ಚಾಮರಾಜನಗರ

ಹನೂರು: ಕಾಡುಹಂದಿ ದಾಳಿ: ಮುಸುಕಿನ ಜೋಳ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ತಾಲ್ಲೂಕಿನ ಎಂಟಿ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಬೆಳೆದಿದ್ದ ಮುಸುಕಿನ ಜೋಳವನ್ನು ಸುಮಾರು ಐವತ್ತಕ್ಕೂ ಹೆಚ್ಚು ಕಾಡು ಹಂದಿಗಳು ನಾಶ ಮಾಡಿರುವ ಘಟನೆ ಬುಧವಾರ ತಡರಾತ್ರಿ ಜರುಗಿದೆ.

ಎಂಟಿ ದೊಡ್ಡಿ ಗ್ರಾಮದ ಪುಟ್ಟಸ್ವಾಮಿರವರಿಗೆ ಸೇರಿದ ಸರ್ವೆ ನಂಬರ್ 294ರಲ್ಲಿ 1.5 ಎಕರೆಯಲ್ಲಿ ಸಮರ್ಪಕ ಮಳೆಯಾಗದಿದ್ದರೂ ಮುಸುಕಿನ ಜೋಳವನ್ನು ತಮ್ಮ ಬೋರ್‌ವೆಲ್‌ನಲ್ಲಿರುವ ನೀರನ್ನು ಬಳಸಿಕೊಂಡು ಕಷ್ಟಪಟ್ಟು ಬೆಳೆದಿದ್ದರು.

ಆದರೆ ಬುಧವಾರ ತಡರಾತ್ರಿ ಐವತ್ತಕ್ಕೂ ಹೆಚ್ಚು ಕಾಡು ಹಂದಿಗಳು ದಾಳಿ ಮಾಡಿ ಒಂದು ಎಕರೆಯಷ್ಟು ತೆನೆ ಕಚ್ಚಿದ್ದ ಜೋಳದ ಫಸಲನ್ನು ಸಂಪೂರ್ಣವಾಗಿ ನಾಶಮಾಡಿದೆ. ಇದರಿಂದ ರೈತನಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ: ಹನೂರು ತಾಲ್ಲೂಕಿನ ಎಂಟಿ ದೊಡ್ಡಿ ಮಲ್ಲಯ್ಯನಪುರ ಗ್ರಾಮಗಳಲ್ಲಿ ಕಾಡಾನೆಗಳು, ಕಾಡು ಹಂದಿಗಳು, ಚಿರತೆ ಸೇರಿದಂತೆ ಇನ್ನಿತರ ಕಾಡುಪ್ರಾಣಿಗಳ ಹಾವಳಿ ನಿರಂತರವಾಗಿ ನಡೆಯುತ್ತಲೇ ಇದೆ. ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ರೈತರು ತಾಲ್ಲೂಕು ಕೇಂದ್ರದಲ್ಲಿ ಹಲವಾರು ಬಾರಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ವೇಳೆ ಕಾಡುಪ್ರಾಣಿಗಳ ಹಾವಳಿಗೆ ನಿಯಂತ್ರಣ ಮಾಡುವುದಾಗಿ ಕೇವಲ ಭರವಸೆಗಳನ್ನಷ್ಟೇ ನೀಡುತ್ತಿದ್ದಾರೆ. ಇದುವರೆಗೂ ಕಾಡುಪ್ರಾಣಿಗಳ ಹಾವಳಿಗೆ ಶಾಶ್ವತ ಕ್ರಮ ಕೈಗೊಂಡಿಲ್ಲ ಎಂದು ರೈತ ಮುಖಂಡ ಶ್ರೀನಿವಾಸ್ ಆರೋಪಿಸಿದ್ದಾರೆ.

ಸೂಕ್ತ ಪರಿಹಾರಕ್ಕೆ ಆಗ್ರಹ: ಪುಟ್ಟಸ್ವಾಮಿ ಎಂಬುವವರು ಬೆಳೆದಿದ್ದ ಒಂದು ಎಕರೆ ಮುಸುಕಿನ ಜೋಳವು ಸಂಪೂರ್ಣ ನಾಶವಾಗಿರುವುದರಿಂದ ರೈತನಿಗೆ ಸೂಕ್ತ ಪರಿಹಾರ ನೀಡುವಂತೆ ರೈತ ಮುಖಂಡರಾದ ಪ್ರಕಾಶ್, ಕಾಳಪ್ಪ, ರಘು, ಜಯರಾಜು, ವೆಂಕಟೇಶ್ ಒತ್ತಾಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

6 hours ago

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…

6 hours ago

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

7 hours ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

8 hours ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

8 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

16 hours ago