ಮಹಾದೇಶ್ ಎಂ ಗೌಡ
ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ ನಾಶ ಮಾಡಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ.
ಹನೂರು ತಾಲ್ಲೂಕಿನ ತಲೆಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆವಿಎನ್ ದೊಡ್ಡಿ ಗ್ರಾಮದ ಶಂಕರ ಎಂಬ ರೈತನ ಜಮೀನಿಗೆ ಕಾಡಾನೆ ದಾಳಿ ನಡೆಸಿ, ತೆಂಗಿನ ಮರಗಳು ಹಾಗೂ ಮುಸುಕಿನ ಜೋಳ ಬೆಳೆ ಸಂಪೂರ್ಣವಾಗಿ ನಾಶಗೊಳಿಸಿದೆ. ಅಲ್ಲದೆ ಜಮೀನಿನಲ್ಲಿದ್ದ ಸೋಲಾರ್ ತಂತಿ ಬೇಲಿಯನ್ನೂ ತುಳಿದು ಹಾನಿಗೊಳಿಸಿದೆ.
ಈ ಕುರಿತು ರೈತ ಶಂಕರ ಮಾತನಾಡಿ, “ಕಾಡಾನೆ ದಾಳಿಯಿಂದ ನನ್ನ ಜೀವನಾಧಾರವಾದ ಬೆಳೆ ಸಂಪೂರ್ಣ ನಾಶವಾಗಿದೆ. ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಂಡು ನಷ್ಟ ಪರಿಹಾರ ನೀಡಬೇಕು. ಗ್ರಾಮದಲ್ಲಿ ನಿರಂತರವಾಗಿ ಕಾಡಾನೆಗಳ ಓಡಾಟದಿಂದ ರೈತರು ಭಯಭೀತರಾಗಿದ್ದಾರೆ” ಎಂದು ಅಳಲು ತೋಡಿಕೊಂಡರು.
ಅರಣ್ಯ ಇಲಾಖೆ ಕೂಡಲೇ ಕ್ರಮ ಕೈಗೊಂಡು ಕಾಡಾನೆಗಳ ನಿಯಂತ್ರಣ ಹಾಗೂ ರೈತರ ಬೆಳೆ ರಕ್ಷಣೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…
ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…
ಬೈರುತ್: ಲೆಬನಾನ್ ಮೇಲೆ ಇಸ್ರೇಲ್ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…
ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ: ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…
ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…