ಮಹೇಂದ್ರ ಹಸಗೂಲಿ
ಗುಂಡ್ಲುಪೇಟೆ: ತಾಲ್ಲೂಕಿನ ಕುರುಬರಹುಂಡಿ ಗ್ರಾಮದ ರೈತ ರೇಚಣ್ಣ ಎಂಬುವವರು ರಾತ್ರಿ ಜಮೀನಿಗೆ ಕಾವಲಿಗಾಗಿ ತೆರಳುವಾಗ ಕಾಡಾನೆ ದಾಳಿ ನಡೆಸಿದೆ. ಕಾಡಾನೆಯಿಂದ ತಪ್ಪಿಸಿಕೊಳ್ಳುವಾಗ ಕೆಳಗೆ ಬಿದ್ದ ರೈತ ಕಾಲಿಗೆ ಗಾಯ ಮಾಡಿಕೊಂಡಿದ್ದಾರೆ.
ಕಾಡಾನೆ ರೈತನ ಬೈಕ್ ತುಳಿದು ಜಖಂ ಮಾಡಿದ್ದು, ಅದೃಷ್ಟವಶಾತ್ ಅನ್ನದಾತ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ನಂತರ ಆನೆ ಅದೇ ಗ್ರಾಮದ ಕುಮಾರ್ ಎಂಬುವವರ ಜಮೀನಿನಲ್ಲಿ ಅಳವಡಿಸಿದ್ದ ಸೋಲಾರ್ ಸುತ್ತುಬೇಲಿಯನ್ನು ತುಳಿದು ನಾಶ ಮಾಡಿದೆ.
ಘಟನೆ ನಡೆಯುತ್ತಿದ್ದಂತೆ ಕುರುಬರಹುಂಡಿ ಗ್ರಾಮಸ್ಥರು ಅರಣ್ಯ ಇಲಾಖೆಯ ವಿರುದ್ಧ ಪ್ರತಿಭಟನೆ ನಡೆಸಿದರು. ನಂತರ ಸ್ಥಳಕ್ಕಾಗಮಿಸಿದ ಆರ್ಎಫ್ಓ ಸತೀಶ್ ರೈತರ ಮನವೊಲಿಕೆ ಮಾಡಲು ಪ್ರಯತ್ನಿಸಿದರು. ಆದರೂ ರೈತರು ಸ್ಥಳಕ್ಕೆ ಮೇಲಾಧಿಕಾರಿಗಳು ಬರುವಂತೆ ಪಟ್ಟುಹಿಡಿದರು. ನಂತರ ಬೈಕ್ ರಿಪೇರಿ ಮಾಡಿಸಿಕೊಡುವಂತೆ ಹಾಗೂ ಗಾಯಾಳುವಿಗೆ ಚಿಕಿತ್ಸೆ ನೀಡಲು ಸಹಕರಿಸುತ್ತೇವೆ ಎಂದು ಭರವಸೆ ನೀಡಿದರು.
ಕುರುಬರಹುಂಡಿ ಮಂಚಹಳ್ಳಿ ಭಾಗದಲ್ಲಿ ಪದೇ ಪದೇ ಕಾಡಾನೆಗಳು ದಾಳಿ ನಡೆಸುತ್ತಿದ್ದು, ಸೋಲಾರ್ ಸುತ್ತು ಬೇಲಿ ಮತ್ತು ರೈತರು ಕಷ್ಟಪಟ್ಟು ಬೆಳೆದ ಫಸಲುಗಳನ್ನು ನಾಶ ಮಾಡುತ್ತಿವೆ. ಅರಣ್ಯ ಇಲಾಖೆ ಕಾಡಾನೆ ನಿಯಂತ್ರಣಕ್ಕೆ ಕಾವಲು ಮಾಡಬೇಕು. ಇಲ್ಲ ರೈಲ್ವೆ ಕಂಬಿ ಅಳವಡಿಸಬೇಕು. ಟ್ರಂಚ್ಗಳನ್ನು ತೋಡುವ ಮೂಲಕ ಕಾಡಾನೆಗಳ ದಾಳಿಯನ್ನು ನಿಯಂತ್ರಿಸುವಂತೆ ಗ್ರಾಮಸ್ಥರು ಒತ್ತಾಯಿಸಿದರು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…