ಹನೂರು: ಬಿಸಿಲ ಬೇಗೆಗೆ ಕಾಡಾನೆ ಹಿಂಡು ರಸ್ತೆಬದಿಯ ಹಳ್ಳದಲ್ಲೇ ರಿಲ್ಯಾಕ್ಸ್ಗೆ ಜಾರಿದ ಘಟನೆ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಮಾರ್ಗ ಮಧ್ಯದ ವಡಕೆಹಳ್ಳ ರಸ್ತೆಯಲ್ಲಿ ನಡೆದಿದೆ.
ಬಿಸಿಲ ಬೇಗೆಗೆ ತತ್ತರಿಸಿದ ಆನೆಗಳ ಹಿಂಡು ರಸ್ತೆಬದಿಯ ಹಳ್ಳದಲ್ಲೇ ಮಿಂದು, ದಣಿವಾರಿಸಿಕೊಂಡು ರಿಲ್ಯಾಕ್ಸ್ ಗೆ ಜಾರಿದ್ದವು. ರಸ್ತೆಬದಿಯೇ ಆನೆಗಳ ಹಿಂಡು ಕಂಡ ವಾಹನ ಸವಾರರು ಹೌಹಾರಿದರು.
ರಿಲಾಕ್ಸ್ ಬಳಿಕ ಗಜಪಡೆಯು ರಸ್ತೆ ದಾಟಿದ್ದರಿಂದ ಕೆಲ ಕ್ಷಣ ವಾಹನ ಸವಾರರಿಗೆ ಆತಂಕ ಸೃಷ್ಟಿಯಾಗಿತ್ತು.
ಇತ್ತೀಚಿನ ದಿನಗಳಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಹಾಗೆಯೇ, ಈ ಮಾರ್ಗವು ಅಂತರರಾಜ್ಯಕ್ಕೆ ಸೇರಿಕೊಂಡಿರುವುದರಿಂದ ಅತಿ ಹೆಚ್ಚು ವಾಹನಗಳು ಸಂಚರಿಸುತ್ತಿದ್ದು, ಅರಣ್ಯ ಇಲಾಖೆಯ ಸಿಬ್ಬಂದಿ ನಿಗಾ ಇಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಇನ್ನು ಅರಣ್ಯ ವ್ಯಾಪ್ತಿಯಲ್ಲಿರುವ ಕೆರೆಕಟ್ಟೆಗಳು ಬೇಸಿಗೆಯಾದ್ದರಿಂದ ಖಾಲಿಯಾಗಿದ್ದು ಸಂತೆಖಾನೆ ಸಮೀಪ ಚೆಕ್ ಡ್ಯಾಂ ನಿರ್ಮಾಣ ಮಾಡಿರುವುದರಿಂದ ನೀರು ಸಂಗ್ರಹವಾಗಿದೆ. ಈ ಹಿನ್ನೆಲೆ ಆನೆಗಳು ನೀರು ಕುಡಿಯಲು ಹಾಗೂ ಬಿಸಿಲಿನ ಬೇಗೆ ತಡೆಯಲು ತನ್ನ ಮರಿಗಳೊಂದಿಗೆ ಜಲಕ್ರೀಡೆಯಲ್ಲಿ ತೊಡಗಿಸಿಕೊಂಡಿವೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…