ಚಾಮರಾಜನಗರ

ಮುಂದುವರೆದ ಕಾಡಾನೆ ಹಾವಳಿ : ಒಂಟಿ ಸಲಗ ದಾಳಿಗೆ ಓರ್ವ ಬಲಿ

ರಾಮನಗರ : ರಾಜ್ಯದಲ್ಲಿ ಮಾನವ ಮತ್ತು ಕಾಡು ಪ್ರಾಣಿಗಳ ನಡುವಿನ ಸಂಘರ್ಷ ಮುಂದುವರಿದಿದ್ದು, ಒಂಟಿ ಸಲಗ ದಾಳಿದ ಓರ್ವ ವ್ಯಕ್ತಿ ಬಲಿಯಾಗಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ‌ತಾಲೂಕಿನ ಚೀಲಂದವಾಡಿ ಗ್ರಾಮದಲ್ಲಿ ನಡೆದಿದೆ.

ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಕರಿಗುಂಡ(55) ಎಂಬವರು ಮೃತಪಟ್ಟಿದ್ದಾರೆ. ಸಂಗಮ ಅರಣ್ಯ ವಲಯ ಪ್ರದೇಶ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕರಿಗುಂಡ ಅವರ ಮೃತದೇಹವನ್ನು ಕನಕಪುರ ತಾಲೂಕು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಮೆಕ್ಕೆಜೋಳ ಬೆಳೆ ನಾಶಪಡಿಸಿದ ಒಂಟಿ ಸಲಗ
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬರಗಿ ಕಾಲೋನಿಯ ನಾಗಪಟ್ಟಣ ಬಳಿ ಕಾಡಾನೆ ಹಾವಳಿಯಿಂದ ಮಹೇಶ್ ಎಂಬುವರಿಗೆ ಸೇರಿದ ಬೆಳೆ ಹಾನಿಯಾಗಿದೆ. ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್​ಗೆ ಅಂಟಿಕೊಂಡಂತಿರುವ ನಾಗಪಟ್ಟಣ ಗ್ರಾಮಕ್ಕೆ ಲಗ್ಗೆ ಇಟ್ಟ ಒಂಟಿ ಸಲಗ ಮೆಕ್ಕೆಜೋಳ ಬೆಳೆಯನ್ನ ಸಂಪೂರ್ಣ ನಾಶ ಮಾಡಿ ತೆರಳಿದೆ.

ಕೆರೆಯಲ್ಲಿ ಕಂಡ ಕಾಡಾನೆಗಳ ಹಿಂಡು
ಮತ್ತೊಂದೆಡೆ ಹನೂರು ತಾಲೂಕಿನ ಪಿಜಿ ಪಾಳ್ಯದಲ್ಲಿ ಮರಿಗಳ ಜೊತೆ ಕಾಡಾನೆಗಳ ಹಿಂಡು ಕಾಣಿಸಿಕೊಂಡಿದೆ. ತನ್ನ ಮರಿಗಳ ಜೊತೆ ಕೆರೆಯ ನೀರಿಗಿಳಿದಿರುವ 10ಕ್ಕೂ ಹೆಚ್ಚು ಆನೆಗಳು, ಗಂಟಗಟ್ಟಲೆ ಕೆರೆಯಲ್ಲೆ ರಿಲ್ಯಾಕ್ಸ್ ಮಾಡಿರುವ ದೃಶ್ಯ ಕಂಡುಬಂದಿದೆ. ಬಿಸಿಲ ಧಗೆಗೆ ಕಾಡು ಪ್ರಾಣಿಗಳೂ ತತ್ತರಿಸುತ್ತಿದ್ದು, ಚಾಮರಾಜನಗರ ಜಿಲ್ಲೆಯಲ್ಲಿರುವ 36ರಿಂದ 37 ಡಿಗ್ರಿ ಸೆಲ್ಸಿಯಸ್​​​ನಷ್ಟು ತಾಪಮಾನದಿಂದ ರಕ್ಷಣೆ ಪಡೆಯಲು ನೀರಿನ ಮೂಲಗಳತ್ತ ಹೆಜ್ಜೆ ಹಾಕುತ್ತಿರೋದು ಕಂಡುಬಂದಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

9 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

9 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

9 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

9 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

9 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

9 hours ago