ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ಜಮೀನಿನ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಹಳ್ಳಿಕಾರ್ ಹೋರಿಯ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಗಂಗನದೊಡ್ಡಿ ಗ್ರಾಮದಲ್ಲಿ ಜರುಗಿದೆ.
ತಾಲ್ಲೂಕಿನ ಗಂಗನದೊಡ್ಡಿ ಗ್ರಾಮದ ಕರ್ನಾಟಕ ರಾಜ್ಯ ರೈತ ಸಂಘದ ಹನೂರು ತಾಲೂಕು ಘಟಕದ ಅಧ್ಯಕ್ಷ ಅಮ್ಜದ್ ಖಾನ್ ಮೃತ ಹೋರಿಯ ಮಾಲೀಕರಾಗಿದ್ದಾರೆ.
ಘಟನೆಯ ವಿವರ: ಅಮ್ಜದ್ ಖಾನ್ ತನ್ನ ತೋಟದ ಮನೆಯ ಸಮೀಪದ ಜಮೀನಿನಲ್ಲಿ ತಾನು ಸಾಕಿದ ಹೋರಿಯನ್ನು ಕಟ್ಟುಹಾಕಿದ್ದರು. ಶುಕ್ರವಾರ ತಡರಾತ್ರಿ ಕಾಡಾನೆ ಏಕಾಏಕಿ ದಾಳಿ ನಡೆಸಿ ಹೋರಿಯ ಮೇಲೆ ಹಲ್ಲೆ ನಡೆಸಿ ಎತ್ತಿ ಬಿಸಾಕಿದೆ. ಪರಿಣಾಮ ಹೋರಿ ಸ್ಥಳದಲ್ಲೇ ಹಸು ನೀಗಿದೆ. ಸುಮಾರು 40 ಸಾವಿರ ಬೆಲೆಬಾಳುವಂತಹ ಹೋರಿ ಮೃತಪಟ್ಟಿದ್ದು ರೈತ ಅಮ್ಜದ್ ಖಾನ್ಗೆ ತುಂಬಲಾರದ ನಷ್ಟವಾಗಿದೆ.
ಕಾಡಾನೆ ದಾಳಿ ನಿರಂತರ: ಗಂಗನ ದೊಡ್ಡಿ ಗ್ರಾಮದ ಆಸು ಪಾಸಿನಲ್ಲಿ ಕಾಡಾನೆ ನಿರಂತರವಾಗಿ ದಾಳಿ ನಡೆಸುತ್ತಿದ್ದು, ರೈತರ ಜಮೀನುಗಳಿಗೆ ದಿನನಿತ್ಯ ಲಗ್ಗೆ ಇಡುತ್ತಿವೆ. ಒಂದಲ್ಲ ಒಂದು ಬೆಳೆ ನಾಶ ಮಾಡುತ್ತಿದೆ. ಜೊತೆಗೆ ಸಾಕು ಪ್ರಾಣಿಗಳನ್ನು ಕೊಂದು ಹಾಕುತ್ತಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಅನಾಹುತವಾಗುವ ಮುನ್ನ ಕಾಡಾನೆಯನ್ನು ಸೆರೆಹಿಡಿದು ಬೇರೆ ಕಡೆ ಸ್ಥಳಾಂತರ ಮಾಡುವಂತೆ ಕರ್ನಾಟಕ ರಾಜ್ಯ ರೈತ ಸಂಘದ ಹನೂರು ತಾಲೂಕು ಘಟಕದ ಅಧ್ಯಕ್ಷ ಅಮ್ಜದ್ ಖಾನ್ ಒತ್ತಾಯಿಸಿದ್ದಾರೆ.
ಘಟನಾ ಸ್ಥಳಕ್ಕೆ ಉಪವಲಯ ಅರಣ್ಯ ಅಧಿಕಾರಿ ವಿನಾಯಕ ಹಾಗೂ ಅರಣ್ಯ ರಕ್ಷಕ ಭೀಮಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಬೆಂಗಳೂರು: ಸೂಕ್ತ ಖಾತೆ ಸಿಗದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರಕ್ಕೆ ಮುಜುಗರ ಸೃಷ್ಟಿಸಿದ್ದ ಸಚಿವ ರಾಮಲಿಂಗ ರೆಡ್ಡಿ…
ರಾಯ್ಪುರ: ಇತ್ತೀಚೆಗೆ ಆಫ್ರಿಕಾದ ಹಲವೆಡೆ ಎಬೋಲಾ ವೈರಸ್ ಭೀತಿ ಸೃಷ್ಟಿಯಾಗಿರುವ ಬೆನ್ನಲ್ಲೇ ಇದೀಗ ಛತ್ತೀಸ್ಗಢದಲ್ಲಿ ಮೂವರು ಆಫ್ರಿಕಾ ಪ್ರಜೆಗಳನ್ನು 21…
ಭಾರತೀನಗರ: ಇಲ್ಲಿಗೆ ಸಮೀಪದ ಬೊಮ್ಮನದೊಡ್ಡಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮೂಡಿದೆ. ಗುರುದೇವರಹಳ್ಳಿ ಗ್ರಾಮದ ಚೇತನ್ಮಾದೇಗೌಡ ಎಂಬವರು ಬೊಮ್ಮನದೊಡ್ಡಿ…
ತಿರುವನಂತಪುರಂ: ನೆರೆಯ ಕೇರಳ ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಹಲವೆಡೆ ಭಾರೀ ಮಳೆಯಾಗುತ್ತಿದೆ. ಮಲ್ಲಪುರಂ, ಕೋಯಿಕ್ಕೋಡ್, ವಯನಾಡು, ಕಣ್ಣೂರು ಮತ್ತು ಕಾಸರಗೋಡಿನಲ್ಲಿ…
ಚೆನ್ನೈ: ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಬಿಜೆಪಿಗೆ ಗುಡ್ಬೈ ಹೇಳಿದ ಬೆನ್ನಲ್ಲೇ ಮತ್ತೆರಡು ವಿಕೆಟ್ ಪತನಗೊಂಡಿದೆ. ರಾಜ್ಯ…
ಬೆಂಗಳೂರು: ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ವಾಪಸ್ ಪಡೆದು ಸಚಿವ ಸಂಪುಟದಲ್ಲಿ ಮುಂದುವರೆಯಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್…