ಚಾಮರಾಜನಗರ: ಕಾಡಾನೆಯೊಂದು ಆನೆ ಕಾರ್ಯಪಡೆ ಸಿಬ್ಬಂದಿ ಮೇಲೆ ದಾಳಿ ಮಾಡಿರುವ ಘಟನೆ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ವನ್ಯಧಾಮದ ಪಿಜಿ ಪಾಳ್ಯ ವನ್ಯ ಜೀವಿ ವಲಯದಲ್ಲಿ ಗುರುವಾರ (ಜೂನ್.೨೦) ತಡರಾತ್ರಿ ನಡೆದಿದೆ.
ಮುನಿಯಪ್ಪ, ನಾಗರಾಜು ಮತ್ತು ಜಡೇಸ್ವಾಮಿ ಕಾಡಾನೆಯಿಂದ ದಾಳಿಗೆ ಒಳಗಾದವರಾಗಿದ್ದಾರೆ.
ಆನೆ ಕಾರ್ಯಪಡೆ ಸಿಬ್ಬಂದಿ ರಾತ್ರಿ ಸಮಯದಲ್ಲಿ ಗಸ್ತಿಗೆ ಹೋಗಿದ್ದ ಸಮಯದಲ್ಲಿ ಗುಂಡಿಮಾಳದ ಮುಖ್ಯ ರಸ್ತೆಯ ಬಳಿ ಆನೆ ಗ್ರಾಮಕ್ಕೆ ನುಗ್ಗುತ್ತಿರುವುದನ್ನು ನೋಡಿದ್ದಾರೆ. ಆನೆಯನ್ನು ತಡೆಯಲು ಮುಂದಾದ ವೇಳೆ ಕಾಡಾನೆ ಏಕಾಏಕಿ ಅವರ ಮೇಲೆ ದಾಳಿ ಮಾಡಿದೆ.
ದಾಳಿಯಿಂದ ಮುನಿಯಪ್ಪಗೆ ತಲೆ ಮೇಲೆ, ನಾಗರಾಜು ಅವರಿಗೆ ಎಡಗೈಗೆ ಹಾಗೂ ಜಡೇಸ್ವಾಮಿಗೆ ಕಾಲಿಗೆ ಪೆಟ್ಟಾಗಿದ್ದು, ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಇವರಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…
ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…
ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…
ವಿಶ್ವವಿಖ್ಯಾತ ಮೈಸೂರು ದಸರೆಗೆ ತನ್ನದೇ ಆದ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಸಮುದಾಯಗಳಿಗೆ ಅನುಕೂಲವಾಗುವಂತಹ ಇಲ್ಲವೆ ಸ್ಪೂರ್ತಿ ನೀಡುವಂತಹ ಕಾರ್ಯಕ್ರಮಗಳು ಸೇರ್ಪಡೆಯಾಗುತ್ತಿವೆ.…
ಎಲ್ಲ ಕಡೆ ಈಗ ಕನ್ನಡ ಚಿತ್ರರಂಗವನ್ನು ಉಳಿಸುವ ಚರ್ಚೆಗಳು. ಏಕಪರದೆಯ ಚಿತ್ರಮಂದಿರಗಳು ಮುಚ್ಚದ ಹಾಗೆ ಮಾಡಲು ಏನು ಮಾಡಬೇಕು, ಜನರನ್ನು…
ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ೨೯ ಡೆಂಗ್ಯು ಪ್ರಕರಣಗಳು ದೃಢ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ ಮಡಿಕೇರಿ:…