ಚಾಮರಾಜನಗರ

ಕೊಳ್ಳೇಗಾಲ | ಕಾಡು ಪ್ರಾಣಿಗಳ ದಾಳಿ: 3 ಎಕರೆ ಭತ್ತದ ಫಸಲು ನಾಶ

ಕೊಳ್ಳೇಗಾಲ: ತಾಲ್ಲೂಕಿನ ಗುಂಡಾಲ್ ಜಲಾಶಯ ವ್ಯಾಪ್ತಿಯ ಜಮೀನುಗಳಿಗೆ ಜಿಂಕೆಗಳು, ಕಡವೆಗಳು ಸೇರಿದಂತೆ ಕಾಡುಪ್ರಾಣಿಗಳು ದಾಳಿ ನಡೆಸಿ ಫಸಲು ನಾಶಪಡಿಸಿರುವ ಘಟನೆ ಜರುಗಿದೆ.

ಮೋಡಹಳ್ಳಿ ಗ್ರಾಮದ ಗುಂಡಾಲ್ ವ್ಯಾಪ್ತಿಯ ಸರ್ವೇ ನಂ 558 ನ 3.40 ಎಕರೆ ಜಮೀನನ್ನು ಕೊಳ್ಳೇಗಾಲ ಮೋಳೆ ಬಡಾವಣೆಯ ಗೌರಮ್ಮ ಎನ್ನುವರು ಗುತ್ತಿಗೆ ಪಡೆದು ಜಮೀನಿನಲ್ಲಿ ಭತ್ತ ಬೆಳೆದಿದ್ದರು. ಇಲ್ಲಿಗೆ ಜಿಂಕೆಗಳು, ಕಡವೆಗಳು ನುಗ್ಗಿ ಸಂಪೂರ್ಣ ಬೆಳೆ ಹಾನಿ ಮಾಡಿದ್ದು, ಸುಮಾರು ಎರಡು ಲಕ್ಷ ರೂ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ಗುಂಡಾಲ್ ಪ್ರದೇಶದ ಜಮೀನಿಗಳಿಗೆ ಎರಡು ಮೂರು ತಿಂಗಳಿಂದ ಕಾಡು ಪ್ರಾಣಿಗಳು ದಾಳಿ ನಡೆಸುತ್ತಿದ್ದರೂ ಸಹಾ ಯಾವುದೇ ಅಧಿಕಾರಿಗಳು ಅವುಗಳನ್ನು ತಡೆಗಟ್ಟಲು ಮುಂದಾಗುತ್ತಿಲ್ಲ. ಕಾಡುಪ್ರಾಣಿಗಳನ್ನು ರೈತರೇ ತಡೆಗಟ್ಟಲು ಪಟಾಕಿ ಕೇಳಿದರೂ ಸಹಾ ಅರಣ್ಯ ಅಧಿಕಾರಿಗಳು ನಿರಾಕರಿಸಿದ್ದಾರೆ.

ಇದರಿಂದಾಗಿ ಜಮೀನುಗಳಿಗೆ ಕಾಡುಪ್ರಾಣಿಗಳು ದಾಳಿ ಮಾಡಿ ಕಟಾವಿಗೆ ಬಂದ ಫಸಲನ್ನು ಹಾಳು ಮಾಡುತ್ತಿವೆ. ಕಾಡುಪ್ರಾಣಿಗಳ ಹಾವಳಿಗೆ ನೇರ ಹೊಣೆ ಅರಣ್ಯ ಅಧಿಕಾರಿಗಳೇ ಎಂದು ರೈತ ಸಂಘದ ಅಧ್ಯಕ್ಷರಾದ ಮಾದೇಶ್ ಆರೋಪ ಮಾಡಿದ್ದಾರೆ. ಬೆಳೆ ನಾಶಕ್ಕೆ ಕೂಡಲೇ ಸೂಕ್ತ ಪರಿಹಾರ ನೀಡಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

12 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

12 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

13 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

15 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

18 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

18 hours ago