ಚಾಮರಾಜನಗರ

ಕಾಡಾನೆ ದಾಳಿ: ಪ್ರಾಣಾಪಾಯದಿಂದ ಪಾರಾದ ರೈತ

ಮಹೇಂದ್ರ ಹಸಗೂಲಿ 

ಗುಂಡ್ಲುಪೇಟೆ: ತಾಲ್ಲೂಕಿನ ಕುರುಬರಹುಂಡಿ ಗ್ರಾಮದ ರೈತ ರೇಚಣ್ಣ ಎಂಬುವವರು ರಾತ್ರಿ ಜಮೀನಿಗೆ ಕಾವಲಿಗಾಗಿ ತೆರಳುವಾಗ ಕಾಡಾನೆ ದಾಳಿ ನಡೆಸಿದೆ. ಕಾಡಾನೆಯಿಂದ ತಪ್ಪಿಸಿಕೊಳ್ಳುವಾಗ ಕೆಳಗೆ ಬಿದ್ದ ರೈತ ಕಾಲಿಗೆ ಗಾಯ ಮಾಡಿಕೊಂಡಿದ್ದಾರೆ.

ಕಾಡಾನೆ ರೈತನ ಬೈಕ್ ತುಳಿದು ಜಖಂ ಮಾಡಿದ್ದು, ಅದೃಷ್ಟವಶಾತ್ ಅನ್ನದಾತ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನಂತರ ಆನೆ ಅದೇ ಗ್ರಾಮದ ಕುಮಾರ್ ಎಂಬುವವರ ಜಮೀನಿನಲ್ಲಿ ಅಳವಡಿಸಿದ್ದ ಸೋಲಾರ್ ಸುತ್ತುಬೇಲಿಯನ್ನು ತುಳಿದು ನಾಶ ಮಾಡಿದೆ.

ಘಟನೆ ನಡೆಯುತ್ತಿದ್ದಂತೆ ಕುರುಬರಹುಂಡಿ ಗ್ರಾಮಸ್ಥರು ಅರಣ್ಯ ಇಲಾಖೆಯ ವಿರುದ್ಧ ಪ್ರತಿಭಟನೆ ನಡೆಸಿದರು. ನಂತರ ಸ್ಥಳಕ್ಕಾಗಮಿಸಿದ ಆರ್‌ಎಫ್ಓ ಸತೀಶ್ ರೈತರ ಮನವೊಲಿಕೆ ಮಾಡಲು ಪ್ರಯತ್ನಿಸಿದರು. ಆದರೂ ರೈತರು ಸ್ಥಳಕ್ಕೆ ಮೇಲಾಧಿಕಾರಿಗಳು ಬರುವಂತೆ ಪಟ್ಟುಹಿಡಿದರು. ನಂತರ ಬೈಕ್ ರಿಪೇರಿ ಮಾಡಿಸಿಕೊಡುವಂತೆ ಹಾಗೂ ಗಾಯಾಳುವಿಗೆ ಚಿಕಿತ್ಸೆ ನೀಡಲು ಸಹಕರಿಸುತ್ತೇವೆ ಎಂದು ಭರವಸೆ ನೀಡಿದರು.

ಕುರುಬರಹುಂಡಿ ಮಂಚಹಳ್ಳಿ ಭಾಗದಲ್ಲಿ ಪದೇ ಪದೇ ಕಾಡಾನೆಗಳು ದಾಳಿ ನಡೆಸುತ್ತಿದ್ದು, ಸೋಲಾರ್ ಸುತ್ತು ಬೇಲಿ ಮತ್ತು ರೈತರು ಕಷ್ಟಪಟ್ಟು ಬೆಳೆದ ಫಸಲುಗಳನ್ನು ನಾಶ ಮಾಡುತ್ತಿವೆ. ಅರಣ್ಯ ಇಲಾಖೆ ಕಾಡಾನೆ ನಿಯಂತ್ರಣಕ್ಕೆ ಕಾವಲು ಮಾಡಬೇಕು. ಇಲ್ಲ ರೈಲ್ವೆ ಕಂಬಿ ಅಳವಡಿಸಬೇಕು. ಟ್ರಂಚ್‌ಗಳನ್ನು ತೋಡುವ ಮೂಲಕ ಕಾಡಾನೆಗಳ ದಾಳಿಯನ್ನು ನಿಯಂತ್ರಿಸುವಂತೆ ಗ್ರಾಮಸ್ಥರು ಒತ್ತಾಯಿಸಿದರು.

ಆಂದೋಲನ ಡೆಸ್ಕ್

Recent Posts

ಅರಕೆರೆ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ,ರೋಗಿಗಳ ಪರದಾಟ

ರಾತ್ರಿ ಪಾಳಿಯಲ್ಲಿ ನರ್ಸ್‌ಗಳು, ವೈದ್ಯರ ನಿಯೋಜನೆಗೆ ಜನತೆ ಒತ್ತಾಯ • ಸಿದ್ದೇಗೌಡ ಕೊಡಿಯಾಲ ಶ್ರೀರಂಗಪಟ್ಟಣ : ಕ್ಷೇತ್ರದ ಶಾಸಕ ರಮೇಶ್…

18 mins ago

ಅರಮೇರಿ, ಕಡಂಗಮೂರುರಲ್ಲಿ ಗಣಿಗಾರಿಕೆಗೆ ವಿರೋಧ

ಸ್ಥಳೀಯರಿಗೆ ಸಮಸ್ಯೆ; ಹೋರಾಟದ ಎಚ್ಚರಿಕೆ ನೀಡಿದ ಗ್ರಾಮಸ್ಥರು • ಕಾಂಗೀರ ಬೋಪಣ್ಣ ವಿರಾಜಪೇಟೆ : ಸ್ಥಳೀಯರಿಗೆ ಎಲ್ಲ ರೀತಿಯಲ್ಲೂ ಸಮಸ್ಯೆಯನ್ನು…

33 mins ago

ಸ್ವಚ್ಛ ನಗರಿಯ ಕೊಳಚೆ ಮುಖ

ಮೋರಿ ವಾಸನೆಯಿಂದ ಕುರುಬಾರಹಳ್ಳಿ ವಾಸಿಗಳ ಪರಿತಾಪ ಕೆ.ಎಸ್.ಚಂದ್ರಶೇಖರ್ ಮೂರ್ತಿ ಮೈಸೂರು : ರಸ್ತೆಯಲ್ಲಿ ಕಿರಿದಾದ ಮೋರಿಗಳು, ಒಳಚರಂಡಿ ನೀರು ಮೋರಿಗಳಲ್ಲಿ…

55 mins ago

ಆದಿತ್ಯ ಬಿರ್ಲಾ ಒಕ್ಕೂಟದ ತೆಕ್ಕೆಗೆ ಆರ್‌ಸಿಬಿ : 16,706 ಕೋಟಿಗೆ ಖರೀದಿ

ಬೆಂಗಳೂರು : ಐಪಿಎಲ್ 2025ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯು ಬರೋಬ್ಬರಿ 16,706 ಕೋಟಿ ಮೊತ್ತಕ್ಕೆ ಮಾರಾಟವಾಗುವ…

1 hour ago

ಕಾಂಗ್ರೆಸ್‌ ವರಿಷ್ಠೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಹೊಸದಿಲ್ಲಿ : ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತೆ ಅಸ್ವಸ್ಥರಾಗಿದ್ದು, ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ…

1 hour ago

ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…

12 hours ago