ಚಾಮರಾಜನಗರ

ಹನೂರು: ಕಾಡುಹಂದಿ ದಾಳಿ: ಮುಸುಕಿನ ಜೋಳ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ತಾಲ್ಲೂಕಿನ ಎಂಟಿ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಬೆಳೆದಿದ್ದ ಮುಸುಕಿನ ಜೋಳವನ್ನು ಸುಮಾರು ಐವತ್ತಕ್ಕೂ ಹೆಚ್ಚು ಕಾಡು ಹಂದಿಗಳು ನಾಶ ಮಾಡಿರುವ ಘಟನೆ ಬುಧವಾರ ತಡರಾತ್ರಿ ಜರುಗಿದೆ.

ಎಂಟಿ ದೊಡ್ಡಿ ಗ್ರಾಮದ ಪುಟ್ಟಸ್ವಾಮಿರವರಿಗೆ ಸೇರಿದ ಸರ್ವೆ ನಂಬರ್ 294ರಲ್ಲಿ 1.5 ಎಕರೆಯಲ್ಲಿ ಸಮರ್ಪಕ ಮಳೆಯಾಗದಿದ್ದರೂ ಮುಸುಕಿನ ಜೋಳವನ್ನು ತಮ್ಮ ಬೋರ್‌ವೆಲ್‌ನಲ್ಲಿರುವ ನೀರನ್ನು ಬಳಸಿಕೊಂಡು ಕಷ್ಟಪಟ್ಟು ಬೆಳೆದಿದ್ದರು.

ಆದರೆ ಬುಧವಾರ ತಡರಾತ್ರಿ ಐವತ್ತಕ್ಕೂ ಹೆಚ್ಚು ಕಾಡು ಹಂದಿಗಳು ದಾಳಿ ಮಾಡಿ ಒಂದು ಎಕರೆಯಷ್ಟು ತೆನೆ ಕಚ್ಚಿದ್ದ ಜೋಳದ ಫಸಲನ್ನು ಸಂಪೂರ್ಣವಾಗಿ ನಾಶಮಾಡಿದೆ. ಇದರಿಂದ ರೈತನಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ: ಹನೂರು ತಾಲ್ಲೂಕಿನ ಎಂಟಿ ದೊಡ್ಡಿ ಮಲ್ಲಯ್ಯನಪುರ ಗ್ರಾಮಗಳಲ್ಲಿ ಕಾಡಾನೆಗಳು, ಕಾಡು ಹಂದಿಗಳು, ಚಿರತೆ ಸೇರಿದಂತೆ ಇನ್ನಿತರ ಕಾಡುಪ್ರಾಣಿಗಳ ಹಾವಳಿ ನಿರಂತರವಾಗಿ ನಡೆಯುತ್ತಲೇ ಇದೆ. ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ರೈತರು ತಾಲ್ಲೂಕು ಕೇಂದ್ರದಲ್ಲಿ ಹಲವಾರು ಬಾರಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ವೇಳೆ ಕಾಡುಪ್ರಾಣಿಗಳ ಹಾವಳಿಗೆ ನಿಯಂತ್ರಣ ಮಾಡುವುದಾಗಿ ಕೇವಲ ಭರವಸೆಗಳನ್ನಷ್ಟೇ ನೀಡುತ್ತಿದ್ದಾರೆ. ಇದುವರೆಗೂ ಕಾಡುಪ್ರಾಣಿಗಳ ಹಾವಳಿಗೆ ಶಾಶ್ವತ ಕ್ರಮ ಕೈಗೊಂಡಿಲ್ಲ ಎಂದು ರೈತ ಮುಖಂಡ ಶ್ರೀನಿವಾಸ್ ಆರೋಪಿಸಿದ್ದಾರೆ.

ಸೂಕ್ತ ಪರಿಹಾರಕ್ಕೆ ಆಗ್ರಹ: ಪುಟ್ಟಸ್ವಾಮಿ ಎಂಬುವವರು ಬೆಳೆದಿದ್ದ ಒಂದು ಎಕರೆ ಮುಸುಕಿನ ಜೋಳವು ಸಂಪೂರ್ಣ ನಾಶವಾಗಿರುವುದರಿಂದ ರೈತನಿಗೆ ಸೂಕ್ತ ಪರಿಹಾರ ನೀಡುವಂತೆ ರೈತ ಮುಖಂಡರಾದ ಪ್ರಕಾಶ್, ಕಾಳಪ್ಪ, ರಘು, ಜಯರಾಜು, ವೆಂಕಟೇಶ್ ಒತ್ತಾಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

6 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

6 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

6 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

6 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

6 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

9 hours ago