ಚಾಮರಾಜನಗರ

ಸಾವಿರಾರು ಸಾರ್ವಜನಿಕರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿದ ಬಿಳಿ ಕುದುರೆ ವಾಹನ ಉತ್ಸವ

ಹನೂರು: ತಾಲೂಕಿನ ಪ್ರಸಿದ್ದ ಧಾರ್ಮಿಕ ಯಾತ್ರಾಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಶನಿವಾರ ರಾತ್ರಿ ಸಾಲೂರು ಬೃಹನ್ಮಠದ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಹಾಗೂ ಸಾವಿರಾರು ಸಾರ್ವಜನಿಕರ ಸಮ್ಮುಖದಲ್ಲಿ ಬಿಳಿ ಕುದುರೆ ವಾಹನ ಉತ್ಸವವು ವಿಜೃಂಭಣೆಯಿಂದ ನೆರವೇರಿತು. ಈ ಮೂಲಕ ಶರನ್ನವರಾತ್ರಿ ಉಯ್ಯಾಲೋತ್ಸವಕ್ಕೆ ತೆರೆ ಬಿದ್ದಿತು.

ದಸರಾ ಮಹೋತ್ಸವದ ಅಂಗವಾಗಿ ಮಾದಪ್ಪನ ದೇಗುಲದ ಪಶ್ಚಿಮ ದಿಕ್ಕಿನ ಕಂಠಶಾಲೆಯ ಆವರಣದಲ್ಲಿ ತೂಗೂಯ್ಯಾಲೆಯನ್ನು ನಿರ್ಮಿಸಿ ಅ.3 ರಂದು ರಾತ್ರಿ ಶಿವ ಪಾರ್ವತಿ ಉತ್ಸವಮೂರ್ತಿಯನ್ನು ಕೂರಿಸಿ ಶರನ್ನವರಾತ್ರಿ ಉಯ್ಯಾಲೋತ್ಸವಕ್ಕೆ ಚಾಲನೆ ನೀಡಲಾಗಿತ್ತು. ಬೇಡಗಂಪಣ ಸಂಪ್ರದಾಯದಂತೆ 9 ದಿನಗಳ ಕಾಲ ರಾತ್ರಿ 8.30ರ ಬಳಿಕ (ದೇಗುಲದಲ್ಲಿ ಪೂಜೆ ನಂತರ) ಸಾಲೂರು ಬೃಹನ್ಮಠದ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಬೇಡ ಗಂಪಣ ಅರ್ಚಕರಿಂದ ಪಡಿಸೇವೆ ಹಾಗೂ ವಿಶೇಷ ಪೂಜೆಯನ್ನು ಸಲ್ಲಿಸುವುದರ ಮೂಲಕ ಉಯ್ಯಾಲೋತ್ಸವವನ್ನು ನೆರವೇರಿಸಲಾಗುತ್ತಿತ್ತು. ಜೊತೆಗೆ ಮಹಾನವಮಿಯಂದು ಆಯುಧಗಳಿಗೆ ಪೂಜೆಯನ್ನು ಸಲ್ಲಿಸಲಾಗಿತ್ತು. ಶನಿವಾರ ರಾತ್ರಿ ವಿಜಯದಶಮಿಯ ಹಿನ್ನೆಲೆ ಶ್ವೇತ ವರ್ಣದ ಕುದುರೆ ವಾಹನೋತ್ಸವವನ್ನು ಸಾವಿರಾರು ಸಾರ್ವಜನಿಕರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿಸಲಾಯಿತು.

ಜಂಬೂ ಸವಾರಿ: ವಿಜಯದಶಮಿ ಹಿನ್ನಲೆ ದೇಗುಲದಲ್ಲಿ ರಾತ್ರಿ 9ರ ವೇಳೆಯಲ್ಲಿ ಮಾದಪ್ಪನಿಗೆ ಪೂಜೆಯನ್ನು ಸಲ್ಲಿಸಲಾಯಿತು. ಬಳಿಕ ವಜ್ರಾಭರಣದಿಂದ ಸಿಂಗರಿಸಿದ್ದ ಶಿವ, ಪಾರ್ವತಿ ಉತ್ಸವಮೂರ್ತಿಯನ್ನು ವಿವಿಧ ಪುಷ್ಪಗಳಿಂದ ಸಿಂಗರಿಸಿದ್ದ ಶ್ವೇತ ವರ್ಣದ ಕುದುರೆಯಲ್ಲಿ ಕೂರಿಸಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರ ಸಮ್ಮುಖದಲ್ಲಿ ಬೇಡಗಂಪಣ ಅರ್ಚಕರಿಂದ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ದುಷ್ಟ ಶಕ್ತಿಯ ಸಂಹಾರದ ಪ್ರತೀಕವಾಗಿ ಮಹದೇಶ್ವರಸ್ವಾಮಿಯ ಪಟ್ಟದ ಕತ್ತಿಯನ್ನು ಹಿಡಿದ ಬೇಡಗಂಪಣ ಅರ್ಚಕರು, ಶ್ರೀಗಳು ಹಾಗೂ ಸಾವಿರಾರು ಮಂದಿಯ ಸಮ್ಮುಖದಲ್ಲಿ ಸತ್ತಿಗೆ, ಸೂರಿಪಾನಿ, ನಂದಿಧ್ವಜ ಹಾಗೂ ವಾದ್ಯಮೇಳದೊಂದಿಗೆ ಕುದುರೆ ವಾಹನ ಉತ್ಸವ ಮೂರ್ತಿಯನ್ನು ದೇಗುಲದ ಸುತ್ತ ಪ್ರದಕ್ಷಿಣೆ ಹಾಕುವುದರ ಮೂಲಕ ಉತ್ಸವವನ್ನು ನೆರವೇರಿಸಲಾಯಿತು. ಈ ವೇಳೆ ನೆರೆದಿದ್ದ ಜನತೆ ಉಘೇ ಮಾದಪ್ಪ, ಜೈ ಮಹತ್ ಮಲೆಯಾ ಎಂಬಿತ್ಯಾದಿ ಜಯಘೋಷಗಳನ್ನು ಮೊಳಗಿಸಿದರು. ಈ ಮೂಲಕ ಮ.ಬೆಟ್ಟದಲ್ಲೂ ಜಂಬೂ ಸವಾರಿಯನ್ನು ನಡೆಸಿ ಶರನ್ನವರಾತ್ರಿಗೆ ತೆರೆ ಎಳೆಯಲಾಯಿತು.

ವಿಶೇಷ ಪೂಜೆಯಲ್ಲಿ ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ. ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್ ಗುಂಡೇಗಾಲ ಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಸೇರಿದಂತೆ ಇನ್ನಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

4 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

7 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

7 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

8 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

10 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

11 hours ago