ಚಾಮರಾಜನಗರ

ಓಂಕಾರ್ ವಲಯದಲ್ಲಿ ಹತೋಟಿಗೆ ಬಾರದ ಒಂಟಿ ಸಲಗದ ಉಪಟಳ: ಅರಣ್ಯ ಇಲಾಖೆ ವಿರುದ್ಧ ರೈತರ ಆಕ್ರೋಶ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯ ಪ್ರದೇಶದ ಓಂಕಾರ್ ವ್ಯಾಪ್ತಿಯಲ್ಲಿ ಒಂಟಿ ಸಲಗದ ದಾಂಧಲೆ ಮಿತಿಮೀರಿದ್ದು. ರೈತರ ಅಪಾರ ಪ್ರಮಾಣದ ಬೆಳೆಗಳು ಮಣ್ಣುಪಾಲಾಗುತ್ತಿವೆ. ಭಾನುವಾರ ರಾತ್ರಿ ರೈಲ್ವೆ ತಡೆಗೋಡೆಯನ್ನೇ ದಾಟಿ ಬಂದಿರುವ ಸಲಗವೊಂದು ಮಹದೇವಗೌಡ ಎಂಬುವವರ ಜಮೀನಿಗೆ ನುಗ್ಗಿ ತೆಂಗಿನ ಸಸಿಗಳನ್ನು ನಾಶಪಡಿಸಿದೆ.

ಒಂಟಿಸಲಗದ ನಿರಂತದ ದಾಳಿಗೆ ಬೇಸತ್ತಿದ್ದ ಮಂಚಹಳ್ಳಿ ಹಾಗೂ ಸುತ್ತಲಿನ ಗ್ರಾಮದ ರೈತರು ಅರಣ್ಯ ಇಲಾಖೆ ನಡೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ. ಪರಿಣಾಮ ಅರಣ್ಯ ಇಲಾಖೆ ಕೇವಲ ಔಚಿತ್ಯಕ್ಕೆ ಒಂದಷ್ಟು ದಿನ ರಾತ್ರಿ ಗಸ್ತು ಸಿಬ್ಬಂದಿಗಳನ್ನು ನೇಮಕ ಮಾಡಿತ್ತು. ಕೆಲ ದಿನಗಳ ಬಳಿಕ ರಾತ್ರಿ ಕಾವಲು ಗಸ್ತು ಸಿಬ್ಬಂದಿಗಳು ಸಕ್ರಿಯರಾಗಿಲ್ಲ ಎಂದು ರೈತರು ಆರೋಪಿಸುತ್ತಿದ್ದಾರೆ.

ರೈಲ್ವೆ ತಡೆಗೋಡೆ ದಾಟಿ ಬರ್ತಿದೆ ಸಲಗ: ಆನೆಗಳ ಉಪಟಳಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಕಂದಕಗಳನ್ನ ನಿರ್ಮಾಣ ಮಾಡಲಾಗಿತ್ತಾದರೂ ದಕ್ಕದ ಒಂಟಿಸಲಗ ರೈಲ್ವೆ ತಡೆಗೋಡೆಯನ್ನೂ ಲೀಲಾಜಾಲವಾಗಿ ದಾಟಿ ರೈತರ ಜಮೀನಿಗೆ ಲಗ್ಗೆಯಿಡುತ್ತಿರುವುದು ಇಲಾಖೆಗೆ ಹಾಗೂ ರೈತಾಪಿ ವರ್ಗಕ್ಕೆ ತಲೆ ನೋವಾಗಿ ಪರಿಣಮಿಸಿದೆ. ಶೀಘ್ರದಲ್ಲೇ ಒಂಟಿ ಸಲಗವನ್ನು ಸೆರೆ ಹಿಡಿದು ಬೇರೆಡೆಗೆ ಸ್ಥಳಾಂತರಿಸಲು ಕ್ರಮಕ್ಕೆ ಮುಂದಾಗಬೇಕು. ಇಲ್ಲವಾದಲ್ಲಿ ರೈತ ಸಂಘದ ಸಹಕಾರದೊಂದಿಗೆ ಕಚೇರಿಗೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ರೈತ ಮಹದೇವಗೌಡ ಎಚ್ಚರಿಕೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಶಿಕ್ಷಣವೇ ದೇಶ ಕಟ್ಟುವ ಹಾದಿ ಎಂದು ತಿಳಿದಿದ್ದ ದೇಶಪಾಂಡೆಯವರು

ಡಾ.ಎಂ.ಡಿ.ಉಮೇಶ್‌, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಇಂಗ್ಲೆಂಡಿನಲ್ಲಿ ಶಾಕಾಹಾರದ ದಿನಗಳು

ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 18 ಶನಿವಾರ

2 hours ago

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

15 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

17 hours ago

ಇಂದಿನಿಂದ ಮೂರು ದಿನ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ…

20 hours ago