ಚಾಮರಾಜನಗರ

ಹನೂರು| ಕಾಡಾನೆ ದಾಳಿ: ಕೊಟ್ಟಿಗೆಯಲ್ಲಿ ಕಟ್ಟಿಹಾಕಿದ್ದ ಹಳ್ಳಿಕಾರ್‌ ಹೋರಿ ಸಾವು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ಜಮೀನಿನ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಹಳ್ಳಿಕಾರ್ ಹೋರಿಯ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಗಂಗನದೊಡ್ಡಿ ಗ್ರಾಮದಲ್ಲಿ ಜರುಗಿದೆ.

ತಾಲ್ಲೂಕಿನ ಗಂಗನದೊಡ್ಡಿ ಗ್ರಾಮದ ಕರ್ನಾಟಕ ರಾಜ್ಯ ರೈತ ಸಂಘದ ಹನೂರು ತಾಲೂಕು ಘಟಕದ ಅಧ್ಯಕ್ಷ ಅಮ್ಜದ್ ಖಾನ್ ಮೃತ ಹೋರಿಯ ಮಾಲೀಕರಾಗಿದ್ದಾರೆ.

ಘಟನೆಯ ವಿವರ: ಅಮ್ಜದ್ ಖಾನ್ ತನ್ನ ತೋಟದ ಮನೆಯ ಸಮೀಪದ ಜಮೀನಿನಲ್ಲಿ ತಾನು ಸಾಕಿದ ಹೋರಿಯನ್ನು ಕಟ್ಟುಹಾಕಿದ್ದರು. ಶುಕ್ರವಾರ ತಡರಾತ್ರಿ ಕಾಡಾನೆ ಏಕಾಏಕಿ ದಾಳಿ ನಡೆಸಿ ಹೋರಿಯ ಮೇಲೆ ಹಲ್ಲೆ ನಡೆಸಿ ಎತ್ತಿ ಬಿಸಾಕಿದೆ. ಪರಿಣಾಮ ಹೋರಿ ಸ್ಥಳದಲ್ಲೇ ಹಸು ನೀಗಿದೆ. ಸುಮಾರು 40 ಸಾವಿರ ಬೆಲೆಬಾಳುವಂತಹ ಹೋರಿ ಮೃತಪಟ್ಟಿದ್ದು ರೈತ ಅಮ್ಜದ್ ಖಾನ್‌ಗೆ ತುಂಬಲಾರದ ನಷ್ಟವಾಗಿದೆ.

ಕಾಡಾನೆ ದಾಳಿ ನಿರಂತರ: ಗಂಗನ ದೊಡ್ಡಿ ಗ್ರಾಮದ ಆಸು ಪಾಸಿನಲ್ಲಿ ಕಾಡಾನೆ ನಿರಂತರವಾಗಿ ದಾಳಿ ನಡೆಸುತ್ತಿದ್ದು, ರೈತರ ಜಮೀನುಗಳಿಗೆ ದಿನನಿತ್ಯ ಲಗ್ಗೆ ಇಡುತ್ತಿವೆ. ಒಂದಲ್ಲ ಒಂದು ಬೆಳೆ ನಾಶ ಮಾಡುತ್ತಿದೆ. ಜೊತೆಗೆ ಸಾಕು ಪ್ರಾಣಿಗಳನ್ನು ಕೊಂದು ಹಾಕುತ್ತಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಅನಾಹುತವಾಗುವ ಮುನ್ನ ಕಾಡಾನೆಯನ್ನು ಸೆರೆಹಿಡಿದು ಬೇರೆ ಕಡೆ ಸ್ಥಳಾಂತರ ಮಾಡುವಂತೆ ಕರ್ನಾಟಕ ರಾಜ್ಯ ರೈತ ಸಂಘದ ಹನೂರು ತಾಲೂಕು ಘಟಕದ ಅಧ್ಯಕ್ಷ ಅಮ್ಜದ್ ಖಾನ್ ಒತ್ತಾಯಿಸಿದ್ದಾರೆ.

ಘಟನಾ ಸ್ಥಳಕ್ಕೆ ಉಪವಲಯ ಅರಣ್ಯ ಅಧಿಕಾರಿ ವಿನಾಯಕ ಹಾಗೂ ಅರಣ್ಯ ರಕ್ಷಕ ಭೀಮಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಆರ್.‌ಅಶೋಕ್‌

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…

59 mins ago

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…

1 hour ago

ರಾಜ್ಯದಲ್ಲಿ ಕೈಕೊಟ್ಟ ಮುಂಗಾರು: ಸಂಕಷ್ಟದತ್ತ ಕೃಷಿ ವಲಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…

1 hour ago

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…

2 hours ago

SIR ನೋಟಿಸ್: ವಿಚಾರಣೆಗೆ ತೆರಳುವಾಗ ಈ ದಾಖಲೆಗಳು ನಿಮ್ಮ ಬಳಿ ಇರಲಿ

ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…

4 hours ago

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

9 hours ago