ಚಾಮರಾಜನಗರ

ಕೊಳ್ಳೇಗಾಲ | ಕಾಡು ಪ್ರಾಣಿಗಳ ದಾಳಿ: 3 ಎಕರೆ ಭತ್ತದ ಫಸಲು ನಾಶ

ಕೊಳ್ಳೇಗಾಲ: ತಾಲ್ಲೂಕಿನ ಗುಂಡಾಲ್ ಜಲಾಶಯ ವ್ಯಾಪ್ತಿಯ ಜಮೀನುಗಳಿಗೆ ಜಿಂಕೆಗಳು, ಕಡವೆಗಳು ಸೇರಿದಂತೆ ಕಾಡುಪ್ರಾಣಿಗಳು ದಾಳಿ ನಡೆಸಿ ಫಸಲು ನಾಶಪಡಿಸಿರುವ ಘಟನೆ ಜರುಗಿದೆ.

ಮೋಡಹಳ್ಳಿ ಗ್ರಾಮದ ಗುಂಡಾಲ್ ವ್ಯಾಪ್ತಿಯ ಸರ್ವೇ ನಂ 558 ನ 3.40 ಎಕರೆ ಜಮೀನನ್ನು ಕೊಳ್ಳೇಗಾಲ ಮೋಳೆ ಬಡಾವಣೆಯ ಗೌರಮ್ಮ ಎನ್ನುವರು ಗುತ್ತಿಗೆ ಪಡೆದು ಜಮೀನಿನಲ್ಲಿ ಭತ್ತ ಬೆಳೆದಿದ್ದರು. ಇಲ್ಲಿಗೆ ಜಿಂಕೆಗಳು, ಕಡವೆಗಳು ನುಗ್ಗಿ ಸಂಪೂರ್ಣ ಬೆಳೆ ಹಾನಿ ಮಾಡಿದ್ದು, ಸುಮಾರು ಎರಡು ಲಕ್ಷ ರೂ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ಗುಂಡಾಲ್ ಪ್ರದೇಶದ ಜಮೀನಿಗಳಿಗೆ ಎರಡು ಮೂರು ತಿಂಗಳಿಂದ ಕಾಡು ಪ್ರಾಣಿಗಳು ದಾಳಿ ನಡೆಸುತ್ತಿದ್ದರೂ ಸಹಾ ಯಾವುದೇ ಅಧಿಕಾರಿಗಳು ಅವುಗಳನ್ನು ತಡೆಗಟ್ಟಲು ಮುಂದಾಗುತ್ತಿಲ್ಲ. ಕಾಡುಪ್ರಾಣಿಗಳನ್ನು ರೈತರೇ ತಡೆಗಟ್ಟಲು ಪಟಾಕಿ ಕೇಳಿದರೂ ಸಹಾ ಅರಣ್ಯ ಅಧಿಕಾರಿಗಳು ನಿರಾಕರಿಸಿದ್ದಾರೆ.

ಇದರಿಂದಾಗಿ ಜಮೀನುಗಳಿಗೆ ಕಾಡುಪ್ರಾಣಿಗಳು ದಾಳಿ ಮಾಡಿ ಕಟಾವಿಗೆ ಬಂದ ಫಸಲನ್ನು ಹಾಳು ಮಾಡುತ್ತಿವೆ. ಕಾಡುಪ್ರಾಣಿಗಳ ಹಾವಳಿಗೆ ನೇರ ಹೊಣೆ ಅರಣ್ಯ ಅಧಿಕಾರಿಗಳೇ ಎಂದು ರೈತ ಸಂಘದ ಅಧ್ಯಕ್ಷರಾದ ಮಾದೇಶ್ ಆರೋಪ ಮಾಡಿದ್ದಾರೆ. ಬೆಳೆ ನಾಶಕ್ಕೆ ಕೂಡಲೇ ಸೂಕ್ತ ಪರಿಹಾರ ನೀಡಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

31 mins ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

6 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

13 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

13 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

13 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

13 hours ago