Wild animal attack 3 acres of paddy crop destroyed
ಕೊಳ್ಳೇಗಾಲ: ತಾಲ್ಲೂಕಿನ ಗುಂಡಾಲ್ ಜಲಾಶಯ ವ್ಯಾಪ್ತಿಯ ಜಮೀನುಗಳಿಗೆ ಜಿಂಕೆಗಳು, ಕಡವೆಗಳು ಸೇರಿದಂತೆ ಕಾಡುಪ್ರಾಣಿಗಳು ದಾಳಿ ನಡೆಸಿ ಫಸಲು ನಾಶಪಡಿಸಿರುವ ಘಟನೆ ಜರುಗಿದೆ.
ಮೋಡಹಳ್ಳಿ ಗ್ರಾಮದ ಗುಂಡಾಲ್ ವ್ಯಾಪ್ತಿಯ ಸರ್ವೇ ನಂ 558 ನ 3.40 ಎಕರೆ ಜಮೀನನ್ನು ಕೊಳ್ಳೇಗಾಲ ಮೋಳೆ ಬಡಾವಣೆಯ ಗೌರಮ್ಮ ಎನ್ನುವರು ಗುತ್ತಿಗೆ ಪಡೆದು ಜಮೀನಿನಲ್ಲಿ ಭತ್ತ ಬೆಳೆದಿದ್ದರು. ಇಲ್ಲಿಗೆ ಜಿಂಕೆಗಳು, ಕಡವೆಗಳು ನುಗ್ಗಿ ಸಂಪೂರ್ಣ ಬೆಳೆ ಹಾನಿ ಮಾಡಿದ್ದು, ಸುಮಾರು ಎರಡು ಲಕ್ಷ ರೂ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
ಗುಂಡಾಲ್ ಪ್ರದೇಶದ ಜಮೀನಿಗಳಿಗೆ ಎರಡು ಮೂರು ತಿಂಗಳಿಂದ ಕಾಡು ಪ್ರಾಣಿಗಳು ದಾಳಿ ನಡೆಸುತ್ತಿದ್ದರೂ ಸಹಾ ಯಾವುದೇ ಅಧಿಕಾರಿಗಳು ಅವುಗಳನ್ನು ತಡೆಗಟ್ಟಲು ಮುಂದಾಗುತ್ತಿಲ್ಲ. ಕಾಡುಪ್ರಾಣಿಗಳನ್ನು ರೈತರೇ ತಡೆಗಟ್ಟಲು ಪಟಾಕಿ ಕೇಳಿದರೂ ಸಹಾ ಅರಣ್ಯ ಅಧಿಕಾರಿಗಳು ನಿರಾಕರಿಸಿದ್ದಾರೆ.
ಇದರಿಂದಾಗಿ ಜಮೀನುಗಳಿಗೆ ಕಾಡುಪ್ರಾಣಿಗಳು ದಾಳಿ ಮಾಡಿ ಕಟಾವಿಗೆ ಬಂದ ಫಸಲನ್ನು ಹಾಳು ಮಾಡುತ್ತಿವೆ. ಕಾಡುಪ್ರಾಣಿಗಳ ಹಾವಳಿಗೆ ನೇರ ಹೊಣೆ ಅರಣ್ಯ ಅಧಿಕಾರಿಗಳೇ ಎಂದು ರೈತ ಸಂಘದ ಅಧ್ಯಕ್ಷರಾದ ಮಾದೇಶ್ ಆರೋಪ ಮಾಡಿದ್ದಾರೆ. ಬೆಳೆ ನಾಶಕ್ಕೆ ಕೂಡಲೇ ಸೂಕ್ತ ಪರಿಹಾರ ನೀಡಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…