Wife Murdered Over Suspected Infidelity: Husband Sentenced to Life Imprisonment
ಚಾಮರಾಜನಗರ: ಶೀಲ ಶಂಕಿಸಿ ಪತ್ನಿಯನ್ನು ಹತ್ಯೆ ಮಾಡಿದ್ದ ಆರೋಪಿ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೊಳ್ಳೇಗಾಲದ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ.
ಮುಡಿಗುಂಡ ಗ್ರಾಮದ ಕುಮಾರ್ ಎಂಬಾತನೇ ಜೀವಾವಧಿ ಶಿಕ್ಷೆಗೆ ಗುರಿಯಾದ ಆರೋಪಿಯಾಗಿದ್ದಾನೆ.
ಸುಮಾರು 10 ವರ್ಷಗಳ ಹಿಂದೆ ಮುಳ್ಳೂರು ಗ್ರಾಮದ ಚಿನ್ನಮ್ಮ ಎಂಬುವವರನ್ನು ಆರೋಪಿ ಕುಮಾರ್ ಮದುವೆಯಾಗಿದ್ದು, ಇವರಿಗೆ ಒಬ್ಬ ಮಗ ಕೂಡ ಇದ್ದನು.
ಈ ಮಧ್ಯೆ ಆರೋಪಿ ಕುಮಾರ್ ಹೆಂಡತಿ ಚಿನ್ನಮ್ಮಳ ಶೀಲದ ಮೇಲೆ ಪದೇ ಪದೇ ಅನುಮಾನಪಡುತ್ತಿದ್ದ. ಗಂಡನ ಕಾಟ ತಾಳಲಾರದೇ ಚಿನ್ನಮ್ಮ ತವರು ಮನೆಗೆ ಹೋಗಿ ಅಲ್ಲೇ ಉಳಿದುಕೊಂಡಿದ್ದಳು.
ಈ ವೇಳೆ ಕುಮಾರ್ ತವರು ಮನೆಗೆ ಹೋಗಿ ಚೆನ್ನಾಗಿ ನೋಡಿಕೊಳ್ಳುವುದಾಗಿ ನಂಬಿಸಿ ಹೆಂಡತಿ ಚಿನ್ನಮ್ಮ ಹಾಗೂ ಪುತ್ರ ದರ್ಶನ್ನನ್ನು ಮನೆಗೆ ವಾಪಸ್ ಕರೆದುಕೊಂಡು ಬಂದಿದ್ದ.
ಆದರೆ ಹಳೆಯ ಚಾಳಿ ಬಿಡದ ಆರೋಪಿ ಕುಮಾರ್ ಚಿನ್ನಮ್ಮಳ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ್ದ. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಕುಮಾರ್ಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…