ಗುಂಡ್ಲುಪೇಟೆ: ಕಾಡುಪ್ರಾಣಿಗಳ ಹಾವಳಿಗೆ ಬ್ರೇಕ್ ಹಾಕಿ. ನಷ್ಟಕ್ಕೆ ಒಳಗಾದವರಿಗೆ ಪರಿಹಾರ ನೀಡಿ ಎಂದು ಗುಂಡ್ಲುಪೇಟೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಅವರು ಅರಣ್ಯಾಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಗುಂಡ್ಲುಪೇಟೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿದ ಅವರು, ಓಂಕಾರ ಅರಣ್ಯ ವಲಯದಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಿದ್ದು, ಜನರಲ್ಲಿರುವ ಭಯದ ವಾತಾವರಣವನ್ನು ಅರಣ್ಯಾಧಿಕಾರಿಗಳು ಹೋಗಲಾಡಿಸಬೇಕು. ರೈತರು ತೇಗದ ಮರ ಕಟಿಂಗ್ಗೆ ಅರಣ್ಯ ಇಲಾಖೆ ಕಚೇರಿಗೆ ಭೇಟಿ ನೀಡುತ್ತಾರೆ. ಅವರನ್ನು ಜಾಸ್ತಿ ಅಲೆಸಬೇಡಿ. ಬೇಗ ಕಟಿಂಗ್ ಮಾಡಿಕೊಡಿ. ವಿಳಂಬವಾದರೆ ನನಗೆ ಹೇಳುತ್ತಾರೆ. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ಆಗಬಾರದು ಎಂದು ಅರಣ್ಯಾಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಇನ್ನೂ ಸಭೆಯಲ್ಲಿ ಓಂಕಾರ ವಲಯದಂಚಿನ ಗ್ರಾಮಗಳ ರೈತರ ಬೆಳೆ ಹಾನಿ, ಜಾನುವಾರು ಮೇಲೆ ಪ್ರಾಣಿಗಳ ದಾಳಿಗೆ ಅರಣ್ಯ ಇಲಾಖೆ 84 ಲಕ್ಷ ಪರಿಹಾರ ನೀಡಿದೆ. ಇನ್ನೂ 29 ಲಕ್ಷ ಪರಿಹಾರ ನೀಡಬೇಕಿದೆ ಎಂದು ಓಂಕಾರ ವಲಯ ಅರಣ್ಯಾಧಿಕಾರಿ ಸತೀಶ್ ಕುಮಾರ್ ಮಾಹಿತಿ ನೀಡಿದರು. ಇದಕ್ಕೆ ಸ್ಪಂದಿಸಿದ ಶಾಸಕರು, ಸಚಿವರೊಂದಿಗೆ ಮಾತನಾಡಿ ಅನುದಾನ ಕೊಡಿಸಲು ಪ್ರಯತ್ನಿಸುವೆ ಎಂದು ಭರವಸೆ ನೀಡಿದರು.
ಹನೂರು : ಕಾವೇರಿ ವನ್ಯಜೀವಿಧಾಮದ ಹೊಲೆಮುರಿದಟ್ಟಿ ಕರಿಕಲ್ಲು ಗುಡ್ಡ ಅರಣ್ಯ ಪ್ರದೇಶದಲ್ಲಿ ಶೂಟ್ಔಟ್ ನಡೆದ ಸ್ಥಳಕ್ಕೆ ಪ್ರಕರಣದ ಪ್ರಮುಖ ಸಾಕ್ಷಿ…
ಸಿಎಂ ಭೇಟಿಯಾಗಿ ಚರ್ಚೆ ; ಖಚಿತಪಡಿಸದ ಕಾಂಗ್ರೆಸ್ ನಾಯಕರು ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕ್ರೇಜಿಸ್ಟಾರ್…
ಸಚಿವರಾದ ಕೆಲವೇ ದಿನಗಳಲ್ಲಿ ಸಂಪುಟದಿಂದ ನಾಗೇಂದ್ರ ಹೊರಕ್ಕೆ ಬೆಂಗಳೂರು: ಮಾಜಿ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್…
ಕಠ್ಮಂಡು: ನೇಪಾಳದಲ್ಲಿ ಸಂಭವಿಸಿದ ವಿನಾಶಕಾರಿ ಪ್ರವಾಹಕ್ಕೆ ಸಾವಿನ ಸಂಖ್ಯೆ 682ಕ್ಕೆ ಏರಿಕೆಯಾಗಿದೆ. 2400ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದು, ಇದುವರೆಗೂ 4400ಕ್ಕೂ…
ನವದೆಹಲಿ: ದೇಶವು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಪ್ರಗತಿ ಸಾಧಿಸಿ 'ವಿಕಸಿತ ಭಾರತ'ವಾಗಿ ರೂಪುಗೊಳ್ಳಬೇಕಾದರೆ, ಯುವ ಜನತೆ ಮಾದಕ ವಸ್ತುಗಳ ಪಿಡುಗಿನಿಂದ…
ಮೈಸೂರು: ಮೊದಲ ಹಂತದಲ್ಲಿ ಆಗಮಿಸಿರುವ ದಸರಾ ಆನೆಗಳಿಗೆ ತೂಕ ಪರೀಕ್ಷೆ ಮಾಡಲಾಗಿದೆ. ಶ್ರೀಕಂಠ ಆನೆ ಹೆಚ್ಚು ತೂಕ ಹೊಂದಿದೆ. ಆದರೆ…