ಚಾಮರಾಜನಗರ

ಕಾಡಾನೆ ದಾಳಿ ; ಜಮೀನಿನ ಶೀಟಿನ ಮನೆ, ಟೊಮೆಟೊ ಬೆಳೆ ನಾಶ

ಗುಂಡ್ಲುಪೇಟೆ : ತಾಲ್ಲೂಕಿನ ಮಂಚಹಳ್ಳಿ ಗ್ರಾಮದ ಮಂಜುನಾಥ ಎಂಬವರ ಜಮೀನಿಗೆ ಶನಿವಾರ ರಾತ್ರಿ ಕಾಡಾನೆ ನುಗ್ಗಿ ಕಟಾವು ಮಾಡಿ ಜಮೀನಿನ ಶೀಟಿನ ಮನೆಯಲ್ಲಿ ಸಂಗ್ರಹಿಸಿ ಇಟ್ಟಿದ್ದ 50 ಬಾಕ್ಸ್ ಟೊಮೆಟೊವನ್ನು ತಿಂದು, ತುಳಿದು ನಾಶ ಮಾಡಿ, ಶೀಟಿನ ಮನೆಯನ್ನೂ ಧ್ವಂಸ ಮಾಡಿದೆ.

ರೈತ ಬೆಳೆದಿದ್ದ ಟೊಮೆಟೊ, ಶೀಟಿನ ಮನೆ ನಾಶದಿಂದ ಲಕ್ಷಾಂತರ ರೂ. ನಷ್ಟವಾಗಿದ್ದು ಅರಣ್ಯ ಇಲಾಖೆ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಕಾಡಂಚಿನ ಗ್ರಾಮಗಳಾದ ಮಂಚಹಳ್ಳಿ, ಸವಕನಹಳ್ಳಿ, ಪಾಳ್ಯ ಗ್ರಾಮಗಳಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ದಿನನಿತ್ಯ ಕಾಡಾನೆ ದಾಳಿ ಮಾಡದಂತೆ ಪ್ರಾಣ ಪಣಕ್ಕಿಟ್ಟು ಕಾವಲು ಕಾಯುವುದೇ ಕೆಲಸವಾಗಿದೆ. ಕಾಡಾನೆ ದಾಳಿ ವೇಳೆ ಸುತ್ತುಬೇಲಿ, ಬೆಳೆಗಳ ನಷ್ಟ ಅನುಭವಿಸುತ್ತಿರುವ ರೈತರು ಕಂಗಾಲಾಗಿದ್ದಾರೆ. ಕಾಡಾನೆ ಹಾವಳಿ ತಡೆಗೆ ಅರಣ್ಯ ಇಲಾಖೆ ಶಾಶ್ವತ ಪರಿಹಾರ ರೂಪಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

​ಮೈಸೂರು ವಿ.ವಿ | ಸಂಶೋಧಕರ ಶಿಷ್ಯವೇತನ ಬಿಕ್ಕಟ್ಟು ಬಗೆಹರಿಸಿದ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2026-27ನೇ ಸಾಲಿನಲ್ಲಿ ಸಂಶೋಧನೆ ಕೈಗೊಂಡಿರುವ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST)…

2 mins ago

ಮೈಸೂರು | ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ ; ಫುಟ್‌ಪಾತ್ ಆಕ್ರಮಿಸಿದ್ದ 30 ಅಂಗಡಿಗಳಿಗೆ ಶಾಕ್‌

ಮೈಸೂರು : ಫುಟ್‌ಪಾತ್‌ಗಳನ್ನು ಅತಿಕ್ರಮಿಸಿದ್ದ ಅನಧಿಕೃತ ವ್ಯಾಪಾರಿಗಳ ವಿರುದ್ಧ ಮೈಸೂರು ಮಹಾನಗರ ಪಾಲಿಕೆ ಶುಕ್ರವಾರ ಖಡಕ್ಕಾಗಿ ಕಾರ್ಯಾಚರಣೆ ನಡೆಸಿತು. ವಲಯ-5…

2 hours ago

ರಸ್ತೆ ವೈಟ್‌ ಟಾಪಿಂಗ್‌ ; ಟೆಂಡರ್‌ ಶುವರ್‌ ಮಾದರಿ ಕಡ್ಡಾಯ

ರಸ್ತೆಗಳ ಬಾಳಿಕೆ ಹೆಚ್ಚಳ ; ಬಫರ್‌ ಜೋನ್‌ ಇಲ್ಲದಿದ್ದರೆ ಸಂಕಷ್ಟ ವಿಶ್ವನಾಥ್‌ ಶಂಕರಪ್ಪ ರಸ್ತೆ ವೈಟ್ ಟಾಪಿಂಗ್ ಮಾಡುವುದು ಎಂದರೆ,…

5 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಪೈರಸಿ ನಿಗ್ರಹಕ್ಕೆ ಟೆಲಿಗ್ರಾಮ್‌ ಆಪ್‌ಗೆ ಅವಧಿ ನೀಡಿದ ಕೇಂದ್ರ

ಮೂರು ವಾರಗಳ ಹಿಂದೆ ಈ ಅಂಕಣದಲ್ಲಿ ಪೈರಸಿ ಎನ್ನುವ ಪೆಡಂಭೂತದ ಬಗ್ಗೆ ಹೇಳಲಾಗಿತ್ತು. ನೀಟ್ ಪರೀಕ್ಷೆಯ ಅವಧಿಯ ಕೆಲವು ದಿನ…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 10 ಶುಕ್ರವಾರ

6 hours ago

ಬೆಟ್ಟಗಳು ಯಾವತ್ತೂ ಸುಳ್ಳು ಹೇಳುವುದಿಲ್ಲ!

ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್‌ ಪಬ್ಲಿಕ್‌ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…

1 day ago