ಚಾಮರಾಜನಗರ

ಜಮೀನಿನಲ್ಲಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ

ಹನೂರು: ಜಮೀನಿನಲ್ಲಿ ಕಾವಲು ಕಾಯುತ್ತಿದ್ದ ರೈತನೋರ್ವನ ಮೇಲೆ ಕಾಡಾನೆ ಏಕಾಏಕಿ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಗಾಯಗೊಂಡಿರುವ ಘಟನೆ ಜರುಗಿದೆ. ಹನೂರು ತಾಲ್ಲೂಕಿನ ಒಡೆಯರಪಾಳ್ಯ ಗ್ರಾಮದ ಬಸವರಾಜು(50) ಎಂಬುವರೇ ಗಾಯಗೊಂಡ ವ್ಯಕ್ತಿಯಾಗಿದ್ದಾರೆ.

ಬುಧವಾರ ರಾತ್ರಿ ಒಡೆಯರಪಾಳ್ಯ ಗ್ರಾಮದ ಬಸವರಾಜು ಜಮೀನಿಗೆ ಕಾಡಾನೆ ಲಗ್ಗೆ ಇಟ್ಟು ಮನೆಯ ಮೇಲ್ಚಾವಣಿ ಹಾನಿಗೊಳಿಸಿ ಜೋಳದ ಫಸಲನ್ನು ಮೇಯುತ್ತಿತ್ತು, ಇದನ್ನು ಗಮನಿಸಿದ ರೈತ ಆ ಸ್ಥಳಕ್ಕೆ ತೆರಳಿ ಕಾಡಾನೆ ಓಡಿಸಲು ತೆರಳಿದಾಗ ಆತನ ಮೇಲೆ ಆನೆ ಏಕಾಏಕಿ ದಾಳಿ ನಡೆಸಿದೆ. ಈ ವೇಳೆ ಪಾರಾಗಲು ಯತ್ನಿಸಿದ ವೇಳೆ ಬಲಗೈ ಪೆಟ್ಟಾಗಿದೆ. ಕುಟುಂಬಸ್ಥರು ಹನೂರಿನ ಸರಕಾರಿ ಆಸ್ಪತ್ರೆಗೆ ಚಿಕಿತ್ಸಗೆ ಆಗಮಿಸಿದಾಗ ಅದೇ ಮಾರ್ಗದಲ್ಲಿ ಮಹದೇಶ್ವರಬೆಟ್ಟದ ನಡೆಯುತ್ತಿರುವ ಸಚಿವ ಸಂಪುಟ ಸಭೆಗೆ ತೆರಳುತ್ತಿದ್ದ ಅರಣ್ಯ ಸಚಿವ ಈಶ್ವರ ಖಂಡ್ರೆರವರು ಆತನ ಆರೋಗ್ಯ ವಿಚಾರಿಸಿದ್ದಾರೆ.

ಈ ವೇಳೆ ಜಮಾಯಿಸಿದ ರೈತರು ಹನೂರು ತಾಲೂಕಿನ ಕಾಡಂಚಿನ ಗ್ರಾಮಗಳಲ್ಲಿ ನಿರಂತರವಾಗಿ ಕಾಡುಪ್ರಾಣಿಗಳ ಹಾವಳಿ ನಡೆಯುತ್ತಿದೆ, ಇದರಿಂದ ಬೆಳೆ ಹಾಗೂ ಸಾಕು ಪ್ರಾಣಿಗಳನ್ನು ಸಂರಕ್ಷಣೆ ಮಾಡಿಕೊಳ್ಳಲು ತೊಂದರೆಯಾಗುತ್ತಿದೆ. ತಾವುಗಳು ಕಾಡು ಪ್ರಾಣಿಗಳ ಹಾವಳಿಗೆ ಶಾಶ್ವತ ಕ್ರಮ ವಹಿಸಬೇಕು. ಕಾಡು ಪ್ರಾಣಿಗಳಿಂದ ಬೆಳೆ ನಷ್ಟವಾದಾಗ ಹೆಚ್ಚಿನ ಪರಿಹಾರ ನೀಡಬೇಕು ಎಂದು ಮನವಿ ಮಾಡಿದರು.

ಈ ವೇಳೆ ಸಚಿವರು ಪ್ರತಿಕ್ರಿಯಿಸಿ ಈ ಭಾಗದ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಭೆ ಕರೆದು ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಸೋಮಶೇಖರ್ ಸೇರಿದಂತೆ ಇನ್ನಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

3 hours ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

4 hours ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

4 hours ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

4 hours ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

4 hours ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

4 hours ago