ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ರಮೇಶ್ ಅವರು ಪಟ್ಟಣದ ಪಿಆರ್‌ಎಂ ಕಾಲೇಜಿನಲ್ಲಿ ಮತದಾನ ಮಾಡಿದರು.

ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಕುರುಬೂರಿನಲ್ಲಿ, ವಾಟಾಳು ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಅವರು ವಾಟಾಳು ಗ್ರಾಮದಲ್ಲಿ, ಪುರಸಭಾ ಮಾಜಿ ಅಧ್ಯಕ್ಷ ಹೆಳವರಹುಂಡಿ ಎನ್.ಸೋಮು ಹೆಳವರಹುಂಡಿ ಗ್ರಾಮದಲ್ಲಿ ಮತ ಚಲಾಯಿಸಿದರು.

ಸಮಾಜ ಕಲ್ಯಾಣ ಸಚಿವ ಡಾ.ಎಚ್. ಸಿ ಮಹದೇವಪ್ಪ ಅವರು ಬನ್ನೂರು – ಕೇತುಪುರ, ಸಿದ್ದನಹಂಡಿ ಗ್ರಾಮಗಳಿಗೆ ಭೇಟಿ ನೀಡಿ ಮತದಾನ ಪ್ರಕ್ರಿಯೆ ಪರಿಶೀಲಿಸಿದರು.

ತಾಲ್ಲೂಕಿನ ಕಗ್ಗಲೀಪುರ, ಕೇತುಪುರ ನಿಲುಸೋಗೆ, ಮೂಗೂರು, ಆಲಗೂಡು, ಮಾದಾಪುರ, ಹೆಮ್ಮಿಗೆ ಮೊದಲಾದ ಗ್ರಾಮಗಳಲ್ಲಿ ಮತದಾನ ಮಾಡಲು ಜನರು ಉದ್ದನೆಯ ಸಾಲಿನಲ್ಲಿ ನಿಂತಿದ್ದು ಕಂಡುಬಂದಿತು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

8 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

8 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

9 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

9 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

9 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

9 hours ago