ಚಾಮರಾಜನಗರ: ಕಾಡಾನೆಯೊಂದು ಆನೆ ಕಾರ್ಯಪಡೆ ಸಿಬ್ಬಂದಿ ಮೇಲೆ ದಾಳಿ ಮಾಡಿರುವ ಘಟನೆ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ವನ್ಯಧಾಮದ ಪಿಜಿ ಪಾಳ್ಯ ವನ್ಯ ಜೀವಿ ವಲಯದಲ್ಲಿ ಗುರುವಾರ (ಜೂನ್.೨೦) ತಡರಾತ್ರಿ ನಡೆದಿದೆ.
ಮುನಿಯಪ್ಪ, ನಾಗರಾಜು ಮತ್ತು ಜಡೇಸ್ವಾಮಿ ಕಾಡಾನೆಯಿಂದ ದಾಳಿಗೆ ಒಳಗಾದವರಾಗಿದ್ದಾರೆ.
ಆನೆ ಕಾರ್ಯಪಡೆ ಸಿಬ್ಬಂದಿ ರಾತ್ರಿ ಸಮಯದಲ್ಲಿ ಗಸ್ತಿಗೆ ಹೋಗಿದ್ದ ಸಮಯದಲ್ಲಿ ಗುಂಡಿಮಾಳದ ಮುಖ್ಯ ರಸ್ತೆಯ ಬಳಿ ಆನೆ ಗ್ರಾಮಕ್ಕೆ ನುಗ್ಗುತ್ತಿರುವುದನ್ನು ನೋಡಿದ್ದಾರೆ. ಆನೆಯನ್ನು ತಡೆಯಲು ಮುಂದಾದ ವೇಳೆ ಕಾಡಾನೆ ಏಕಾಏಕಿ ಅವರ ಮೇಲೆ ದಾಳಿ ಮಾಡಿದೆ.
ದಾಳಿಯಿಂದ ಮುನಿಯಪ್ಪಗೆ ತಲೆ ಮೇಲೆ, ನಾಗರಾಜು ಅವರಿಗೆ ಎಡಗೈಗೆ ಹಾಗೂ ಜಡೇಸ್ವಾಮಿಗೆ ಕಾಲಿಗೆ ಪೆಟ್ಟಾಗಿದ್ದು, ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಇವರಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…