ಚಾಮರಾಜನಗರ

ಹನೂರು | ಕಾಡಾನೆ ದಾಳಿ: ಲಕ್ಷಾಂತರ ರೂ ಮೌಲ್ಯದ ಬೆಳೆ ನಾಶ

ಹನೂರು: ತಾಲ್ಲೂಕಿನ ಹೂಗ್ಯಂ ವಲಯ ವ್ಯಾಪ್ತಿಯ ಗಾಜನೂರು ಗ್ರಾಮದ ಗೋವಿಂದ ಎಂಬುವವರಿಗೆ ಸೇರಿದ ಜಮೀನಿಗೆ ಕಾಡಾನೆಗಳು ಲಗ್ಗೆ ಇಟ್ಟು ಲಕ್ಷಾಂತರ ಬೆಳೆ ಬಾಳುವ ಫಸಲನ್ನು ನಾಶ ಮಾಡಿವೆ. ಈ ಹಿನ್ನೆಲೆಯಲ್ಲಿ ನೊಂದ ರೈತನಿಗೆ ಸೂಕ್ತ ಪರಿಹಾರ ಕೊಡುವಂತೆ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಅಮ್ಜದ್ ಖಾನ್ ಒತ್ತಾಯಿಸಿದ್ದಾರೆ.

ಕಳೆದ ತಿಂಗಳು ಹೂಗ್ಯಂ ವಲಯ ವ್ಯಾಪ್ತಿಯ ಮಿಣ್ಯಂ ಸಮೀಪದ ಮಹದೇಶ್ವರ ದೇವಸ್ಥಾನದ ಸಮೀಪ 5 ಹುಲಿಗಳು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಈ ಮಧ್ಯೆ ಗಸ್ತು ಸಿಬ್ಬಂದಿಗಳು ಸಮರ್ಪಕವಾಗಿ ಕರ್ತವ್ಯ ನಿರ್ವಹಿಸದ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ ಕಾಡುಪ್ರಾಣಿಗಳು ನಿರಂತರವಾಗಿ ರೈತರ ಜಮೀನುಗಳಿಗೆ ನುಗ್ಗಿ ಫಸಲನ್ನು ನಾಶ ಮಾಡುತ್ತಿದೆ.

ಗಾಜನೂರಿನ ಗೋವಿಂದ ಎಂಬುವರ ಜಮೀನಿಗೆ ಮಧ್ಯರಾತ್ರಿ 12 ಗಂಟೆಯ ವೇಳೆಯಲ್ಲಿ ಲಗ್ಗೆ ಇಟ್ಟ ಕಾಡಾನೆಗಳು, ಜಮೀನಿನಲ್ಲಿ ಬೆಳೆದಿದ್ದ ಬಾಳೆ ಮತ್ತು ಜೋಳದ ಫಸಲನ್ನು ನಾಶ ಮಾಡಿದೆ. ಕಷ್ಟಪಟ್ಟು ಸಾಲ ಮಾಡಿ ಬೆಳೆ ಬೆಳೆದಿದ್ದ ರೈತ ಉತ್ತಮ ಆದಾಯದ ನಿರೀಕ್ಷೆಯಲ್ಲಿದ್ದರು. ಆದರೆ ಕಾಡಾನೆಗಳು ದಾಳಿ ಮಾಡಿರುವುದರಿಂದ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ.

ಕಳೆದ ಒಂದು ವಾರದಿಂದ ಅರಣ್ಯ ಅಧಿಕಾರಿಗಳು ಸ್ಥಳದಲ್ಲಿ ಇಲ್ಲದೇ ಇರುವುದರಿಂದ ಈ ಸಮಸ್ಯೆಯಾಗುತ್ತಿದ್ದು, ಕಾಯಂ ಅಧಿಕಾರಿಗಳನ್ನು ನೇಮಕ ಮಾಡುವಂತೆ ಅಮ್ಜದ್ ಖಾನ್ ಒತ್ತಾಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ನೀರಿಗಿಳಿಯುವ ಮುನ್ನ ಇರಲಿ ಎಚ್ಚರ !

ಜಿಲ್ಲೆಯಲ್ಲಿ ೧೧ ಮಂದಿ ಸಾವು ಮುಂಜಾಗ್ರತೆ ಪಾಲಿಸುವುದು ಅಗತ್ಯ ಮೈಸೂರು: ಬಿರು ಬೇಸಿಗೆ ಸಂದರ್ಭದಲ್ಲಿ ನದಿ, ಕೆರೆ ಹಾಗೂ ಕಾಲುವೆಗಳಲ್ಲಿ…

2 hours ago

ಸರಳ, ಸಜ್ಜನ ರಾಜಕಾರಣಿ ಎಸ್.ಎಂ.ಕೃಷ್ಣ

ಪ್ರೊ.ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮೈಸೂರು  ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಎಸ್.ಎಂ.ಕೃಷ್ಣ ಪ್ರಶಸ್ತಿ ಪುರಸ್ಕಾರ ಮಂಡ್ಯ ಜಿಲ್ಲೆಯ…

2 hours ago

ಬಿಸಿಲಿಗೆ ಪರ್ಯಾಯ ಈಜುಕೊಳಗಳು

ಚಿರಂಜೀವಿ ಸಿ.ಹುಲ್ಲಹಳ್ಳಿ ೩,೭೫೦ ರೂ., ಶೇ.೧೮ರಷ್ಟು ಜಿಎಸ್‌ಟಿ ಸೇರಿ ಒಟ್ಟು ೪,೭೫೦ ರೂ.ಶುಲ್ಕ ಪ್ರತಿ ಶಿಬಿರಾರ್ಥಿಗೆ ನಿಗದಿ ಮೈಸೂರು: ಮಲ್ಲಿಗೆ…

2 hours ago

ಗ್ರಾಪಂ ಅಧಿಕಾರಿಗಳ ನಿಗಾಕ್ಕೆ ಜಿಪಿಎಸ್ ಸಿಸ್ಟಂ

ಕೆ.ಬಿ.ರಮೇಶನಾಯಕ ಬಯೋಮೆಟ್ರಿಕ್ ಹಾಜರಾತಿ ಜತೆಗೆ ಜಿಪಿಎಸ್ ವ್ಯವಸ್ಥೆ ಜಾರಿಗೆ ಚಿಂತನೆ ಹಾಜರಾತಿ ಹಾಕಿ ಬೇಕಾಬಿಟ್ಟಿ ಓಡಾಡುವ ಸಿಬ್ಬಂದಿಗಳಿಗೆ ಬ್ರೇಕ್ ಮೈಸೂರು:…

2 hours ago

ಕೈ ಸುಡುತ್ತಿದೆ ಎಳನೀರು ಬೆಲೆ

ಪ್ರಶಾಂತ್ ಎಸ್. ಮೈಸೂರು: ಎಲ್ಲೆಡೆ ಬಿರು ಬಿಸಿಲು ಜನರನ್ನು ಹೈರಾಣಾಗಿಸುತ್ತಿದೆ. ಬಿಸಿಲ ಬೇಗೆಯಿಂದ ದಾಹ ನೀಗಿಸಿಕೊಳ್ಳಲು ಜನರು ಎಳನೀರು ಮೊರೆ…

2 hours ago

ಸಿದ್ದರಾಮಯ್ಯ ನಾಯಕತ್ವಕ್ಕೆ ಬಲ

ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಸಮರದಲ್ಲಿ ಕೈ ಜಯಭೇರಿ ಆರ್.ಟಿ.ವಿಠ್ಠಲಮೂರ್ತಿ ಬೆಂಗಳೂರು: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪ…

2 hours ago