ಚಾಮರಾಜನಗರ

ಹನೂರು| ಕಾಡಾನೆ ದಾಳಿ: ಮುಸುಕಿನ ಜೋಳದ ಫಸಲು ನಾಶ

ಹನೂರು: ತಾಲ್ಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಕಾಡಾನೆಗಳ ದಾಳಿಗೆ ಒಂದು ಎಕರೆಗೂ ಹೆಚ್ಚು ಪ್ರದೇಶದಲ್ಲಿ ಬೆಳೆದಿದ್ದ ಮುಸುಕಿನ ಜೋಳದ ಫಸಲು ನಾಶವಾಗಿರುವ ಘಟನೆ ನಡೆದಿದೆ.

ಗ್ರಾಮದ ಕನಕರಾಜು ಎಂಬುವವರಿಗೆ ಸೇರಿದ ಜಮೀನಿಗೆ ಲಗ್ಗೆಯಿಟ್ಟಿದ್ದ ಕಾಡಾನೆಗಳು ಮುಸುಕಿನ ಜೋಳದ ಫಸಲನ್ನು ತಿಂದು ನಾಶಮಾಡಿವೆ. ಇದಲ್ಲದೇ ಜಮೀನಿನಲ್ಲಿದ್ದ ಕೃಷಿ ಪರಿಕರಗಳನ್ನು ತುಳಿದು ನಾಶಪಡಿಸಿರುವುದರಿಂದ ರೈತನಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

ಬೆಳೆ ನಾಶದಿಂದ ತೀವ್ರ ಸಂಕಷ್ಟದಲ್ಲಿರುವ ರೈತ ಕನಕರಾಜುಗೆ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಇದರ ಜೊತೆಗೆ ಈ ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಇವುಗಳನ್ನು ತಡೆಗಟ್ಟುವಲ್ಲಿ ಅರಣ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ. ಇನ್ನು ಮುಂದಾದರೂ ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಆನೆಗಳು ನಾಡಿನತ್ತ ಬರದ ಹಾಗೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಅಮಾನತಾದ ಬಳಿಕ ಅಬ್ದುಲ್‌ ಜಬ್ಬಾರ್‌ ಮೊದಲ ಪ್ರತಿಕ್ರಿಯೆ

ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್.‌ ಈಗ ಅವರ ಕುದುರೆಗಳು ಮುಂದೆ ಇವೆ…

49 mins ago

ಸೋಮವಾರಪೇಟೆ: ಹಿರಿಕರ ಗ್ರಾಮದಲ್ಲಿ ಮಳೆಗಾಗಿ ದೇವರ ಮೊರೆ

ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…

58 mins ago

ರಾಜ್ಯದಲ್ಲೇ ಕಲಬುರ್ಗಿಯಲ್ಲಿ ಗರಿಷ್ಠ ತಾಪಮಾನ ದಾಖಲು

ಕಲಬುರ್ಗಿ: ಇಂದು(ಏಪ್ರಿಲ್.‌15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…

1 hour ago

ಅಯೋಧ್ಯೆ ಶ್ರೀರಾಮನ ದರ್ಶನ ಪಡೆದ ರಾಜ್ಯದ ಕಾಂಗ್ರೆಸ್‌ ಶಾಸಕರು

ಲಕ್ನೋ: ಕರ್ನಾಟಕ ಕಾಂಗ್ರೆಸ್‌ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…

1 hour ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್‌ ಮಾಜಿ…

1 hour ago

ಪ್ರಧಾನಿ ನರೇಂದ್ರ ಮೋದಿಗೆ ಮನವಿ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…

2 hours ago