ಹನೂರು: ಬಿಸಿಲ ಬೇಗೆಗೆ ಕಾಡಾನೆ ಹಿಂಡು ರಸ್ತೆಬದಿಯ ಹಳ್ಳದಲ್ಲೇ ರಿಲ್ಯಾಕ್ಸ್ಗೆ ಜಾರಿದ ಘಟನೆ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಮಾರ್ಗ ಮಧ್ಯದ ವಡಕೆಹಳ್ಳ ರಸ್ತೆಯಲ್ಲಿ ನಡೆದಿದೆ.
ಬಿಸಿಲ ಬೇಗೆಗೆ ತತ್ತರಿಸಿದ ಆನೆಗಳ ಹಿಂಡು ರಸ್ತೆಬದಿಯ ಹಳ್ಳದಲ್ಲೇ ಮಿಂದು, ದಣಿವಾರಿಸಿಕೊಂಡು ರಿಲ್ಯಾಕ್ಸ್ ಗೆ ಜಾರಿದ್ದವು. ರಸ್ತೆಬದಿಯೇ ಆನೆಗಳ ಹಿಂಡು ಕಂಡ ವಾಹನ ಸವಾರರು ಹೌಹಾರಿದರು.
ರಿಲಾಕ್ಸ್ ಬಳಿಕ ಗಜಪಡೆಯು ರಸ್ತೆ ದಾಟಿದ್ದರಿಂದ ಕೆಲ ಕ್ಷಣ ವಾಹನ ಸವಾರರಿಗೆ ಆತಂಕ ಸೃಷ್ಟಿಯಾಗಿತ್ತು.
ಇತ್ತೀಚಿನ ದಿನಗಳಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಹಾಗೆಯೇ, ಈ ಮಾರ್ಗವು ಅಂತರರಾಜ್ಯಕ್ಕೆ ಸೇರಿಕೊಂಡಿರುವುದರಿಂದ ಅತಿ ಹೆಚ್ಚು ವಾಹನಗಳು ಸಂಚರಿಸುತ್ತಿದ್ದು, ಅರಣ್ಯ ಇಲಾಖೆಯ ಸಿಬ್ಬಂದಿ ನಿಗಾ ಇಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಇನ್ನು ಅರಣ್ಯ ವ್ಯಾಪ್ತಿಯಲ್ಲಿರುವ ಕೆರೆಕಟ್ಟೆಗಳು ಬೇಸಿಗೆಯಾದ್ದರಿಂದ ಖಾಲಿಯಾಗಿದ್ದು ಸಂತೆಖಾನೆ ಸಮೀಪ ಚೆಕ್ ಡ್ಯಾಂ ನಿರ್ಮಾಣ ಮಾಡಿರುವುದರಿಂದ ನೀರು ಸಂಗ್ರಹವಾಗಿದೆ. ಈ ಹಿನ್ನೆಲೆ ಆನೆಗಳು ನೀರು ಕುಡಿಯಲು ಹಾಗೂ ಬಿಸಿಲಿನ ಬೇಗೆ ತಡೆಯಲು ತನ್ನ ಮರಿಗಳೊಂದಿಗೆ ಜಲಕ್ರೀಡೆಯಲ್ಲಿ ತೊಡಗಿಸಿಕೊಂಡಿವೆ.
ಕಾಂತಾರ ಚಾಪ್ಟರ್ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯ ಹಾಗೂ ಗುಡುಗು ಸಹಿತ ಮಳೆಯ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ…
ಬೆಂಗಳೂರು: ಕಳೆದ ಮೂರು ದಿನಗಳಿಂದ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇಂದು ಸಂಜೆಯ ವೇಳೆಗೆ ಕೆಲ ಜಿಲ್ಲೆಗಳಲ್ಲಿ ಭಾರೀ ಭಾರೀ…
ಟೆಹರಾನ್: ಇರಾನ್ ಮೇಲೆ ಯುದ್ಧ ಆರಂಭವಾಗಿ ಸುಮಾರು 20 ದಿನಗಳು ಕಳೆಯುತ್ತಿರುವ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳ ಕೊಲೆ ಮತ್ತು ಅಮೇರಿಕಾ…
ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…
ಬೆಂಗಳೂರು: ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…