ಚಾಮರಾಜನಗರ

ಅರಣ್ಯ ಇಲಾಖೆ ಅಧಿಕಾರಿಗಳಿಗೆ ಖಡಕ್‌ ಸೂಚನೆ ಕೊಟ್ಟ ಗುಂಡ್ಲುಪೇಟೆ ಶಾಸಕ ಎಚ್‌.ಎಂ.ಗಣೇಶ್‌ ಪ್ರಸಾದ್‌

ಗುಂಡ್ಲುಪೇಟೆ: ಕಾಡುಪ್ರಾಣಿಗಳ ಹಾವಳಿಗೆ ಬ್ರೇಕ್‌ ಹಾಕಿ. ನಷ್ಟಕ್ಕೆ ಒಳಗಾದವರಿಗೆ ಪರಿಹಾರ ನೀಡಿ ಎಂದು ಗುಂಡ್ಲುಪೇಟೆ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಅವರು ಅರಣ್ಯಾಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಗುಂಡ್ಲುಪೇಟೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿದ ಅವರು, ಓಂಕಾರ ಅರಣ್ಯ ವಲಯದಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಿದ್ದು, ಜನರಲ್ಲಿರುವ ಭಯದ ವಾತಾವರಣವನ್ನು ಅರಣ್ಯಾಧಿಕಾರಿಗಳು ಹೋಗಲಾಡಿಸಬೇಕು. ರೈತರು ತೇಗದ ಮರ ಕಟಿಂಗ್‌ಗೆ ಅರಣ್ಯ ಇಲಾಖೆ ಕಚೇರಿಗೆ ಭೇಟಿ ನೀಡುತ್ತಾರೆ. ಅವರನ್ನು ಜಾಸ್ತಿ ಅಲೆಸಬೇಡಿ. ಬೇಗ ಕಟಿಂಗ್‌ ಮಾಡಿಕೊಡಿ. ವಿಳಂಬವಾದರೆ ನನಗೆ ಹೇಳುತ್ತಾರೆ. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ಆಗಬಾರದು ಎಂದು ಅರಣ್ಯಾಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದರು.

ಇನ್ನೂ ಸಭೆಯಲ್ಲಿ ಓಂಕಾರ ವಲಯದಂಚಿನ ಗ್ರಾಮಗಳ ರೈತರ ಬೆಳೆ ಹಾನಿ, ಜಾನುವಾರು ಮೇಲೆ ಪ್ರಾಣಿಗಳ ದಾಳಿಗೆ ಅರಣ್ಯ ಇಲಾಖೆ 84 ಲಕ್ಷ ಪರಿಹಾರ ನೀಡಿದೆ. ಇನ್ನೂ 29 ಲಕ್ಷ ಪರಿಹಾರ ನೀಡಬೇಕಿದೆ ಎಂದು ಓಂಕಾರ ವಲಯ ಅರಣ್ಯಾಧಿಕಾರಿ ಸತೀಶ್‌ ಕುಮಾರ್‌ ಮಾಹಿತಿ ನೀಡಿದರು. ಇದಕ್ಕೆ ಸ್ಪಂದಿಸಿದ ಶಾಸಕರು, ಸಚಿವರೊಂದಿಗೆ ಮಾತನಾಡಿ ಅನುದಾನ ಕೊಡಿಸಲು ಪ್ರಯತ್ನಿಸುವೆ ಎಂದು ಭರವಸೆ ನೀಡಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ತೆರವಾಯಿತೆ

ತೆರವಾಯಿತೆ ಫುಟ್‌ಪಾತ್‌ನಲ್ಲಿ ಕಟ್ಟಿಕೊಂಡಿದ್ದ ಅನ್ನದ ಬಟ್ಟಲು; ನಿರುದ್ಯೋಗ ನಿವಾರಣಾತೊಟ್ಟಿಲು ಶಕ್ತಿ ತುಂಬಲಿ ಮತ್ತೊಂದು ಕಟ್ಟಲು ಎಲ್ಲರ ಜೀವನ ಜಾಲವೇ ಮುಂದಕೂ…

3 hours ago

ಓದುಗರ ಪತ್ರ: ಕೆಪಿಎಸ್‌ಸಿ ಹಗರಣ; ಯುವಜನರ ಭವಿಷ್ಯಕ್ಕೆ ಕೊಳ್ಳಿ

ಕೆಪಿಎಸ್‌ಸಿ ಭ್ರಷ್ಟಾಚಾರದ ಕುರಿತು ಇತ್ತೀಚಿನ ಸುದ್ದಿ ಕಣ್ಣು ತೆರೆಸುವಂತಿದೆ. ದಕ್ಷ ಅಧಿಕಾರಿಗಳನ್ನು ಆರಿಸಬೇಕಾದ ಸಾಂವಿಧಾನಿಕ ಸಂಸ್ಥೆಯ ಅಧ್ಯಕ್ಷರೇ ಅಮಾನತ್ತುಗೊಂಡಿರುವುದು ಇಡೀ…

3 hours ago

ಓದುಗರ ಪತ್ರ: ಯಕ್ಷಪ್ರಶ್ನೆ

ಮಾಸ್ಕ್ ಧರಿಸಿ ಸಿಟಿ ಬಸ್ಸಿನಲ್ಲಿ ಸಂಚರಿಸಿ ರಿಯಾಲಿಟಿ ಚೆಕ್ ನಡೆಸಿದ ಸಾರಿಗೆ ಸಚಿವ ಭೈರತಿ ಸುರೇಶ್ ಅವರು ಕರ್ತವ್ಯಲೋಪ ಎಸಗಿದ…

3 hours ago

ಓದುಗರ ಪತ್ರ: ಫುಟ್‌ಪಾತ್ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ

ಸುಪ್ರೀಂಕೋರ್ಟ್ ಆದೇಶದಂತೆ ಬೆಂಗಳೂರಿನ ನಂತರ ಈಗ ಮೈಸೂರಿನಲ್ಲೂ ಫುಟ್‌ಪಾತ್ ಒತ್ತುವರಿ ತೆರವು ಮಾಡುತ್ತಿರುವುದು ಸ್ವಾಗತಾರ್ಹ. ಇದರಿಂದ ಪಾದಚಾರಿಗಳಿಗೆ ಅನುಕೂಲವಾಗುತ್ತದೆ. ಇದೇ…

3 hours ago

ಓದುಗರ ಪತ್ರ: ಪರೀಕ್ಷಾ ಶುಲ್ಕ ಗೊಂದಲ

ರಾಜ್ಯ ಸರ್ಕಾರವು ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಧಿಸೂಚನೆ ಹೊರಡಿಸಿದು, ಸ್ಪರ್ಧಾಕಾಂಕ್ಷಿಗಳು ಆನ್ಲೆ ನ್ ಮೂಲಕ ಅರ್ಜಿಸಲ್ಲಿಸಲು ಕರ್ನಾಟಕ ಪರೀಕ್ಷಾ…

3 hours ago

ಮಮ ಡೇಟಾ: ಆಧಾರ್ ಕುರಿತ ಆತಂಕಗಳು

ಡಿಜಿಟಲ್ ಗುರುತಿನ ವ್ಯವಸ್ಥೆಯಾಗಿ ಹುಟ್ಟಿಕೊಂಡ ಆಧಾರ್, ಡಿಜಿಟಲ್ ಆಡಳಿತಕ್ಕೆ ಚುಕ್ಕಾಣಿಯಾಗತೊಡಗಿದ್ದು, ಜನರಲ್ಲಿ ತಮ್ಮ ಖಾಸಗಿತನದ ಸುರಕ್ಷತೆಯ ಬಗ್ಗೆ ಆತಂಕಗಳನ್ನು ನಿಧಾನಕ್ಕೆ…

3 hours ago