ಚಾಮರಾಜನಗರ

ಶೀಲ ಶಂಕಿಸಿ ಪತ್ನಿ ಹತ್ಯೆ: ಪತಿಗೆ ಜೀವಾವಧಿ ಶಿಕ್ಷೆ ಪ್ರಕಟ

ಚಾಮರಾಜನಗರ: ಶೀಲ ಶಂಕಿಸಿ ಪತ್ನಿಯನ್ನು ಹತ್ಯೆ ಮಾಡಿದ್ದ ಆರೋಪಿ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೊಳ್ಳೇಗಾಲದ ಅಪರ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ತೀರ್ಪು ನೀಡಿದೆ.

ಮುಡಿಗುಂಡ ಗ್ರಾಮದ ಕುಮಾರ್‌ ಎಂಬಾತನೇ ಜೀವಾವಧಿ ಶಿಕ್ಷೆಗೆ ಗುರಿಯಾದ ಆರೋಪಿಯಾಗಿದ್ದಾನೆ.

ಸುಮಾರು 10 ವರ್ಷಗಳ ಹಿಂದೆ ಮುಳ್ಳೂರು ಗ್ರಾಮದ ಚಿನ್ನಮ್ಮ ಎಂಬುವವರನ್ನು ಆರೋಪಿ ಕುಮಾರ್‌ ಮದುವೆಯಾಗಿದ್ದು, ಇವರಿಗೆ ಒಬ್ಬ ಮಗ ಕೂಡ ಇದ್ದನು.

ಈ ಮಧ್ಯೆ ಆರೋಪಿ ಕುಮಾರ್‌ ಹೆಂಡತಿ ಚಿನ್ನಮ್ಮಳ ಶೀಲದ ಮೇಲೆ ಪದೇ ಪದೇ ಅನುಮಾನಪಡುತ್ತಿದ್ದ. ಗಂಡನ ಕಾಟ ತಾಳಲಾರದೇ ಚಿನ್ನಮ್ಮ ತವರು ಮನೆಗೆ ಹೋಗಿ ಅಲ್ಲೇ ಉಳಿದುಕೊಂಡಿದ್ದಳು.

ಈ ವೇಳೆ ಕುಮಾರ್‌ ತವರು ಮನೆಗೆ ಹೋಗಿ ಚೆನ್ನಾಗಿ ನೋಡಿಕೊಳ್ಳುವುದಾಗಿ ನಂಬಿಸಿ ಹೆಂಡತಿ ಚಿನ್ನಮ್ಮ ಹಾಗೂ ಪುತ್ರ ದರ್ಶನ್‌ನನ್ನು ಮನೆಗೆ ವಾಪಸ್‌ ಕರೆದುಕೊಂಡು ಬಂದಿದ್ದ.

ಆದರೆ ಹಳೆಯ ಚಾಳಿ ಬಿಡದ ಆರೋಪಿ ಕುಮಾರ್‌ ಚಿನ್ನಮ್ಮಳ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ್ದ. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಕುಮಾರ್‌ಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಆಂದೋಲನ ಡೆಸ್ಕ್

Recent Posts

ಸಿಲಿಂಡರ್ ಸ್ಪೋಟ ಪ್ರಕರಣ : ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…

5 hours ago

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

9 hours ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

9 hours ago

ಹೊಸ ವರ್ಷಾಚರಣೆಗೆ ಮುನ್ನೆಚ್ಚರಿಕೆ : ಸೂಕ್ಷ ಪ್ರದೇಶಗಳ ಬಗ್ಗೆ ಸಮೀಕ್ಷೆ ವರದಿಗೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…

10 hours ago

ಸಿಲಿಂಡರ್‌ ಸ್ಪೋಟ ಪ್ರಕರಣ : ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮಂಜುಳ ಸಾವು

ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…

11 hours ago

ಇತಿಹಾಸ ಸೃಷ್ಟಿಸಿದ ಬಿಜೆಪಿ : ತಿರುವನಂತಪುರಂನ ಮೇಯರ್ ಆಗಿ ವಿ.ವಿ.ರಾಜೇಶ್ ಆಯ್ಕೆ

ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…

11 hours ago