ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯ ಪ್ರದೇಶದ ಓಂಕಾರ್ ವ್ಯಾಪ್ತಿಯಲ್ಲಿ ಒಂಟಿ ಸಲಗದ ದಾಂಧಲೆ ಮಿತಿಮೀರಿದ್ದು. ರೈತರ ಅಪಾರ ಪ್ರಮಾಣದ ಬೆಳೆಗಳು ಮಣ್ಣುಪಾಲಾಗುತ್ತಿವೆ. ಭಾನುವಾರ ರಾತ್ರಿ ರೈಲ್ವೆ ತಡೆಗೋಡೆಯನ್ನೇ ದಾಟಿ ಬಂದಿರುವ ಸಲಗವೊಂದು ಮಹದೇವಗೌಡ ಎಂಬುವವರ ಜಮೀನಿಗೆ ನುಗ್ಗಿ ತೆಂಗಿನ ಸಸಿಗಳನ್ನು ನಾಶಪಡಿಸಿದೆ.
ಒಂಟಿಸಲಗದ ನಿರಂತದ ದಾಳಿಗೆ ಬೇಸತ್ತಿದ್ದ ಮಂಚಹಳ್ಳಿ ಹಾಗೂ ಸುತ್ತಲಿನ ಗ್ರಾಮದ ರೈತರು ಅರಣ್ಯ ಇಲಾಖೆ ನಡೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ. ಪರಿಣಾಮ ಅರಣ್ಯ ಇಲಾಖೆ ಕೇವಲ ಔಚಿತ್ಯಕ್ಕೆ ಒಂದಷ್ಟು ದಿನ ರಾತ್ರಿ ಗಸ್ತು ಸಿಬ್ಬಂದಿಗಳನ್ನು ನೇಮಕ ಮಾಡಿತ್ತು. ಕೆಲ ದಿನಗಳ ಬಳಿಕ ರಾತ್ರಿ ಕಾವಲು ಗಸ್ತು ಸಿಬ್ಬಂದಿಗಳು ಸಕ್ರಿಯರಾಗಿಲ್ಲ ಎಂದು ರೈತರು ಆರೋಪಿಸುತ್ತಿದ್ದಾರೆ.
ರೈಲ್ವೆ ತಡೆಗೋಡೆ ದಾಟಿ ಬರ್ತಿದೆ ಸಲಗ: ಆನೆಗಳ ಉಪಟಳಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಕಂದಕಗಳನ್ನ ನಿರ್ಮಾಣ ಮಾಡಲಾಗಿತ್ತಾದರೂ ದಕ್ಕದ ಒಂಟಿಸಲಗ ರೈಲ್ವೆ ತಡೆಗೋಡೆಯನ್ನೂ ಲೀಲಾಜಾಲವಾಗಿ ದಾಟಿ ರೈತರ ಜಮೀನಿಗೆ ಲಗ್ಗೆಯಿಡುತ್ತಿರುವುದು ಇಲಾಖೆಗೆ ಹಾಗೂ ರೈತಾಪಿ ವರ್ಗಕ್ಕೆ ತಲೆ ನೋವಾಗಿ ಪರಿಣಮಿಸಿದೆ. ಶೀಘ್ರದಲ್ಲೇ ಒಂಟಿ ಸಲಗವನ್ನು ಸೆರೆ ಹಿಡಿದು ಬೇರೆಡೆಗೆ ಸ್ಥಳಾಂತರಿಸಲು ಕ್ರಮಕ್ಕೆ ಮುಂದಾಗಬೇಕು. ಇಲ್ಲವಾದಲ್ಲಿ ರೈತ ಸಂಘದ ಸಹಕಾರದೊಂದಿಗೆ ಕಚೇರಿಗೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ರೈತ ಮಹದೇವಗೌಡ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸಲ್ಪಟ್ಟಿರುವ 14ನೇ ಆರೋಪಿ ಪ್ರದೋಷ್ ಹೇಳಿಕೆ ದಾಖಲಿಸುವ…
ಮಂಗಳೂರು: ಜನರಿಗೆ ಶುದ್ಧ ಆಹಾರ ಪೂರೈಸುವ ನಿಟ್ಟಿನಲ್ಲಿ ತಜ್ಞರ ತಂಡದ ತಪಾಸಣೆ ನಿರಂತರವಾಗಿ ನಡೆಯಲಿದ್ದು, ಎರಡನೇ ಬಾರಿ ಲೋಪಗಳು ಕಂಡು…
ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…
ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…
ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…
ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…